AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿಗೆ ಹೊಸ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲು ಮಾಯಾವತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ
ಮಾಯಾವತಿ
ನಯನಾ ರಾಜೀವ್
|

Updated on:Dec 10, 2023 | 2:21 PM

Share

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿ(BSP)ಗೆ ಹೊಸ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲು ಮಾಯಾವತಿ(Mayawati) ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಪಕ್ಷದಲ್ಲಿ ಸಧ್ಯಕ್ಕೆ ರಾಷ್ಟ್ರೀಯ ಸಂಯೋಜಕ ಸ್ಥಾನದಲ್ಲಿರುವ ಆಕಾಶ್ ಅವರಿಗೆ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ನೀಡಲು ಮಾಯಾವತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಮಾಯಾವತಿ ಯಾವ ಹುದ್ದೆಯಲ್ಲಿರುತ್ತಾರೆ, ಮಾಯಾವತಿಯವರ ಮುಂದಿನ ರಾಜಕೀಯ ನಿರ್ಧಾರಗಳೇನು? ನಿವೃತ್ತಿ ಘೋಷಿಸುತ್ತಾರೋ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿಲುವು ಇನ್ನೂ ಸಿಕ್ಕಿಲ್ಲ.  ಪಕ್ಷವನ್ನು ಪುನರ್​ ಸಂಘಟಿಸುವುದು ಅಥವಾ ಪಕ್ಷಕ್ಕೆ ಮರುಜೀವ ನೀಡುವ ಉದ್ದೇಶದಿಂದ ಈ ಬದಲಾವಣೆಗೆ ಮಾಯಾವತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಒಂದು ದಶಕದ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸಿದ್ದಂತಹ ಬಿಎಸ್​ಪಿ ಈಗ ಸಧ್ಯಕ್ಕೆ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯದಲ್ಲಿದೆ. ಯಾವುದೇ ಲೋಕಸಭಾ ಸದಸ್ಯರನ್ನು ಹೊಂದಿರದ ಬಿಎಸ್​ಪಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬೆರಳೆಣಿಕೆ ಸದಸ್ಯರನ್ನು ಹೊಂದಿದೆ. ವರ್ಷದಿಂದ ವರ್ಷಕ್ಕೆ ಚುನಾವಣೆಯಿಂದ ಚುನಾವಣೆಗೆ ಬಿಎಸ್​ಪಿಯ ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:11 pm, Sun, 10 December 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ