AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಹಿಂಸೆ ಕೊಟ್ಟಿತ್ತಾ ಪಾಕ್? ಅವಾಚ್ಯ ಶಬ್ದಗಳಿಂದ ನಿಂದನೆ, ನಿದ್ರೆ ಕಸಿದುಕೊಂಡಿದ್ದ ಪಾಕ್ ಸೇನೆ

ಇತ್ತೀಚೆಗಷ್ಟೇ ಆಕಸ್ಮಿಕವಾಗಿ ಗಡಿ ದಾಟಿದ್ದ ಬಿಎಸ್​ಎಫ್​ ಯೋಧ ಪೂರ್ಣಂ ಕುಮಾರ್ ಶಾ ಎಂಬುವವರನ್ನು ಪಾಕ್ ಸೇನೆ ಬಂಧಿಸಿತ್ತು. ಯೋಧನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದರು, ಜತೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಯಾ ಟುಡೇ ನೀಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 23ರಂದು ಬಿಎಸ್​ಎಫ್​ ಯೋಧರನ್ನು ಪಾಕ್ ಬಂಧಿಸಿತ್ತು. ಕಣ್ಣಿಗೆ ಪಟ್ಟಿ ಕಟ್ಟಿ ತನ್ನ ಕಸ್ಟಡಿಯಲ್ಲಿಟ್ಟುಕೊಂಡಿತ್ತು. ಪಾಕಿಸ್ತಾನದ ಕಸ್ಟಡಿಯಲ್ಲಿ ಬರೋಬ್ಬರಿ 21 ದಿನಗಳನ್ನು ಕಳೆದಿದ್ದಾರೆ.

ಬಿಎಸ್​ಎಫ್​ ಯೋಧನಿಗೆ ಹಿಂಸೆ ಕೊಟ್ಟಿತ್ತಾ ಪಾಕ್? ಅವಾಚ್ಯ ಶಬ್ದಗಳಿಂದ ನಿಂದನೆ, ನಿದ್ರೆ ಕಸಿದುಕೊಂಡಿದ್ದ ಪಾಕ್ ಸೇನೆ
ಪೂರ್ಣಂ
ನಯನಾ ರಾಜೀವ್
|

Updated on: May 15, 2025 | 11:45 AM

Share

ನವದೆಹಲಿ, ಮೇ 15: ಇತ್ತೀಚೆಗಷ್ಟೇ ಆಕಸ್ಮಿಕವಾಗಿ ಗಡಿ ದಾಟಿದ್ದ ಬಿಎಸ್​ಎಫ್​(BSF) ಯೋಧ ಪೂರ್ಣಂ ಕುಮಾರ್ ಶಾ ಎಂಬುವವರನ್ನು ಪಾಕ್ ಸೇನೆ ಬಂಧಿಸಿತ್ತು. ಬುಧವಾರ ಭಾರತಕ್ಕೆ ವಾಪಸ್ ಕಳುಹಿಸಿದೆ. ಯೋಧನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದರು, ಜತೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಯಾ ಟುಡೇ ನೀಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 23ರಂದು ಬಿಎಸ್​ಎಫ್​ ಯೋಧರನ್ನು ಪಾಕ್ ಬಂಧಿಸಿತ್ತು. ಕಣ್ಣಿಗೆ ಪಟ್ಟಿ ಕಟ್ಟಿ ತನ್ನ ಕಸ್ಟಡಿಯಲ್ಲಿಟ್ಟುಕೊಂಡಿತ್ತು. ಪಾಕಿಸ್ತಾನದ ಕಸ್ಟಡಿಯಲ್ಲಿ ಬರೋಬ್ಬರಿ 21 ದಿನಗಳನ್ನು ಕಳೆದಿದ್ದಾರೆ.

ಶಾ ಅವರಿಗೆ ದೈಹಿಕವಾಗಿ ಚಿತ್ರೆಹಿಂಸೆ ನೀಡದಿದ್ದರೂ ಕೂಡ ಗಡಿಯಲ್ಲಿ ಬಿಎಸ್​ಎಫ್​ ನಿಯೋಜನೆಗಳ ಬಗ್ಗೆಯೂ ಅವರನ್ನು ಪ್ರಶ್ನಿಸಲಾಯಿತು. ಹಲ್ಲುಗಳನ್ನು ಉಜ್ಜಲು ಕೂಡ ಅವಕಾಶ ಕೊಟ್ಟಿರಲಿಲ್ಲ ಎಂದು ವರದಿಯಾಗಿದೆ.

ಏಪ್ರಿಲ್ 23ರಂದು ಫಿರೋಜ್​ಪುರ ವಲಯದಲ್ಲಿ ಕರ್ತವ್ಯದಲ್ಲಿದ್ದ ಪೂರ್ಣಂ ತಪ್ಪಾಗಿ ಪಾಕಿಸ್ತಾನ ಪ್ರದೇಶಕ್ಕೆ ದಾಟಿದ್ದರು, ಪಾಕಿಸ್ತಾನದ ರೇಂಜರ್ಸ್​ ಅವರನ್ನು ಬಂಧಿಸಿದ್ದರು. 24ನೇ ಬಿಎಸ್​ಎಫ್ ಬೆಟಾಲಿಯನ್ಗೆ ಸೇರಿದ ಶಾರನ್ನು 21 ದಿನಗಳಲ್ಲಿ ಮೂರು ಅಜ್ಞಾತ ಸ್ಥಳಗಳಿಗೆ ಕರೆದೊಯ್ಯಲಾಗಿತ್ತು. ಒಂದು ಸ್ಥಳವು ವಾಯು ನೆಲೆ ಬಳಿ ಇದ್ದು, ಅಲ್ಲಿ ವಿಮಾನ ಶಬ್ದಗಳು ಕೇಳಿಸುತ್ತಿದ್ದವು ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
ಸೋಫಿಯಾ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ
Image
ನಾಯಿ ಬಾಲ ಯಾವತ್ತಿದ್ರೂ ಡೊಂಕು... ಪಾಕ್ ವಿರುದ್ಧ ಕ್ರಿಕೆಟಿಗರ ಆಕ್ರೋಶ
Image
ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್
Image
ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ

ಈ ಸಮಯದಲ್ಲಿ ಅವರ ಕಣ್ಣುಗಳಿಗೆ ಬಟ್ಟೆಯನ್ನು ಕಟ್ಟಲಾಗಿತ್ತು. ಬಿಎಸ್‌ಎಫ್ ನಿಯೋಜನೆಗಳ ಬಗ್ಗೆ ಪ್ರಶ್ನಿಸಿದರು ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ನಿಯೋಜಿಸಲಾದ ಹಿರಿಯ ಅಧಿಕಾರಿಗಳ ಬಗ್ಗೆ ವಿವರಗಳನ್ನು ಪಡೆದರು.

ಮತ್ತಷ್ಟು ಓದಿ: ಆಕಸ್ಮಿಕವಾಗಿ ಗಡಿ ದಾಟಿ ಪಾಕ್​ನಿಂದ ಬಂಧನಕ್ಕೊಳಗಾಗಿದ್ದ ಬಿಎಸ್​ಎಫ್​ ಯೋಧ ಭಾರತಕ್ಕೆ ವಾಪಸ್

ಮೊಬೈಲ್​ ನಂಬರ್​ಗಳನ್ನು ನೀಡುವಂತೆಯೂ ಒತ್ತಾಯಿಸಲಾಗಿತ್ತು. ಆದರೆ ಶಾ ಅವರನ್ನು ಬಂಧಿಸಿದಾಗ ಅವರ ಬಳಿ ಮೊಬೈಲ್ ಇರಲಿಲ್ಲ. ಅಟ್ಟಾರಿ-ವಾಘಾ ಗಡಿಯಲ್ಲಿ ಬಿಎಸ್‌ಎಫ್ ಜವಾನನನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದ ನಂತರ, ಶಾ ಅವರಿಗೆ ಅವರ ಕುಟುಂಬದೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು.

ಅವರನ್ನು ಔಪಚಾರಿಕ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅವರ ದೈಹಿಕ ಮತ್ತು ಮಾನಸಿಕ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಶಿಷ್ಟಾಚಾರದ ಪ್ರಕಾರ, ಪಾಕಿಸ್ತಾನದ ವಶದಲ್ಲಿದ್ದಾಗ ಅವರು ಧರಿಸಿದ್ದ ಬಟ್ಟೆಗಳನ್ನು ಪರಿಶೀಲಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ