AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್​​ ತೆರೆಯದಕ್ಕೆ ಮಂದಮರ್ರಿ ಟೋಲ್​​​ ಪ್ಲಾಜಾ ಸಿಬ್ಬಂದಿ ಮೇಲೆ ಬಿಆರ್​​ಎಸ್​​ ಶಾಸಕ ದುರ್ಗಂ ಚಿನ್ನಯ್ಯ ಹಲ್ಲೆ

ವರದಿಗಳ ಪ್ರಕಾರ, ಘಟನೆ ನಿನ್ನೆ (ಮಂಗಳವಾರ) ರಾತ್ರಿ ನಡೆದಿದೆ. ವಿಡಿಯೊದಲ್ಲಿ, ಟೋಲ್ ಪ್ಲಾಜಾ ಉದ್ಯೋಗಿ ಮೇಲೆ ರೇಗಾಡದಂತೆ ನಿಯಂತ್ರಿಸಲು ಸಿಬ್ಬಂದಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಗೇಟ್​​ ತೆರೆಯದಕ್ಕೆ ಮಂದಮರ್ರಿ ಟೋಲ್​​​ ಪ್ಲಾಜಾ ಸಿಬ್ಬಂದಿ ಮೇಲೆ ಬಿಆರ್​​ಎಸ್​​ ಶಾಸಕ ದುರ್ಗಂ ಚಿನ್ನಯ್ಯ ಹಲ್ಲೆ
ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ಶಾಸಕ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 04, 2023 | 1:47 PM

Share

ಮಂದಮರ್ರಿ: ಮಂದಮರ್ರಿ (Mandamarri)ಟೋಲ್ ಬೂತ್​​ನಲ್ಲಿ ಭಾರತ್ ರಾಷ್ಟ್ರ ಸಮಿತಿ (Bharat Rashtra Samithi) ಶಾಸಕ ದುರ್ಗಂ ಚಿನ್ನಯ್ಯ(Durgam Chinnaiah) ರೇಗಾಡಿ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ವಿಡಿಯೊದಲ್ಲಿ ಚಿನ್ನಯ್ಯ ಕಾರಿಗೆ ಗೇಟ್ ತೆರೆಯದ ಕಾರಣಕ್ಕೆ ಟೋಲ್ ಬೂತ್ ಅಟೆಂಡರ್ ಮೇಲೆ ಹಲ್ಲೆ ನಡೆಸಿರುವುದು ಕಂಡುಬಂದಿದೆ. ದುರ್ಗಂ ಚಿನ್ನಯ್ಯ ತೆಲಂಗಾಣದ ಬೆಳ್ಳಂಪಲ್ಲೆ ಶಾಸಕರಾಗಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಘಟನೆ ನಿನ್ನೆ (ಮಂಗಳವಾರ) ರಾತ್ರಿ ನಡೆದಿದೆ. ವಿಡಿಯೊದಲ್ಲಿ, ಟೋಲ್ ಪ್ಲಾಜಾ ಉದ್ಯೋಗಿ ಮೇಲೆ ರೇಗಾಡದಂತೆ ನಿಯಂತ್ರಿಸಲು ಸಿಬ್ಬಂದಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಅಷ್ಟೊತ್ತರಲ್ಲಿ ಶಾಸಕ ವ್ಯಕ್ತಿಗೆ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಸಂತ್ರಸ್ತ ಕಾರ್ಮಿಕನಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಟೋಲ್ ಬೂತ್‌ನ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಕಾರ್ಮಿಕರು ಹೇಳಿದ್ದಾರೆ. ಈ ವಿಡಿಯೊವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇವೆ, ಟೋಲ್ ಪ್ಲಾಜಾ ಸಿಬ್ಬಂದಿಯಿಂದ ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ, ಆದರೆ ನಾವು ಈಗ ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Wed, 4 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ