AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಬಿಎಸ್​ಎಫ್​ ಮಹಿಳಾ ಬೈಕರ್​ಗಳ ರೋಮಾಂಚನಕಾರಿ ಸಾಹಸ ಪ್ರದರ್ಶನ

ಗಣರಾಜ್ಯೋತ್ಸವದಲ್ಲಿ ಭಾರತದ ಮಿಲಿಟರಿ ಶಕ್ತಿಯ ಜತೆ ಸಾಂಸ್ಕೃತಿಕ ವೈವಿಧ್ಯತೆ ಪ್ರದರ್ಶನ ನಡೆಯಿತು. ಅದರೊಂದಿಗೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಹಲವು ಉಪಕ್ರಮಗಳನ್ನು ಸೇರಿಸಲಾಗಿತ್ತು.

Video: ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಬಿಎಸ್​ಎಫ್​ ಮಹಿಳಾ ಬೈಕರ್​ಗಳ ರೋಮಾಂಚನಕಾರಿ ಸಾಹಸ ಪ್ರದರ್ಶನ
ಬಿಎಸ್​ಎಫ್​ ಮಹಿಳಾ ಬೈಕರ್​ಗಳಿಂದ ಸಾಹಸ ಪ್ರದರ್ಶನ
TV9 Web
| Edited By: |

Updated on:Jan 26, 2022 | 5:11 PM

Share

ದೆಹಲಿ: ಇಂದು ಗಣರಾಜ್ಯೋತ್ಸವ ಪರೇಡ್ (Republic Day Parade 2022)​ ಅತ್ಯಂತ ಆಕರ್ಷಕವಾಗಿತ್ತು. ದೇಶದ ಸಂಸ್ಕೃತಿ, ಪರಂಪರೆ ಬಿಂಬಿಸುವ ಸ್ತಬ್ಧ ಚಿತ್ರಗಳ ಜತೆ, ಗಡಿ ಭದ್ರತಾ ಪಡೆಯ ಮಹಿಳಾ ಯೋಧರ (BSF) ಬೈಕ್​ ಸಾಹಸ ಪ್ರದರ್ಶನ ದೇಶದ ಗಮನ ಸೆಳೆದಿದೆ. ಬಿಎಎಸ್​ಎಫ್​​ನ ಸೀಮಾ ಭವಾನಿ ನೇತೃತ್ವದ ಮೋಟಾರ್​ಸೈಕಲ್​ ತಂಡ ರಾಷ್ಟ್ರಪತಿಯವರಿಗೆ ವಂದನೆ ಸಲ್ಲಿಸಿದ್ದು, ಅತ್ಯಂತ ರೋಮಾಂಚನಕಾರಿಯಾಗಿತ್ತು. ಈ ವಿಡಿಯೋವನ್ನು ಕೂಡ ನೋಡಬಹುದಾಗಿದೆ.  

ಇಂದು ಈ ಬೈಕ್​ ತಂಡ ಕಮಾಂಡ್​ ಇನ್​ಸ್ಪೆಕ್ಟರ್​ ಹಿಮಾಂಶು ಸಿರೋಹಿ ಕಮಾಂಡ್​​ನಡಿ ರಾಷ್ಟ್ರಪತಿ ವಂದನೆ ಸಲ್ಲಿಸಿದೆ. ಸಬ್​ ಇನ್ಸ್​ಪೆಕ್ಟರ್​ ಸೋನಿಯಾ ಬನ್ವಾರಿ ಆದೇಶದಡಿ, ಬೈಕ್​​ಮೇಲೆ ಏಕಮಂಡಿಯೂರಿ ಸಾಹಸ ಪ್ರದರ್ಶನ ನಡೆಸಿತು. ಕಾನ್​ಸ್ಟೆಬಲ್​ ಅನಿಮಾ ನೇತೃತ್ವದಲ್ಲಿ ಕುರ್ಚಿ ರೈಡಿಂಗ್​ ನಡೆಯಿತು ಹಾಗೂ ಕಾನ್​​ಸ್ಟೆಬಲ್​ ಪುಷ್ಪಾ ಮತ್ತೊಬ್ಬರು ಸೇರಿ ಫಿಶ್​ ರೈಡಿಂಗ್  ನಡೆಸಿದರು. ಅಷ್ಟೇ ಅಲ್ಲ, ಕಾನ್​ಸ್ಟೆಬಲ್​ ರಜ್ವಿಂದರ್ ಕೌರ್​ ಹಾಗೂ ಇನ್ನೊಬ್ಬರು ಸೇರಿ ಒಂದು ಬದಿಯಿಂದ ಡಬಲ್​ ಬ್ಯಾಕ್​ ರೈಡಿಂಗ್​ ಮಾಡಿದರೆ, ಇನ್ನೊಂದು ಬೈಕ್​​ನಲ್ಲಿ ಕಾನ್​ಸ್ಟೆಬಲ್​ ಅನುಪಮಾ ಕುಮಾರಿ ಮತ್ತು ಇನ್ನೊಬ್ಬರು ಇದೇ ಮಾದರಿಯಲ್ಲಿ ಸಾಹಸ ಪ್ರದರ್ಶಿಸಿದರು. ಏಣಿಯ ಮೇಲೆ ನಿಂತು ಮಾಡುವ ಸಾಹಸವನ್ನು ಕಾನ್​​ಸ್ಟೆಬಲ್​ ಸಂಗೀತಾ ಕುಮಾರಿ ನೇತೃತ್ವದಲ್ಲಿ ಮಾಡಲಾಯಿತು. ಇಲ್ಲಿ ಐದು ಮಹಿಳಾ ಯೋಧರು ಬ್ಯಾಲೆನ್ಸ್​ ಮಾಡಿದ್ದು ರೋಚಕವಾಗಿತ್ತು. ಹಾಗೇ, ಕಾನ್​ಸ್ಟೆಬಲ್​ ಸುಮಿತಾ ಸಿಖ್ದರ್​ ನೇತೃತ್ವದಲ್ಲಿ ನಾಲ್ವರು ರೈಡರ್​ಗಳು ಬ್ಯಾಲೆನ್ಸ್​ ಮಾಡಿದರು. ಈ ವೇಳೆ ಮಹಿಳಾ ಕಾನ್​ಸ್ಟೆಬಲ್​ಗಳು ಬೇಟಿ ಪಡಾವೋ, ಬೇಟಿ ಬಚಾವೋ ಎಂಬಿತ್ಯಾದಿ ಸಂದೇಶಗಳ ಬೋರ್ಡ್​ಗಳನ್ನು ಪ್ರದರ್ಶಿಸಿದರು.

ಇದರೊಂದಿಗೆ ಇನ್ನೂ ವಿಧದ ಸ್ಟಂಟ್​ಗಳನ್ನು ಬಿಎಸ್​ಎಫ್​ ಮಹಿಳಾ ಸಿಬ್ಬಂದಿ ಮಾಡಿದರು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾರತದ ಮಿಲಿಟರಿ ಶಕ್ತಿಯ ಜತೆ ಸಾಂಸ್ಕೃತಿಕ ವೈವಿಧ್ಯತೆ ಪ್ರದರ್ಶನ ನಡೆಯಿತು. ಅದರೊಂದಿಗೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಹಲವು ಉಪಕ್ರಮಗಳನ್ನು ಸೇರಿಸಲಾಗಿತ್ತು. ಕೊವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವಕ್ಕೆ ಆಗಮಿಸಿದವರ ಸಂಖ್ಯೆ ಕಡಿಮೆ ಆಗಿದ್ದು, ಅನೇಕರು ಆನ್​ಲೈನ್​ ಮೂಲಕವೇ ಸಮಾರಂಭ ವೀಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

Published On - 5:07 pm, Wed, 26 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?