AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ
ಕೆ ಕವಿತಾImage Credit source: NDTV
ನಯನಾ ರಾಜೀವ್
|

Updated on:Apr 08, 2024 | 10:53 AM

Share

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.

ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ತನ್ನ ಮೊಬೈಲ್‌ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.

ಮತ್ತಷ್ಟು ಓದಿ: ‘ಕೆ ಕವಿತಾ ಎಎಪಿ ನಾಯಕರಿಗೆ ₹100 ಕೋಟಿ ಕೊಟ್ಟಿದ್ದಾರೆ’: ಜಾರಿ ನಿರ್ದೇಶನಾಲಯ

ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಇಡಿ ವಕೀಲರು ಪ್ರತಿಪಾದಿಸಿದ್ದಾರೆ.

ಕವಿತಾ ಅವರ ಮಗನ 12 ಪರೀಕ್ಷೆಗಳಲ್ಲಿ 7 ಪರೀಕ್ಷೆಗಳು ಈಗಾಗಲೇ ಮುಗಿದಿವೆ ಎಂದು ಹೇಳಿದರು. ಅವನು ಒಬ್ಬಂಟಿಯಲ್ಲ, ಏಕೆಂದರೆ ಅವನ ತಂದೆ ಮತ್ತು ಅಣ್ಣ ಸಹ ಅವನೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Mon, 8 April 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ