AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಆರ್​​ಎಸ್​ ಶಾಸಕನ ಕಚೇರಿ ಮೇಲೆ ಬಿಜೆಪಿಗರ ದಾಳಿ: ಪೀಠೋಪಕರಣ ಧ್ವಂಸ, ಕಾರಿನ ಗಾಜು ಪುಡಿಗೈದು ಅಟ್ಟಹಾಸ

ಬಿಆರ್‌ಎಸ್ ಶಾಸಕ ಗಂಗುಲ ಕಮಲಾಕರ್ ಅವರ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕೇಂದ್ರ ಸಚಿವ ಬಂಡಿ ಸಂಜಯ್ ವಿರುದ್ಧದ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆಯೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಕಚೇರಿಯ ಪೀಠೋಪಕರಣ ಹಾಗೂ ಕಾರಿಗೆ ಹಾನಿ ಮಾಡಲಾಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್ ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಿಆರ್​​ಎಸ್​ ಶಾಸಕನ ಕಚೇರಿ ಮೇಲೆ ಬಿಜೆಪಿಗರ ದಾಳಿ: ಪೀಠೋಪಕರಣ ಧ್ವಂಸ, ಕಾರಿನ ಗಾಜು ಪುಡಿಗೈದು ಅಟ್ಟಹಾಸ
ಕಾರಿನ ಮೇಲೆ ದಾಳಿ
ಪ್ರಸನ್ನ ಹೆಗಡೆ
|

Updated on:May 07, 2026 | 1:36 PM

Share

ಹೈದರಾಬಾದ್​​, ಮೇ 07: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್​​ ಕುಮಾರ್​​ ಅವರ ವಿರುದ್ಧ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ ಗಂಗುಲ ಕಮಲಾಕರ್ ಅವರ ಕ್ಯಾಂಪ್​​​ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ ನಡೆಸಿದ್ದಾರೆ. ಬಿಆರ್​ಎಸ್ ಶಾಸಕ ಕೌಶಿಕ್ ರೆಡ್ಡಿ ಒಳಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಬಿಜೆಪಿ ಬೆಂಬಲಿತರು ಧ್ವಂಸಗೊಳಿಸಿದ್ದು, ಕೂಡಲೇ ಲಘು ಲಾಠಿ ಪ್ರಹಾರ ನಡೆಸಿ ಪೊಲೀಸರು ಗುಂಪು ಚದುರಿಸಿದ ಪ್ರಸಂಗ ನಡೆದಿದೆ.

ಬಿಜೆಪಿಗರ ಆಕ್ರೋಶಕ್ಕೆ ಕಾರಣ ಏನು?

ಕೆಟಿಆರ್ ಡ್ರಗ್ ಟೆಸ್ಟ್ ಮಾಡಿಸಬೇಕು ಎಂಬ ಬಂಡಿ ಸಂಜಯ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಕೌಶಿಕ್ ರೆಡ್ಡಿ, ಬಂಡಿ ಸಂಜಯ್ ಕೂಡ ಡ್ರಗ್ ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಸವಾಲು ಹಾಕಿದ್ದರು. ಅಲ್ಲದೆ, ಮಾದಕ ವಸ್ತು ಮಿಶ್ರಿತ ತಂಬಾಕು ಸೇವನೆಯ ಪರಿಣಾಮದಿಂದಲೇ ಬಂಡಿ ಸಂಜಯ್ ಅವರ ಕೂದಲು ಉದುರಿದೆ ಎಂದು ಟೀಕಿಸಿದ್ದರು. ಈ ಹೇಳಿಕೆ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ; ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ

ಘಟನೆಗೆ ಬಿಆರ್​​ಎಸ್​​ ಕಿಡಿ

ಇನ್ನು ಘಟನೆ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಬಿಆರ್​​ಎಸ್​​ ಕಿಡಿ ಕಾರಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಸ್ವತಃ ದಾಳಿಗೆ ಸಂಚು ರೂಪಿಸಿರುವುದು ಅತ್ಯಂತ ಖಂಡನೀಯ. ಬಿಜೆಪಿ ಗೂಂಡಾಗಳು ಕರೀಂನಗರ ಶಾಸಕರ ಕ್ಯಾಂಪ್ ಕಚೇರಿಯ ಮೇಲೆ ದಾಳಿ ನಡೆಸಿ ಫೋಠೋಪಕರಣಗಳು, ಬಾಗಿಲುಗಳು ಹಾಗೂ ಕಾರನ್ನು ಧ್ವಂಸಗೊಳಿಸಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಲ್ಲಿರುವ ಬಂಡಿ ಸಂಜಯ್ ಸ್ವತಃ ಬಿಜೆಪಿ ಕಾರ್ಯಕರ್ತರನ್ನು ಪ್ರೇರೇಪಿಸಿ ಈ ದಾಳಿ ನಡೆಸಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಸರಿಯಾದ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:35 pm, Thu, 7 May 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!