AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಸಹೋದ್ಯೋಗಿಯಿಂದಲೇ ಬಿಎಸ್​ಎಫ್ ಯೋಧನ ಹತ್ಯೆ

ಇತ್ತೀಚೆಗೆ ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ರಾತ್ರಿ ಕರ್ತವ್ಯದಲ್ಲಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯೋಧರೊಬ್ಬರನ್ನು ಅವರ ಸಹೋದ್ಯೋಗಿಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಿಎಸ್‌ಎಫ್‌ನ 119 ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿರುವ ರಾಜಸ್ಥಾನದ ಆರೋಪಿ ಎಸ್‌ಕೆ ಮಿಶ್ರಾ, ತೀವ್ರ ವಾಗ್ವಾದದ ನಂತರ ತಮ್ಮ ಐಎನ್‌ಎಸ್‌ಎಎಸ್ ರೈಫಲ್‌ನಿಂದ 13 ಸುತ್ತು ಗುಂಡು ಹಾರಿಸಿದ್ದರು.

ಪಶ್ಚಿಮ ಬಂಗಾಳ: ಸಹೋದ್ಯೋಗಿಯಿಂದಲೇ ಬಿಎಸ್​ಎಫ್ ಯೋಧನ ಹತ್ಯೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 15, 2025 | 10:26 AM

Share

ಮುರ್ಷಿದಾಬಾದ್, ಜೂನ್ 15: ಇತ್ತೀಚೆಗೆ ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ರಾತ್ರಿ ಕರ್ತವ್ಯದಲ್ಲಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯೋಧರೊಬ್ಬರನ್ನು ಅವರ ಸಹೋದ್ಯೋಗಿಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಿಎಸ್‌ಎಫ್‌ನ 119 ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿರುವ ರಾಜಸ್ಥಾನದ ಆರೋಪಿ ಎಸ್‌ಕೆ ಮಿಶ್ರಾ, ತೀವ್ರ ವಾಗ್ವಾದದ ನಂತರ ತಮ್ಮ ಐಎನ್‌ಎಸ್‌ಎಎಸ್ ರೈಫಲ್‌ನಿಂದ 13 ಸುತ್ತು ಗುಂಡು ಹಾರಿಸಿದ್ದರು.

ಆ ಗುಂಡುಗಳಲ್ಲಿ ಕನಿಷ್ಠ ಐದು ಗುಂಡುಗಳು ಅವರ ಸಹೋದ್ಯೋಗಿ ರತನ್ ಲಾಲ್ ಸಿಂಗ್ (38) ಗೆ ತಗುಲಿ ಮಾರಣಾಂತಿಕ ಗಾಯಗಳನ್ನುಂಟು ಮಾಡಿದ್ದವು. ಬಿಎಸ್‌ಎಫ್ ಮೂಲಗಳ ಪ್ರಕಾರ, ಕೋಲ್ಕತ್ತಾ ಹೈಕೋರ್ಟ್ ಶಾಂತಿ ಕಾಪಾಡಲು ಮತ್ತು ನಾಗರಿಕರನ್ನು ರಕ್ಷಿಸಲು ನೀಡಿದ ಆದೇಶದ ಮೇರೆಗೆ ಹಿಂಸಾಚಾರ ಪೀಡಿತ ಸ್ಥಳದಲ್ಲಿ ಇಬ್ಬರೂ ಯೋಧರನ್ನು ನಿಯೋಜಿಸಲಾಗಿತ್ತು.

ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು, ಅವರು ಪ್ರದೇಶದ ಅಶಾಂತಿಯ ನಡುವೆಯೂ ಸುರಕ್ಷತೆಯ ಭರವಸೆಯನ್ನು ಸಂಪೂರ್ಣವಾಗಿ ಬಿಎಸ್‌ಎಫ್ ಸಿಬ್ಬಂದಿಯ ಮೇಲೆ ಇಟ್ಟಿದ್ದರು. ರತನ್ ಲಾಲ್ ಸಿಂಗ್ ಅವರನ್ನು ಮೊದಲು ಅನುಪ್ನಗರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಅವರ ಸ್ಥಿತಿ ಗಂಭೀರವಾದ ಕಾರಣ ಜಂಗಿಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಕರೆತರುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಮತ್ತಷ್ಟು ಓದಿ:  ಪಾಟ್ನಾ: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಆರಂಭದಲ್ಲಿ, ಆರೋಪಿ ಎಸ್.ಕೆ. ಮಿಶ್ರಾ ಸ್ಥಳದಿಂದ ಪರಾರಿಯಾಗಿದ್ದ. ಆದರೆ, ಪೊಲೀಸರು ಆ ರಾತ್ರಿ ಅವರನ್ನು ಪತ್ತೆಹಚ್ಚಿ ಬಂದೂಕಿನ ಸಮೇತ ಬಂಧಿಸಿದ್ದಾರೆ. ಔಪಚಾರಿಕ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಇಂದು ಜಂಗಿಪುರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಬಿಎಸ್‌ಎಫ್ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದು, ರಾಜ್ಯ ತನಿಖಾ ಸಂಸ್ಥೆಯೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ದುರಂತವು ಗ್ರಾಮಸ್ಥರಲ್ಲಿ ಪ್ರಶ್ನೆಗಳನ್ನು ಮತ್ತು ಕೋಪವನ್ನು ಹುಟ್ಟುಹಾಕಿದೆ. ರಾಜ್ಯ ಪೊಲೀಸರ ಮೇಲಿನ ಅಪನಂಬಿಕೆಯಿಂದಾಗಿ ಈ ಪ್ರದೇಶದಲ್ಲಿ ಶಾಶ್ವತ ಬಿಎಸ್‌ಎಫ್ ಶಿಬಿರಕ್ಕಾಗಿ ಅವರು ಬೇಡಿಕೆ ಇಟ್ಟಿದ್ದರು.ನಮ್ಮನ್ನು ರಕ್ಷಿಸಲೆಂದು ನಿಯೋಜಿಸಲಾಗಿದ್ದವರೇ ಹೊಡೆದಾಡಿಕೊಂಡು ಸತ್ತರೆ ನಮ್ಮ ರಕ್ಷಣೆ ಯಾರು ಮಾಡುತ್ತಾರೆ ಎಂದು ಸ್ಥಳೀಯರೊಬ್ಬರು ಪ್ರಶ್ನೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ