AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?
ವಶಪಡಿಸಿಕೊಂಡ ನಗದು
TV9 Web
| Edited By: |

Updated on:Jan 17, 2022 | 1:28 PM

Share

ಹರ್ಯಾಣದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರಿಂದ 14 ಕೋಟಿ ರೂಪಾಯಿ ನಗದು, 1 ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಏಳು ಐಷಾರಾಮಿ ಕಾರುಗಳು (ಬಿಎಂಡಬ್ಲ್ಯೂ, ಜೀಪ್​, ಮರ್ಸಿಡಸ್​ ಒಳಗೊಂಡು) ಸೇರಿ ಅಪಾರಪ್ರಮಾಣದ ಸಂಪತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುರ್​ಗಾಂವ್​ನ ಮನೇಸರ್​ ಎಂಬಲ್ಲಿರುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್​ ಪ್ರಧಾನಕಚೇರಿಯಲ್ಲಿ ನಿಯೋಜಿಸಲ್ಪಟ್ಟಿದ್ದ, ಗಡಿ ಭದ್ರತಾ ಪಡೆಯ ಡೆಪ್ಯೂಟಿ ಕಮಾಂಡಂಟ್​ ಪ್ರವೀಣ್​ ಯಾದವ್​ ಎಂಬುವರಿಂದ ಇಷ್ಟೊಂದು ಅಕ್ರಮ ಆಸ್ತಿ ವಶಪಡಿಸಿಕೊಳ್ಳಲಾಗಿದ್ದು, ಈ ಅಧಿಕಾರಿ ತಾನೊಬ್ಬ ಐಪಿಎಸ್ ಅಧಿಕಾರಿ ಎಂಬಂತೆ ಪೋಸ್​ಕೊಟ್ಟು ಜನರಿಗೆ 125 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದ್ದು, ಸದ್ಯ ಅವರನ್ನು ಬಂಧಿಸಲಾಗಿದೆ. 

ಕೇವಲ ಪ್ರವೀಣ್​ ಯಾದವ್​​ನನ್ನಷ್ಟೇ ಅಲ್ಲ, ಅವರ ಪತ್ನಿ ಮಮತಾ ಯಾದವ್​, ಸಹೋದರಿ ರಿತು ಮತ್ತು ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ. ಯಾದವ್​ ತಾನೊಬ್ಬ ಐಪಿಎಸ್​ ಅಧಿಕಾರಿ ಎಂದು ಜನರನ್ನು ನಂಬಿಸಿದ್ದ. ನ್ಯಾಷನಲ್​ ಸೆಕ್ಯೂರಿಟಿ ಗಾರ್ಡ್​ (NSG)ನಲ್ಲಿ ನಿರ್ಮಾಣ ಗುತ್ತಿಗೆ ಕೊಡಿಸುವುದಾಗಿ ಹೇಳಿ ಅನೇಕರಿಂದ ದುಡ್ಡು ಪಡೆದಿದ್ದ. ಹೀಗೆ ಮಾಡಿಯೇ ಕೋಟ್ಯಂತರ ರೂಪಾಯಿ ಗಳಿಸಿದ್ದ ಯಾದವ್​, ಅದನ್ನೆಲ್ಲ ಎನ್​ಸಿಜಿ ಹೆಸರಲ್ಲಿಯೇ ತೆರೆಯಲಾಗಿದ್ದ ನಕಲಿ ಬ್ಯಾಂಕ್​ ಖಾತೆಗೆ ವರ್ಗಾಯಿಸಿದ್ದ. ಯಾದವ್​ ಸಹೋದರಿ ರಿತು ಯಾದವ್​ ಆ್ಯಕ್ಸಿಸ್​ ಬ್ಯಾಂಕ್​​ನಲ್ಲಿ ಮ್ಯಾನೇಜರ್​ ಆಗಿದ್ದು, ಆಕೆಯೇ ಅಕೌಂಟ್ ತೆರೆದು, ಅವ್ಯವಹಾರಕ್ಕೆ ಸಹಾಯ ಮಾಡಿದ್ದರು ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ. ಯಾದವ್​ರನ್ನು ಇತ್ತೀಚೆಗಷ್ಟೇ ಅಗರ್ತಲಾಕ್ಕೆ ಪೋಸ್ಟಿಂಗ್ ಮಾಡಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಜನರನ್ನು ವಂಚಿಸಿ ಭರ್ಜರಿ ಹಣ ಮಾಡಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Published On - 1:28 pm, Mon, 17 January 22

Follow Us
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ