AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ ನೂತನ ಸಿಎಂ ಆಯ್ಕೆ ವೀಕ್ಷಕರಾಗಿ ಬಿಎಸ್​ವೈ ನೇಮಕ: ಅಹಮದಾಬಾದ್‌ಗೆ ಹೊರಟ ಯಡಿಯೂರಪ್ಪ

ಗುಜರಾತ್​ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನೆಲೆ ಹೈ ಕಮಾಂಡ್​​ ಮುಖ್ಯಮಂತ್ರಿ ಆಯ್ಕೆಗೆ ಶಾಸಕಾಂಗ ಪಕ್ಷದ ವೀಕ್ಷಕರ ಸಮಿತಿ ರಚಿಸಿದೆ.

ಗುಜರಾತ್‌ ನೂತನ ಸಿಎಂ ಆಯ್ಕೆ ವೀಕ್ಷಕರಾಗಿ ಬಿಎಸ್​ವೈ ನೇಮಕ: ಅಹಮದಾಬಾದ್‌ಗೆ ಹೊರಟ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Dec 09, 2022 | 7:01 PM

Share

ಬೆಂಗಳೂರು/ ನವದೆಹಲಿ: ಪ್ರಧಾನಿ ಮೋದಿ (Narendra Modi) ತವರು ರಾಜ್ಯ ಗುಜರಾತ್ (Gujarat)​ ವಿಧಾನಸಭೆ ಬಿಜೆಪಿ ಹಿಂದಿನ ಎಲ್ಲ ದಾಖಲೆಗಳನ್ನು ಅಳಿಸಿ ಅಭೂತಪೂರ್ವ ಗೆಲವು ಸಾಧಿಸಿದೆ. ಈಗ ಸರ್ಕಾರ ರಚಿಸಲು ತುದಿಗಾಲಿನಲ್ಲಿ ನಿಂತಿದೆ. ಈ ಸಂಬಂಧ ಬಿಜೆಪಿ ನಾಳೆ (ಡಿ.10) (BJP) ಶಾಸಕಾಂಗ  ಸಭೆ ನಡೆಯಲಿದೆ. ಈ ಸಭೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) , ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ (Arjun Munda) ಅವರನ್ನು ವೀಕ್ಷಕರನ್ನಾಗಿ ಬಿಜೆಪಿ ಹೈ ಕಮಾಂಡರ್​ ನೇಮಿಸಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಯಡಿಯೂರಪ್ಪ ಗುಜರಾತ್‌ ನೂತನ ಸಿಎಂ ಆಯ್ಕೆ ಸಂಬಂಧ ಸಮಿತಿ ರಚಿಸಿದ್ದಾರೆ. ರಾಜನಾಥ್‌, ಅರ್ಜುನ್ ಮುಂಡಾ, ನನ್ನನ್ನು ಸೇರಿಸಿ ಸಮಿತಿ ರಚನೆ ಮಾಡಿದ್ದಾರೆ. ಹೀಗಾಗಿ ಅಹಮದಾಬಾದ್‌ಗೆ ಬರುವಂತೆ ನನಗೆ ದೂರವಾಣಿ ಕರೆ ಬಂದಿತ್ತು. ಈ ಹಿನ್ನೆಲೆ ನಾನು ಅಹಮದಾಬಾದ್‌ಗೆ ಹೊರಟಿದ್ದೇನೆ. ನಾಳೆ ಸಭೆ ಮುಗಿಸಿ ನಾಡಿದ್ದು ಬೆಂಗಳೂರಿಗೆ ವಾಪಸ್ ಬರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿ ದಾಖಲೆಯ ಗೆಲುವು: ವಿಮರ್ಶೆ, ವಿರೋಧ ಎಲ್ಲವನ್ನೂ ಮೀರಿ ನಿಂತಿದೆ ಮೋದಿ ಸಾಧನೆ ಎಂದ ವಿದೇಶಿ ಮಾಧ್ಯಮಗಳು

ಗಡಿ ವಿವಾದದ ಬಗ್ಗೆ ವರಿಷ್ಠರ ಜೊತೆ ಚರ್ಚಿಸುತ್ತೇನೆ

ಬೆಳಗಾವಿ ಗಡಿ ವಿವಾದ ಸಂಬಂಧ ಅಮಿತ್ ಶಾಗೆ ಮಹಾರಾಷ್ಟ್ರ ನಾಯಕರು ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಗಡಿ ವಿವಾದದ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಚರ್ಚಿಸುತ್ತೇನೆ. ನಾಡಿನ ನೆಲ, ಜಲ, ಗಡಿ, ಭಾಷೆ ವಿಚಾರದಲ್ಲಿ ರಾಜಿ ಆಗುವುದಿಲ್ಲ. ಯಾರು ಯಾರಿಗೆ ದೂರು ನೀಡಿದರೂ ನಮಗೆ ಸಂಬಂಧ ಇಲ್ಲ. ನಮ್ಮ ರಾಜ್ಯದ ಹಿತವನ್ನು ಕಾಪಾಡುವುದು ಮುಖ್ಯ. ಈ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆಂದು ಹೇಳಿದರು.

ಇದನ್ನೂ ಓದಿ: ಮೋದಿ ತವರಿನಲ್ಲಿ ಬಿಜೆಪಿ ಅಧಿಕಾರ ಮುಂದುವರಿಕೆ; ಗುಜರಾತ್ ಮಾಡೆಲ್​​ನಿಂದ ಕಲಿಯಬೇಕಾದ ಪಾಠಗಳಿವು

ಮೀಸಲಾತಿಗಾಗಿ ಹಲವು ಸಮುದಾಯಗಳು ಬೇಡಿಕೆ ಇಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಮೀಸಲಾತಿ ನೀಡಲು ಏನು ಸಾಧ್ಯವಿದೆಯೋ ಅದನ್ನೆಲ್ಲ ಮಾಡ್ತಿದ್ದೇವೆ. ಮುಂದಿನ ಚುನಾವಣೆಗೆ ಬಿಜೆಪಿ ಚೆನ್ನಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಭವಿಷ್ಯ ನುಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Fri, 9 December 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ