AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಎ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಎ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 06, 2022 | 4:46 PM

Share

ದೆಹಲಿ: ಇಂದು ಜಮ್ಮುವಿನಲ್ಲಿ ಪಾಕಿಸ್ತಾನದ ಮೂವರು ಸ್ಮಗ್ಲರ್​ಗಳನ್ನು (Pakistani Smugglers) ಗಡಿ ಭದ್ರತಾ ಪಡೆ ಯೋಧರು (BSF) ಹೊಡೆದುರುಳಿಸಿದ್ದಾರೆ. ಹಾಗೇ, ಮೃತ ಸ್ಮಗ್ಲರ್​ಗಳಿಂದ 36 ಪ್ಯಾಕೆಟ್​ಗಳಷ್ಟು ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಇವರ ಸಂಬಾ ಅಂತಾರಾಷ್ಟ್ರೀಯ ಗಡಿಯ ಮೂಲಕ ಡ್ರಗ್ಸ್​ನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಿಎಸ್​ಎಫ್​ ತಿಳಿಸಿದೆ. ಪ್ಯಾಕೆಟ್​​ನಲ್ಲಿ ಇರುವುದು ಹೆರಾಯಿನ್​. ಅಂದಾಜು 36 ಕೆಜಿಗಳಷ್ಟನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಬಿಎಸ್​​ಎಫ್​​ನ ಡಿಐಜಿ ಸಂಧು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನು ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಇ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು ಎಂದು ಮಾಹಿತಿ ಸಿಕ್ಕಿದೆ. ಜಕುರಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆ ಪ್ರದೇಶವನ್ನು ಸುತ್ತುವರಿದ್ದರು. ಆದರೆ ಭಯೋತ್ಪಾದಕರು ಮರೆಯಲ್ಲಿ ನಿಂತು ಭದ್ರತಾ ಪಡೆಗಳ ಮೇಲೆ ಗುಂಡಿ ಹಾರಿಸಿದಾಗ, ರಕ್ಷಣಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾಗಿ  ಸ್ಥಳೀಯ ಪೊಲೀಸ್ ತಿಳಿಸಿದ್ದಾರೆ. ಮೃತರ ಬಳಿಯಿದ್ದ ಅಪಾರ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಲತಾ ಮಂಗೇಶ್ಕರ್​ ಹಾಡುಗಳು ಔಷಧಿ ಇದ್ದಂತೆ’; ಖ್ಯಾತ ಗಾಯಕಿಗೆ ನುಡಿ ನಮನ ಸಲ್ಲಿಸಿದ ಕೆ. ಕಲ್ಯಾಣ್​

Published On - 9:48 am, Sun, 6 February 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!