AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತದಿಂದ ತನ್ನ ಮದುವೆಗೆ ಹೋಗಲಾಗದೆ ಪರದಾಡಿದ ಸೈನಿಕ; ಹೆಲಿಕಾಪ್ಟರ್​ನಲ್ಲಿ ಏರ್​ಲಿಫ್ಟ್ ಮಾಡಿಸಿದ​ ಬಿಎಸ್​ಎಫ್

ಎಲ್‌ಒಸಿ ಪೋಸ್ಟ್ ಹಿಮದಿಂದ ಆವೃತವಾಗಿರುವುದರಿಂದ ಮತ್ತು ಕಾಶ್ಮೀರ ಕಣಿವೆಯೊಂದಿಗಿನ ಅದರ ರಸ್ತೆ ಸಂಪರ್ಕ ಸರಿಯಾಗಿಲ್ಲ. ಈ ಸ್ಥಳಗಳಲ್ಲಿ ನಿಯೋಜಿಸಲಾದ ಸೈನಿಕರಿಗೆ ಮಿಲಿಟರಿ ಹೆಲಿಕಾಪ್ಟರ್​ ಒಂದೇ ಲಭ್ಯವಿರುವ ಏಕೈಕ ಸಾರಿಗೆ ವ್ಯವಸ್ಥೆಯಾಗಿದೆ.

ಹಿಮಪಾತದಿಂದ ತನ್ನ ಮದುವೆಗೆ ಹೋಗಲಾಗದೆ ಪರದಾಡಿದ ಸೈನಿಕ; ಹೆಲಿಕಾಪ್ಟರ್​ನಲ್ಲಿ ಏರ್​ಲಿಫ್ಟ್ ಮಾಡಿಸಿದ​ ಬಿಎಸ್​ಎಫ್
ಹೆಲಿಕಾಪ್ಟರ್
TV9 Web
| Edited By: |

Updated on:Apr 30, 2022 | 8:07 PM

Share

ಅಂಗುಲ್: ಸೈನಿಕರು ತಮ್ಮ ವೈಯಕ್ತಿಕ ಖುಷಿ, ಪ್ರಾಣವನ್ನು ಕೂಡ ಲೆಕ್ಕಿಸದೆ ತನ್ನ ದೇಶದವರಿಗಾಗಿ ಹೋರಾಡುತ್ತಾರೆ. ಅಂತಹ ಸೈನಿಕನ ಸಂತೋಷದ ಕ್ಷಣಕ್ಕೆ ತನ್ನ ಕೈಲಾದ ಸಹಾಯ ಮಾಡಲು ನಿರ್ಧರಿಸಿದ BSF ಇಂದು ಸೈನಿಕರೊಬ್ಬರು ತಮ್ಮ ಮದುವೆಗೆ ಹೋಗಲು ಅನುಕೂಲವಾಗಲೆಂದು ವಿಶೇಷ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ. ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (LoC) ರಿಮೋಟ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ತನ್ನ ಮದುವೆಯ ಸಮಯದೊಳಗೆ ಮನೆ ಸೇರಲು ಸುಮಾರು 2,500 ಕಿಮೀ ದೂರದಲ್ಲಿರುವ ಒಡಿಶಾಗೆ ಹೋಗಬೇಕಿತ್ತು. ಹೀಗಾಗಿ, ಆತ ಸಮಯಕ್ಕೆ ಸರಿಯಾಗಿ ತನ್ನ ಮದುವೆಗೆ ಹಾಜರಾಗಲು ಅನುಕೂಲವಾಗಲೆಂದು ವಿಶೇಷ ಹೆಲಿಕಾಪ್ಟರ್​ ವ್ಯವಸ್ಥೆ ಮಾಡಲಾಗಿತ್ತು.

ಎಲ್‌ಒಸಿಯ (ಗಡಿ ನಿಯಂತ್ರಣ ರೇಖೆ) ಉದ್ದಕ್ಕೂ ಮಚಿಲ್ ಸೆಕ್ಟರ್‌ನ ಎತ್ತರದ ಪೋಸ್ಟ್‌ನಲ್ಲಿ ಸೈನಿಕರನ್ನು ಸೇವೆಗೆ ನಿಯೋಜಿಸಲಾಗಿತ್ತು. 30 ವರ್ಷದ ಕಾನ್‌ಸ್ಟೆಬಲ್ ನಾರಾಯಣ ಬೆಹೆರಾ ಅವರ ವಿವಾಹವು ಮೇ 2ರಂದು ಒಡಿಶಾದಲ್ಲಿರುವ ತಮ್ಮ ಊರಿನಲ್ಲಿ ನಿಗದಿಯಾಗಿತ್ತು ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್‌ಒಸಿ ಪೋಸ್ಟ್ ಹಿಮದಿಂದ ಆವೃತವಾಗಿರುವುದರಿಂದ ಮತ್ತು ಕಾಶ್ಮೀರ ಕಣಿವೆಯೊಂದಿಗಿನ ಅದರ ರಸ್ತೆ ಸಂಪರ್ಕವು ಸರಿಯಾಗಿಲ್ಲ. ಈ ಸ್ಥಳಗಳಲ್ಲಿ ನಿಯೋಜಿಸಲಾದ ಸೈನಿಕರಿಗೆ ಮಿಲಿಟರಿ ಹೆಲಿಕಾಪ್ಟರ್​ ಒಂದೇ ಲಭ್ಯವಿರುವ ಏಕೈಕ ಸಾರಿಗೆ ವ್ಯವಸ್ಥೆಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾರಾಯಣ ಬೆಹೆರಾ ಅವರ ಪೋಷಕರು ಅವರ ಘಟಕದ ಕಮಾಂಡರ್‌ಗಳನ್ನು ಸಂಪರ್ಕಿಸಿ, ಕಾಶ್ಮೀರದಲ್ಲಿ ಹಿಮಪಾತವಾಗಿರುವುದರಿಂದ ತಮ್ಮ ಮಗ ಮದುವೆಗೆ ಬರಲು ಸಾಧ್ಯವಾಗದಿರಬಹುದು, ಆತನ ಮದುವೆ ನಿಂತುಹೋಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಜನರಲ್ (ಕಾಶ್ಮೀರ ಗಡಿಭಾಗ) ರಾಜಾ ಬಾಬು ಸಿಂಗ್ ಅವರ ಗಮನಕ್ಕೆ ತರಲಾಯಿತು.

ಶ್ರೀನಗರದಲ್ಲಿ ಬೀಡುಬಿಟ್ಟಿರುವ ಪಡೆಯ ಚೀತಾ ಹೆಲಿಕಾಪ್ಟರ್ ಅನ್ನು ತಕ್ಷಣವೇ ಕರೆಸಿ, ನಾರಾಯಣ ಬೆಹೆರಾ ಅವರನ್ನು ಏರ್‌ಲಿಫ್ಟ್ ಮಾಡಬೇಕು ಎಂದು ರಾಜಾ ಬಾಬು ಸಿಂಗ್ ಆದೇಶಿಸಿದರು. ಹೆಲಿಕಾಪ್ಟರ್ ಇಂದು ಮುಂಜಾನೆ ಬೆಹೆರಾ ಅವರನ್ನು ಶ್ರೀನಗರಕ್ಕೆ ಕರೆತಂದಿತು.

Published On - 8:06 pm, Sat, 30 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ