Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF: ಸಹೋದ್ಯೋಗಿಗಳ ಮೇಲೆ ಬಿಎಸ್​ಎಫ್ ಜವಾನನಿಂದ ಗುಂಡಿನ ದಾಳಿ; ಪ್ರಕರಣದಲ್ಲಿ 5 ಯೋಧರ ಸಾವು

Amritsar | Border Security Force: ಜವಾನನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಪ್ರಕರಣದಲ್ಲಿ ಜವಾನನೂ ಸೇರಿ ಐವರು ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

BSF: ಸಹೋದ್ಯೋಗಿಗಳ ಮೇಲೆ ಬಿಎಸ್​ಎಫ್ ಜವಾನನಿಂದ ಗುಂಡಿನ ದಾಳಿ; ಪ್ರಕರಣದಲ್ಲಿ 5 ಯೋಧರ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Mar 06, 2022 | 2:11 PM

ಅಮೃತಸರ: ಅಮೃತಸರದ ಖಾಸಾ ಹೆಡ್​ಕ್ವಾರ್ಟರ್ಸ್​ನಲ್ಲಿ ಭಾನುವಾರ ಜವಾನನೊಬ್ಬ ತನ್ನ ಕರ್ತವ್ಯದ ಗನ್​ನಿಂದ ಗುಂಡು ಹಾರಿಸಿದ್ದು, ಗಡಿ ಭದ್ರತಾ ಪಡೆಯ (BSF) ಒಟ್ಟು ಐವರು ಯೋಧರು ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸ್ ಮೂಲಗಳು, ‘ಅಮೃತಸರ- ಅಟ್ಟಾರಿ ರಸ್ತೆಯಲ್ಲಿರುವ ಹೆಡ್​ಕ್ವಾರ್ಟರ್ಸ್​ನಲ್ಲಿ ಆರೋಪಿಯು ಬೆಳಗ್ಗೆ 10.15ರ ಸುಮಾರಿಗೆ ಹಾಜರಿದ್ದ. ಅದೇ ಸಮಯದಲ್ಲಿ ಘಟನೆ ನಡೆದಿದೆ’ ಎಂದು ಮಾಹಿತಿ ನೀಡಿವೆ. ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ-ಅಮೃತಸರ ಗ್ರಾಮಾಂತರ) ದೀಪಕ್ ಹಿಲೋರಿ ಅವರು ಬಿಎಸ್‌ಎಫ್ ಅಧಿಕಾರಿಗಳಿಂದ ಐವರು ಯೋಧರ ಸಾವುನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಖಚಿತಪಡಿಸಿದ್ದಾರೆ. ಆರೋಪಿ, ಗುಂಡು ಹಾರಿಸಿದ ಯೋಧ ಕೂಡ ಈ ಪ್ರಕರಣದಲ್ಲಿ ಮೃತಪಟ್ಟಿದ್ದಾನೆ. ಬಲಿಯಾದವರನ್ನು ಗುರುತಿಸಲು ತಂಡಗಳು ಕೆಲಸ ಮಾಡುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಎಸ್​​ಎಫ್ ಮೂಲಗಳ ಪ್ರಕಾರ 144ನೇ ಬೆಟಾಲಿಯನ್​ನ ‘ಬಿ’ಕಾಯ್, ಕಾನ್​ಸ್ಟೇಬಲ್ ಆಗಿದ್ದ ಸೆಟ್ಟೆಪ್ಪ ಎಸ್​ಕೆ, ಸಹೋದ್ಯೋಗಿಗಳು ಹಾಗೂ ಒಆರ್​ಎಸ್​ ಬ್ಯಾರಕ್​ನಲ್ಲಿದ್ದವರ ಮೇಲೆ ಮೊದಲಿಗೆ ಗುಂಡು ಹಾರಿಸಲು ಆರಂಭಿಸಿದ್ದಾನೆ. 44 ಬೆಟಾಲಿಯನ್‌ನ ಕಮಾಂಡೆಂಟ್ ಆಗಿದ್ದ ಸತೀಶ್ ಮಿಶ್ರಾ ಅವರ ವಾಹನದ ಮೇಲೂ ಅವರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಅಧಿಕಾರಿ ಕಮಾಂಡೆಂಟ್ ಕೂಡ ಗಾಯಗೊಂಡಿದ್ದಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಗುಂಡಿನ ದಾಳಿಯಲ್ಲಿ 6 ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಅಮೃತಸರ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಐವರು ಬೆಳಿಗ್ಗೆ 11:00 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆರನೇ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಬಿಎಸ್​ಎಫ್ ತಿಳಿಸಿದೆ.

ಪ್ರಕರಣದ ಕುರಿತಂತೆ ಎಎನ್​ಐ ಟ್ವೀಟ್:

ಇದನ್ನೂ ಓದಿ:

ಹುಬ್ಬಳ್ಳಿಯಲ್ಲಿ ನೂತನ ಎಫ್​.ಎಸ್​.ಎಲ್ ಲ್ಯಾಬ್ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಈ ಜೋಡಿಯ ವಯಸ್ಸಿನ ಅಂತರ 53 ವರ್ಷ; ಈರ್ವರೂ ಮೊದಲ ಬಾರಿಗೆ ಭೇಟಿಯಾಗಿದ್ದು ಎಲ್ಲಿ ಗೊತ್ತಾ?

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ