AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF: ಸಹೋದ್ಯೋಗಿಗಳ ಮೇಲೆ ಬಿಎಸ್​ಎಫ್ ಜವಾನನಿಂದ ಗುಂಡಿನ ದಾಳಿ; ಪ್ರಕರಣದಲ್ಲಿ 5 ಯೋಧರ ಸಾವು

Amritsar | Border Security Force: ಜವಾನನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಪ್ರಕರಣದಲ್ಲಿ ಜವಾನನೂ ಸೇರಿ ಐವರು ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

BSF: ಸಹೋದ್ಯೋಗಿಗಳ ಮೇಲೆ ಬಿಎಸ್​ಎಫ್ ಜವಾನನಿಂದ ಗುಂಡಿನ ದಾಳಿ; ಪ್ರಕರಣದಲ್ಲಿ 5 ಯೋಧರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 06, 2022 | 2:11 PM

Share

ಅಮೃತಸರ: ಅಮೃತಸರದ ಖಾಸಾ ಹೆಡ್​ಕ್ವಾರ್ಟರ್ಸ್​ನಲ್ಲಿ ಭಾನುವಾರ ಜವಾನನೊಬ್ಬ ತನ್ನ ಕರ್ತವ್ಯದ ಗನ್​ನಿಂದ ಗುಂಡು ಹಾರಿಸಿದ್ದು, ಗಡಿ ಭದ್ರತಾ ಪಡೆಯ (BSF) ಒಟ್ಟು ಐವರು ಯೋಧರು ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸ್ ಮೂಲಗಳು, ‘ಅಮೃತಸರ- ಅಟ್ಟಾರಿ ರಸ್ತೆಯಲ್ಲಿರುವ ಹೆಡ್​ಕ್ವಾರ್ಟರ್ಸ್​ನಲ್ಲಿ ಆರೋಪಿಯು ಬೆಳಗ್ಗೆ 10.15ರ ಸುಮಾರಿಗೆ ಹಾಜರಿದ್ದ. ಅದೇ ಸಮಯದಲ್ಲಿ ಘಟನೆ ನಡೆದಿದೆ’ ಎಂದು ಮಾಹಿತಿ ನೀಡಿವೆ. ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ-ಅಮೃತಸರ ಗ್ರಾಮಾಂತರ) ದೀಪಕ್ ಹಿಲೋರಿ ಅವರು ಬಿಎಸ್‌ಎಫ್ ಅಧಿಕಾರಿಗಳಿಂದ ಐವರು ಯೋಧರ ಸಾವುನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಖಚಿತಪಡಿಸಿದ್ದಾರೆ. ಆರೋಪಿ, ಗುಂಡು ಹಾರಿಸಿದ ಯೋಧ ಕೂಡ ಈ ಪ್ರಕರಣದಲ್ಲಿ ಮೃತಪಟ್ಟಿದ್ದಾನೆ. ಬಲಿಯಾದವರನ್ನು ಗುರುತಿಸಲು ತಂಡಗಳು ಕೆಲಸ ಮಾಡುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಎಸ್​​ಎಫ್ ಮೂಲಗಳ ಪ್ರಕಾರ 144ನೇ ಬೆಟಾಲಿಯನ್​ನ ‘ಬಿ’ಕಾಯ್, ಕಾನ್​ಸ್ಟೇಬಲ್ ಆಗಿದ್ದ ಸೆಟ್ಟೆಪ್ಪ ಎಸ್​ಕೆ, ಸಹೋದ್ಯೋಗಿಗಳು ಹಾಗೂ ಒಆರ್​ಎಸ್​ ಬ್ಯಾರಕ್​ನಲ್ಲಿದ್ದವರ ಮೇಲೆ ಮೊದಲಿಗೆ ಗುಂಡು ಹಾರಿಸಲು ಆರಂಭಿಸಿದ್ದಾನೆ. 44 ಬೆಟಾಲಿಯನ್‌ನ ಕಮಾಂಡೆಂಟ್ ಆಗಿದ್ದ ಸತೀಶ್ ಮಿಶ್ರಾ ಅವರ ವಾಹನದ ಮೇಲೂ ಅವರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಅಧಿಕಾರಿ ಕಮಾಂಡೆಂಟ್ ಕೂಡ ಗಾಯಗೊಂಡಿದ್ದಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಗುಂಡಿನ ದಾಳಿಯಲ್ಲಿ 6 ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಅಮೃತಸರ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಐವರು ಬೆಳಿಗ್ಗೆ 11:00 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆರನೇ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಬಿಎಸ್​ಎಫ್ ತಿಳಿಸಿದೆ.

ಪ್ರಕರಣದ ಕುರಿತಂತೆ ಎಎನ್​ಐ ಟ್ವೀಟ್:

ಇದನ್ನೂ ಓದಿ:

ಹುಬ್ಬಳ್ಳಿಯಲ್ಲಿ ನೂತನ ಎಫ್​.ಎಸ್​.ಎಲ್ ಲ್ಯಾಬ್ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಈ ಜೋಡಿಯ ವಯಸ್ಸಿನ ಅಂತರ 53 ವರ್ಷ; ಈರ್ವರೂ ಮೊದಲ ಬಾರಿಗೆ ಭೇಟಿಯಾಗಿದ್ದು ಎಲ್ಲಿ ಗೊತ್ತಾ?

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ