AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಭಾಗದಲ್ಲಿ ಮಧ್ಯರಾತ್ರಿ ಡ್ರೋಣ್​ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ

ಅಮೃತ್​ಸರ್​​ ವಲಯದಲ್ಲಿ ಅಕ್ಟೋಬರ್​ 19-20ರ ನಡುವಿನ ರಾತ್ರಿ ಇದೇ ತರಹದ ಡ್ರೋಣ್​ವೊಂದು ಪತ್ತೆಯಾಗಿತ್ತು. ಆಗಲೂ ಸಹ ಬಿಎಸ್​ಎಫ್​ ಸೈನಿಕರು ಅದರೆಡೆಗೆ ಗುಂಡಿನ ದಾಳಿ ನಡೆಸಿದ್ದರು.

ಗಡಿ ಭಾಗದಲ್ಲಿ ಮಧ್ಯರಾತ್ರಿ ಡ್ರೋಣ್​ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ
ಡ್ರೋಣ್​​ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 11:23 AM

Share

ಪಂಜಾಬ್​​​ನ ಅಮೃತ್​ಸರ್​​ನ ಭಾರತ-ಪಾಕಿಸ್ತಾನ ಗಡಿ (India-Pakistan Border)ಯಲ್ಲಿ ಇಂದು ಬೆಳಗ್ಗೆ ಡ್ರೋಣ್​​ವೊಂದು ಹಾರಾಟ ನಡೆಸಿತ್ತು. ಶಹ್​ಪುರ್​​ ಗಡಿಯ ಔಟ್​​ಪೋಸ್ಟ್​​​ ಬಳಿ ಮಧ್ಯರಾತ್ರಿ 12.30ರ ಹೊತ್ತಿಗೆ ಕಾಣಿಸಿಕೊಂಡ ಡ್ರೋಣ್​​ಗೆ ಗಡಿ ಭದ್ರತಾ ಪಡೆ (BSF) (BSF)ಯ 73ನೇ ಬೆಟಾಲಿಯನ್​​​ ಯೋಧರು ಗುಂಡು ಹಾರಿಸಿದ್ದಾರೆ. ಇವರು ಒಂದೇ ಸಮ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಡ್ರೋಣ್​ ಪಾಕಿಸ್ತಾನದತ್ತ ಹಾರಿಹೋಗಿದೆ.   

ಅಮೃತ್​ಸರ್​​ ವಲಯದಲ್ಲಿ ಅಕ್ಟೋಬರ್​ 19-20ರ ನಡುವಿನ ರಾತ್ರಿ ಇದೇ ತರಹದ ಡ್ರೋಣ್​ವೊಂದು ಪತ್ತೆಯಾಗಿತ್ತು. ಆಗಲೂ ಸಹ ಬಿಎಸ್​ಎಫ್​ ಸೈನಿಕರು ಅದರೆಡೆಗೆ ಗುಂಡಿನ ದಾಳಿ ನಡೆಸಿದ್ದರು. ಆ ಡ್ರೋಣ್​ ಹಾರಾಡಿದ ಜಾಗದಲ್ಲಿ ಪರಿಶೀಲನೆ ನಡೆಸಿದಾಗ ಅಲ್ಲಿ ಒಂದು ಕೆಜಿ ಹೆರೋಯಿನ್​ ಮತ್ತು ಅದಕ್ಕೆ ಸಿಕ್ಕಿಸಿಡಲಾಗಿದ್ದ ಕಬ್ಬಿಣದ ರಿಂಗ್​​ವೊಂದು ಪತ್ತೆಯಾಗಿತ್ತು. ಇತ್ತೀಚೆಗೆ ಗಡಿ ಭಾಗಗಳಲ್ಲಿ ಡ್ರೋಣ್​​ಗಳು ಪದೇಪದೆ ಹಾರಾಟ ನಡೆಸುತ್ತಿವೆ. ಮೊಟ್ಟ ಮೊದಲು ಜೂ.27ರಂದು ಜಮ್ಮುವಿನ ಭಾರತೀಯ ವಾಯುಪಡೆ ಸ್ಟೇಶನ್​​​ನಲ್ಲಿ ಡ್ರೋಣ್​ ದಾಳಿ ಆಯಿತು. ಎರಡು ಡ್ರೋಣ್​​​ಗಳು ಅಲ್ಲಿ ಬಾಂಬ್​ ಎಸೆದ ಪರಿಣಾಮ ಇಬ್ಬರು ಸಿಬ್ಬಂದಿಗೆ ಗಾಯವಾಗಿತ್ತು.  ಹಾಗೇ, ವಾಯುನೆಲೆಯ ಒಂದು ಭಾಗವೂ ಜಖಂಗೊಂಡಿತ್ತು.

ಇದೀಗ ಜಮ್ಮು-ಕಾಶ್ಮೀರ ಸೇರಿ ಗಡಿ ಭಾಗಗಳಲ್ಲಿ ಡ್ರೋಣ್​​ಗಳ ಹಾರಾಟ ಹೆಚ್ಚುತ್ತಿರುವುದರಿಂದ ಅವುಗಳ ಮೇಲೆ ಕಣ್ಣಿಡಲೆಂದೇ ಹೆಚ್ಚಿನ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶ್ರೀನಗರ ಮತ್ತು ಜಮ್ಮು ಏರ್​​ ಫೋರ್ಸ್​ ಸ್ಟೇಶನ್​​ಗಳಲ್ಲಿ ಕೂಡ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG)ಯನ್ನು ನಿಯೋಜಿಸಲಾಗಿದೆ. ಹೀಗೆ ಪಾಕಿಸ್ತಾನದಿಂದ ಬರುವ ಡ್ರೋಣಗಳು ಗಡಿ ಭಾಗಗಳಲ್ಲಿ ಉಗ್ರರಿಗೆ ಮಾದಕ ದ್ರವ್ಯ, ಮಾರಕ ಅಸ್ತ್ರಗಳ ಸರಬರಾಜು ಮಾಡುತ್ತಿರುವ ಬಗ್ಗೆಯೂ ವರದಿಯಾಗಿದೆ.

ಇದನ್ನೂ ಓದಿ: ಪುರಾಣ ಪ್ರಸಿದ್ಧ ಹಾಸನಾಂಬೆ ದರ್ಶನೋತ್ಸವ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

KL Rahul: ಮೆಗಾ ಹರಾಜಿಗೂ ಮುನ್ನ ಬಿಗ್ ಶಾಕ್: ಕೆಎಲ್ ರಾಹುಲ್ ಬಗ್ಗೆ ಪಂಜಾಬ್ ಕಿಂಗ್ಸ್​ನಿಂದ ಅಚ್ಚರಿ ಹೇಳಿಕೆ

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ