AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ.

ಐಪಿಎಸ್​ ಅಧಿಕಾರಿ ಎಂದು ಹೇಳಿ ಜನರಿಗೆ ಕೋಟ್ಯಂತರ ರೂ.ವಂಚಿಸಿದ್ದ ಬಿಎಸ್​ಎಫ್​ ಅಧಿಕಾರಿ ಅರೆಸ್ಟ್; ಸಂಗ್ರಹಿಸಿದ್ದ ಸಂಪತ್ತಿನ ಮೌಲ್ಯ ಎಷ್ಟು ಗೊತ್ತಾ?
ವಶಪಡಿಸಿಕೊಂಡ ನಗದು
TV9 Web
| Edited By: |

Updated on:Jan 17, 2022 | 1:28 PM

Share

ಹರ್ಯಾಣದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರಿಂದ 14 ಕೋಟಿ ರೂಪಾಯಿ ನಗದು, 1 ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಏಳು ಐಷಾರಾಮಿ ಕಾರುಗಳು (ಬಿಎಂಡಬ್ಲ್ಯೂ, ಜೀಪ್​, ಮರ್ಸಿಡಸ್​ ಒಳಗೊಂಡು) ಸೇರಿ ಅಪಾರಪ್ರಮಾಣದ ಸಂಪತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುರ್​ಗಾಂವ್​ನ ಮನೇಸರ್​ ಎಂಬಲ್ಲಿರುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್​ ಪ್ರಧಾನಕಚೇರಿಯಲ್ಲಿ ನಿಯೋಜಿಸಲ್ಪಟ್ಟಿದ್ದ, ಗಡಿ ಭದ್ರತಾ ಪಡೆಯ ಡೆಪ್ಯೂಟಿ ಕಮಾಂಡಂಟ್​ ಪ್ರವೀಣ್​ ಯಾದವ್​ ಎಂಬುವರಿಂದ ಇಷ್ಟೊಂದು ಅಕ್ರಮ ಆಸ್ತಿ ವಶಪಡಿಸಿಕೊಳ್ಳಲಾಗಿದ್ದು, ಈ ಅಧಿಕಾರಿ ತಾನೊಬ್ಬ ಐಪಿಎಸ್ ಅಧಿಕಾರಿ ಎಂಬಂತೆ ಪೋಸ್​ಕೊಟ್ಟು ಜನರಿಗೆ 125 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದ್ದು, ಸದ್ಯ ಅವರನ್ನು ಬಂಧಿಸಲಾಗಿದೆ. 

ಕೇವಲ ಪ್ರವೀಣ್​ ಯಾದವ್​​ನನ್ನಷ್ಟೇ ಅಲ್ಲ, ಅವರ ಪತ್ನಿ ಮಮತಾ ಯಾದವ್​, ಸಹೋದರಿ ರಿತು ಮತ್ತು ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ. ಯಾದವ್​ ತಾನೊಬ್ಬ ಐಪಿಎಸ್​ ಅಧಿಕಾರಿ ಎಂದು ಜನರನ್ನು ನಂಬಿಸಿದ್ದ. ನ್ಯಾಷನಲ್​ ಸೆಕ್ಯೂರಿಟಿ ಗಾರ್ಡ್​ (NSG)ನಲ್ಲಿ ನಿರ್ಮಾಣ ಗುತ್ತಿಗೆ ಕೊಡಿಸುವುದಾಗಿ ಹೇಳಿ ಅನೇಕರಿಂದ ದುಡ್ಡು ಪಡೆದಿದ್ದ. ಹೀಗೆ ಮಾಡಿಯೇ ಕೋಟ್ಯಂತರ ರೂಪಾಯಿ ಗಳಿಸಿದ್ದ ಯಾದವ್​, ಅದನ್ನೆಲ್ಲ ಎನ್​ಸಿಜಿ ಹೆಸರಲ್ಲಿಯೇ ತೆರೆಯಲಾಗಿದ್ದ ನಕಲಿ ಬ್ಯಾಂಕ್​ ಖಾತೆಗೆ ವರ್ಗಾಯಿಸಿದ್ದ. ಯಾದವ್​ ಸಹೋದರಿ ರಿತು ಯಾದವ್​ ಆ್ಯಕ್ಸಿಸ್​ ಬ್ಯಾಂಕ್​​ನಲ್ಲಿ ಮ್ಯಾನೇಜರ್​ ಆಗಿದ್ದು, ಆಕೆಯೇ ಅಕೌಂಟ್ ತೆರೆದು, ಅವ್ಯವಹಾರಕ್ಕೆ ಸಹಾಯ ಮಾಡಿದ್ದರು ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರವೀಣ್ ಯಾದವ್​ ಸ್ಟಾಕ್​ ಮಾರ್ಕೆಟ್​ನಲ್ಲಿ 60 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದ.  ಈ ಹಣವನ್ನು ಮತ್ತೆ ಗಳಿಸಲು ಹೀಗೆ ಜನರಿಗೆ ವಂಚನೆ ಮಾಡುವ ಮಾರ್ಗ ಕಂಡುಕೊಂಡಿದ್ದ ಎಂದು ಗುರ್​ಗಾಂವ್​ ಜಿಲ್ಲಾ ಪೊಲೀಸ್ ಕ್ರೈಂ ವಿಭಾಗದ ಎಸಿಪಿ ಪ್ರೀತ್​ಪಾಲ್​ ಸಿಂಗ್​ ತಿಳಿಸಿದ್ದಾರೆ. ಯಾದವ್​ರನ್ನು ಇತ್ತೀಚೆಗಷ್ಟೇ ಅಗರ್ತಲಾಕ್ಕೆ ಪೋಸ್ಟಿಂಗ್ ಮಾಡಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಜನರನ್ನು ವಂಚಿಸಿ ಭರ್ಜರಿ ಹಣ ಮಾಡಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Published On - 1:28 pm, Mon, 17 January 22

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್