AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಎ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಎ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 06, 2022 | 4:46 PM

Share

ದೆಹಲಿ: ಇಂದು ಜಮ್ಮುವಿನಲ್ಲಿ ಪಾಕಿಸ್ತಾನದ ಮೂವರು ಸ್ಮಗ್ಲರ್​ಗಳನ್ನು (Pakistani Smugglers) ಗಡಿ ಭದ್ರತಾ ಪಡೆ ಯೋಧರು (BSF) ಹೊಡೆದುರುಳಿಸಿದ್ದಾರೆ. ಹಾಗೇ, ಮೃತ ಸ್ಮಗ್ಲರ್​ಗಳಿಂದ 36 ಪ್ಯಾಕೆಟ್​ಗಳಷ್ಟು ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಇವರ ಸಂಬಾ ಅಂತಾರಾಷ್ಟ್ರೀಯ ಗಡಿಯ ಮೂಲಕ ಡ್ರಗ್ಸ್​ನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಿಎಸ್​ಎಫ್​ ತಿಳಿಸಿದೆ. ಪ್ಯಾಕೆಟ್​​ನಲ್ಲಿ ಇರುವುದು ಹೆರಾಯಿನ್​. ಅಂದಾಜು 36 ಕೆಜಿಗಳಷ್ಟನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಬಿಎಸ್​​ಎಫ್​​ನ ಡಿಐಜಿ ಸಂಧು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನು ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಇ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು ಎಂದು ಮಾಹಿತಿ ಸಿಕ್ಕಿದೆ. ಜಕುರಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆ ಪ್ರದೇಶವನ್ನು ಸುತ್ತುವರಿದ್ದರು. ಆದರೆ ಭಯೋತ್ಪಾದಕರು ಮರೆಯಲ್ಲಿ ನಿಂತು ಭದ್ರತಾ ಪಡೆಗಳ ಮೇಲೆ ಗುಂಡಿ ಹಾರಿಸಿದಾಗ, ರಕ್ಷಣಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾಗಿ  ಸ್ಥಳೀಯ ಪೊಲೀಸ್ ತಿಳಿಸಿದ್ದಾರೆ. ಮೃತರ ಬಳಿಯಿದ್ದ ಅಪಾರ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಲತಾ ಮಂಗೇಶ್ಕರ್​ ಹಾಡುಗಳು ಔಷಧಿ ಇದ್ದಂತೆ’; ಖ್ಯಾತ ಗಾಯಕಿಗೆ ನುಡಿ ನಮನ ಸಲ್ಲಿಸಿದ ಕೆ. ಕಲ್ಯಾಣ್​

Published On - 9:48 am, Sun, 6 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?