AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿ ಕಚೇರಿಯನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್​ ಮಾಡುವಂತೆ ಯೋಗಿ ಬಳಿ ಮಾಯಾವತಿ ಮನವಿ

ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ ಲಕ್ನೋದಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿದ್ದಾರೆ. ಬಿಎಸ್​ಪಿ ಕಚೇರಿ ಅಲ್ಲಿರುವುದು ಸುರಕ್ಷಿತವಲ್ಲ, ಯಾವ ಸಮಯದಲ್ಲಿ ಬೇಕಾದರೂ ಅಹಿತಕರ ಘಟನೆಗಳು ಸಂಭವಿಸಬಹುದು. ಅಭದ್ರತೆಯ ಭಾವನೆಯಿಂದಾಗಿ ಪಕ್ಷದ ಬಹುತೇಕ ಸಭೆಗಳನ್ನು ನಮ್ಮ ನಿವಾಸದಲ್ಲಿಯೇ ನಡೆಸಲಾಗುತ್ತಿದೆ ಎಂದು ಮಾಯಾವತಿ ಹೇಳಿದ್ದಾರೆ.

ಬಿಎಸ್​ಪಿ ಕಚೇರಿಯನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್​ ಮಾಡುವಂತೆ ಯೋಗಿ ಬಳಿ ಮಾಯಾವತಿ ಮನವಿ
ಮಾಯಾವತಿImage Credit source: Hindustan Times
ನಯನಾ ರಾಜೀವ್
|

Updated on:Jan 09, 2024 | 10:05 AM

Share

ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ(Mayawati) ಲಕ್ನೋದಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿದ್ದಾರೆ. ಬಿಎಸ್​ಪಿ ಕಚೇರಿ ಅಲ್ಲಿರುವುದು ಸುರಕ್ಷಿತವಲ್ಲ, ಯಾವ ಸಮಯದಲ್ಲಿ ಬೇಕಾದರೂ ಅಹಿತಕರ ಘಟನೆಗಳು ಸಂಭವಿಸಬಹುದು. ಅಭದ್ರತೆಯ ಭಾವನೆಯಿಂದಾಗಿ ಪಕ್ಷದ ಬಹುತೇಕ ಸಭೆಗಳನ್ನು ನಮ್ಮ ನಿವಾಸದಲ್ಲಿಯೇ ನಡೆಸಲಾಗುತ್ತಿದೆ ಎಂದು ಮಾಯಾವತಿ ಹೇಳಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಯಾವತಿ ಎಕ್ಸ್​ನಲ್ಲಿ ಸರಣಿ ಪೋಸ್ಟ್​ಗಳನ್ನು ಮಾಡಿದ್ದಾರೆ, ಹಾಗೂ ಅಭದ್ರತೆಗೆ ಕಾರಣವನ್ನು ಕೂಡ ತಿಳಿಸಿದ್ದಾರೆ. ಸರ್ಕಾರವು ದಲಿತ ವಿರೋಧಿಗಳೊಂದಿಗೆ ಕಟ್ಟುನಿಟ್ಟಾಗಿ ವ್ಯವಹರಿಸಬೇಕು, ಪ್ರಸ್ತುತ ಕಚೇರಿ ಇರುವ ಸ್ಥಳದ ಬದಲು ಸುರಕ್ಷಿತ ಸ್ಥಳದಲ್ಲಿ ಕಚೇರಿ ಸ್ಥಳಾಂತರಿಸಬೇಕು, ಇಲ್ಲದಿದ್ದರೆ ಯಾವುದೇ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯಬಹುದು ಎಂದು ಹೇಳಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ, ದಶಕಗಳ ನಂತರ ಮೈತ್ರಿ ಮಾಡಿಕೊಳ್ಳುವ ಮೂಲಕ ಯುಪಿಯಲ್ಲಿ ಬಿಜೆಪಿಯ ಗೆಲುವಿನ ರಥಕ್ಕೆ ಬ್ರೇಕ್ ಹಾಕಲು ಬಿಎಸ್ಪಿ ಮತ್ತು ಎಸ್ಪಿ ಪ್ರಯತ್ನಿಸಿದ್ದವು. ಆದರೆ, ಚುನಾವಣೆ ಮುಗಿದ ನಂತರ ಬಿಎಸ್ಪಿ ಅಖಿಲೇಶ್ ಯಾದವ್ ಪಕ್ಷದೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿತ್ತು.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಯಾವತಿಯವರ ನಿಲುವು ಕೇಂದ್ರದಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷದ ಮೈತ್ರಿ ಇಂಡಿಯಾ ಮೈತ್ರಿಕೂಟದಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿದೆ. ಆದರೆ ಆಗಾಗ ಬಿಎಸ್‌ಪಿ ಜತೆಗಿನ ಮೈತ್ರಿ ಬಗ್ಗೆ ಕಾಂಗ್ರೆಸ್‌ ನಾಯಕರು ಹೇಳಿಕೆ ನೀಡುತ್ತಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:04 am, Tue, 9 January 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ