AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
TV9 Web
| Edited By: |

Updated on:Mar 11, 2023 | 12:51 PM

Share

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?