AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಭುಜ್​ನಲ್ಲಿ ಇಂದು ಮತ್ತೆ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ

ಕೊಳೆತ ಮೀನುಗಳೊಂದಿಗೆ ಇನ್ನೂ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳನ್ನು ಹರಾಮಿ ನಲ್ಲಾದಲ್ಲಿ ಬಿಎಸ್ಎಫ್ ವಶಪಡಿಸಿಕೊಂಡಿದೆ. ಈ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಗುಜರಾತ್​ನ ಭುಜ್​ನಲ್ಲಿ ಇಂದು ಮತ್ತೆ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ
ಗುಜರಾತ್​ನಲ್ಲಿ ಮೀನುಗಾರಿಕಾ ಬೋಟ್ ವಶಕ್ಕೆ
TV9 Web
| Edited By: |

Updated on: Feb 17, 2022 | 9:00 PM

Share

ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಇಂದು ಗುಜರಾತ್‌ನ ಕಚ್ ಜಿಲ್ಲೆಯ ಬಳಿ ಇಂಡೋ-ಪಾಕ್ ಕಡಲ ಗಡಿಯ ಬಳಿಯ ಹರಾಮಿ ನಲ್ಲಾ ಕ್ರೀಕ್ ಪ್ರದೇಶದಲ್ಲಿ 7 ಪಾಕಿಸ್ತಾನಿ ಮೀನುಗಾರಿಕಾ ದೋಣಿಗಳನ್ನು (Pakistani Fishing Boats) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಾಕಿಸ್ತಾನಿ ಮೀನುಗಾರರ ಬೋಟ್​ಗಳನ್ನು ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಇದಕ್ಕೂ ಸರಿಯಾಗಿ ಒಂದು ವಾರದ ಹಿಂದೆ ಫೆಬ್ರವರಿ 10ರಂದು – BSF ಇದೇ ಸ್ಥಳದಿಂದ 6 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿತ್ತು. ಹಾಗೇ ಆ ಮೀನುಗಾರರಿಗೆ ಸಂಬಂಧಿಸಿದ 11 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇಂದು ಕೊಳೆತ ಮೀನುಗಳೊಂದಿಗೆ ಇನ್ನೂ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳನ್ನು ಹರಾಮಿ ನಲ್ಲಾದಲ್ಲಿ ಬಿಎಸ್ಎಫ್ ವಶಪಡಿಸಿಕೊಂಡಿದೆ. ಈ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಬಿಎಸ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಪಾಕಿಸ್ತಾನಿ ಮೀನುಗಾರಿಕಾ ದೋಣಿಗಳು ಭಾರತದ ಜಲಗಡಿಗಳೊಳಗೆ ಒಳನುಸುಳುವಿಕೆಯ ವಿರುದ್ಧ ಬಿಎಸ್ಎಫ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಾರತೀಯ ಮೀನುಗಾರರು ಕ್ರೀಕ್ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಿದರೆ, ಪಾಕಿಸ್ತಾನಿ ಮೀನುಗಾರರು ಮೀನು ಹಿಡಿಯಲು ಭಾರತದ ಕಡೆ ಪ್ರವೇಶಿಸುತ್ತಾರೆ. ಹಲವು ಬಾರಿ, ಬಿಎಸ್ಎಫ್ ಗಸ್ತು ಬೋಟ್​ಗಳನ್ನು ಪತ್ತೆ ಹಚ್ಚಿದರೆ ಅವರು ತಮ್ಮ ಮೀನುಗಾರಿಕಾ ದೋಣಿಗಳನ್ನು ಬಿಟ್ಟು ಪಾಕಿಸ್ತಾನದ ಕಡೆಗೆ ತಪ್ಪಿಸಿಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 9ರಂದು ಹರಾಮಿ ನಲ್ಲಾದ ಪ್ರದೇಶದಲ್ಲಿ ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ಪತ್ತೆಯಾಗಿದ್ದು, ಪಾಕಿಸ್ತಾನಿ ಮೀನುಗಾರರು ಒಳಗೆ ನುಗ್ಗಿರುವ ಮಾಹಿತಿ ಲಭ್ಯವಾಗಿತ್ತು. ಅಂದು ರಾತ್ರಿ ನಡೆದ ಶೋಧ ಕಾರ್ಯಾಚರಣೆಯಲ್ಲಿ 11 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಬಿಎಸ್ಎಫ್ ತಿಳಿಸಿದೆ. ಬಿಎಸ್ಎಫ್ ಪ್ರದೇಶದ ಡ್ರೋನ್ ಕಣ್ಗಾವಲು ಸಂದರ್ಭದಲ್ಲಿ ಪಾಕಿಸ್ತಾನದ ಬೋಟ್​ಗಳು ಪತ್ತೆಯಾಗಿತ್ತು. ಇದೀಗ ಮತ್ತೆ ಪಾಕಿಸ್ತಾನಿ ಒಳನುಸುಳುಕೋರರಿಗಾಗಿ ಭಾರೀ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ಭುಜ್​ನಲ್ಲಿ ಭಾರತೀಯ ಸೇನೆಯಿಂದ 11 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ

ಕರ್ನಾಟಕದ ಹಿಜಾಬ್​ ವಿವಾದಕ್ಕೆ ಪಾಕಿಸ್ತಾನಿ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ ಪ್ರತಿಕ್ರಿಯೆ; ಭಯಾನಕ ಎಂದು ಟ್ವೀಟ್​

Follow Us
Web contact
Web contact

TV9 Kannada

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?