AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?
ವಶಪಡಿಸಿಕೊಂಡ ನಗದು
TV9 Web
| Updated By: Lakshmi Hegde|

Updated on:Jan 17, 2022 | 1:28 PM

Share

ಹರ್ಯಾಣದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರಿಂದ 14 ಕೋಟಿ ರೂಪಾಯಿ ನಗದು, 1 ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಏಳು ಐಷಾರಾಮಿ ಕಾರುಗಳು (ಬಿಎಂಡಬ್ಲ್ಯೂ, ಜೀಪ್​, ಮರ್ಸಿಡಸ್​ ಒಳಗೊಂಡು) ಸೇರಿ ಅಪಾರಪ್ರಮಾಣದ ಸಂಪತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುರ್​ಗಾಂವ್​ನ ಮನೇಸರ್​ ಎಂಬಲ್ಲಿರುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್​ ಪ್ರಧಾನಕಚೇರಿಯಲ್ಲಿ ನಿಯೋಜಿಸಲ್ಪಟ್ಟಿದ್ದ, ಗಡಿ ಭದ್ರತಾ ಪಡೆಯ ಡೆಪ್ಯೂಟಿ ಕಮಾಂಡಂಟ್​ ಪ್ರವೀಣ್​ ಯಾದವ್​ ಎಂಬುವರಿಂದ ಇಷ್ಟೊಂದು ಅಕ್ರಮ ಆಸ್ತಿ ವಶಪಡಿಸಿಕೊಳ್ಳಲಾಗಿದ್ದು, ಈ ಅಧಿಕಾರಿ ತಾನೊಬ್ಬ ಐಪಿಎಸ್ ಅಧಿಕಾರಿ ಎಂಬಂತೆ ಪೋಸ್​ಕೊಟ್ಟು ಜನರಿಗೆ 125 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದ್ದು, ಸದ್ಯ ಅವರನ್ನು ಬಂಧಿಸಲಾಗಿದೆ. 

ಕೇವಲ ಪ್ರವೀಣ್​ ಯಾದವ್​​ನನ್ನಷ್ಟೇ ಅಲ್ಲ, ಅವರ ಪತ್ನಿ ಮಮತಾ ಯಾದವ್​, ಸಹೋದರಿ ರಿತು ಮತ್ತು ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ. ಯಾದವ್​ ತಾನೊಬ್ಬ ಐಪಿಎಸ್​ ಅಧಿಕಾರಿ ಎಂದು ಜನರನ್ನು ನಂಬಿಸಿದ್ದ. ನ್ಯಾಷನಲ್​ ಸೆಕ್ಯೂರಿಟಿ ಗಾರ್ಡ್​ (NSG)ನಲ್ಲಿ ನಿರ್ಮಾಣ ಗುತ್ತಿಗೆ ಕೊಡಿಸುವುದಾಗಿ ಹೇಳಿ ಅನೇಕರಿಂದ ದುಡ್ಡು ಪಡೆದಿದ್ದ. ಹೀಗೆ ಮಾಡಿಯೇ ಕೋಟ್ಯಂತರ ರೂಪಾಯಿ ಗಳಿಸಿದ್ದ ಯಾದವ್​, ಅದನ್ನೆಲ್ಲ ಎನ್​ಸಿಜಿ ಹೆಸರಲ್ಲಿಯೇ ತೆರೆಯಲಾಗಿದ್ದ ನಕಲಿ ಬ್ಯಾಂಕ್​ ಖಾತೆಗೆ ವರ್ಗಾಯಿಸಿದ್ದ. ಯಾದವ್​ ಸಹೋದರಿ ರಿತು ಯಾದವ್​ ಆ್ಯಕ್ಸಿಸ್​ ಬ್ಯಾಂಕ್​​ನಲ್ಲಿ ಮ್ಯಾನೇಜರ್​ ಆಗಿದ್ದು, ಆಕೆಯೇ ಅಕೌಂಟ್ ತೆರೆದು, ಅವ್ಯವಹಾರಕ್ಕೆ ಸಹಾಯ ಮಾಡಿದ್ದರು ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ. ಯಾದವ್​ರನ್ನು ಇತ್ತೀಚೆಗಷ್ಟೇ ಅಗರ್ತಲಾಕ್ಕೆ ಪೋಸ್ಟಿಂಗ್ ಮಾಡಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಜನರನ್ನು ವಂಚಿಸಿ ಭರ್ಜರಿ ಹಣ ಮಾಡಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Published On - 1:28 pm, Mon, 17 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ