AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿ ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ: ಮಾಯಾವತಿ

ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿಯನ್ನು ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಹಲವು ವರ್ಷಗಳಿಂದ ಕಾಂಗ್ರೆಸ್‌ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

ರಾಹುಲ್​ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿ ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ: ಮಾಯಾವತಿ
ಮಾಯಾವತಿImage Credit source: Moneycontrol
Follow us
ನಯನಾ ರಾಜೀವ್
|

Updated on: Sep 10, 2024 | 12:22 PM

ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿಯನ್ನು ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಹಲವು ವರ್ಷಗಳಿಂದ ಕಾಂಗ್ರೆಸ್‌ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ಮುಂದುವರಿಸುವ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಸರಿಯಾದ ಸಮಯ ಬಂದಾಗ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ. ಇದು ಮೀಸಲಾತಿಯನ್ನು ಕೊನೆಗೊಳಿಸುವ ಸಮಯವಲ್ಲ ಎಂದು ಹೇಳಿದ್ದರು.

ಮತ್ತಷ್ಟು ಓದಿ: ಮಹಿಳೆಯರು ಮನೆಯಲ್ಲಿಯೇ ಇರಬೇಕು ಎಂಬುದು ಆರ್​ಎಸ್​ಎಸ್ ನಂಬಿಕೆ; ಅಮೆರಿಕದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ದೀರ್ಘಕಾಲ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಯನ್ನು ಜಾರಿಗೆ ತರಲಿಲ್ಲ, ಜಾತಿ ಗಣತಿ ನಡೆಯದಂತೆ ತಡೆಯುವ ಇವರ ನಾಟಕದ ಬಗ್ಗೆ ಎಚ್ಚರವಿರಲಿ. ಭಾರತ ಉತ್ತಮ ಪರಿಸ್ಥಿತಿಯಲ್ಲಿದ್ದಾಗ ನಾವು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ವಿದೇಶದಲ್ಲಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಈ ನಾಟಕದ ಬಗ್ಗೆ ಈಗ ಎಚ್ಚರದಿಂದಿರಿ ಎಂದು ಬಿಎಸ್‌ಪಿ ಮುಖ್ಯಸ್ಥರು ಹೇಳಿದ್ದಾರೆ.

ಅವರ ಮೀಸಲಾತಿಯನ್ನು ಕೊನೆಗಾಣಿಸುವ ಷಡ್ಯಂತ್ರದಲ್ಲಿ ಕಾಂಗ್ರೆಸ್ ವರ್ಷಗಳಿಂದ ತೊಡಗಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರಿಗೆ ಈ ಪಕ್ಷದಿಂದ ನ್ಯಾಯ ಸಿಗಲಿಲ್ಲ ಎಂದು ಕಾನೂನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಜನರು ಎಚ್ಚರಿಕೆಯಿಂದ ಇರಬೇಕು. ಒಟ್ಟಾರೆ ಹೇಳುವುದಾದರೆ, ಜಾತೀಯತೆ ಸಂಪೂರ್ಣವಾಗಿ ದೇಶದಿಂದ ನಿರ್ಮೂಲನೆಯಾಗುವವರೆಗೆ, ಭಾರತದ ತುಲನಾತ್ಮಕವಾಗಿ ಉತ್ತಮ ಸ್ಥಿತಿಯ ಹೊರತಾಗಿಯೂ, ಈ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯು ಸುಧಾರಿಸುವುದಿಲ್ಲ.

ಜಾತೀಯತೆ ಸಂಪೂರ್ಣವಾಗಿ ನಾಶವಾಗುವವರೆಗೆ ಸರಿಯಾದ ಸಾಂವಿಧಾನಿಕ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವುದು ಅವಶ್ಯಕ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ