AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲ್ಲ ಬಿಎಸ್‌ಪಿ ನಾಯಕಿ ಮಾಯಾವತಿ

ಗುರುವಾರ ಸರಣಿ ಟ್ವೀಟ್ ಮಾಡಿದ ಮಾಯಾವತಿ, ದೇಶದಲ್ಲಿ ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜಾತಿ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ಬಹುಜನರ ಸ್ಥಿತಿ ನೋಡಿದರೆ ಪರಮಪೂಜ್ಯ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಮಾನವೀಯ ಸಮಾನತೆಯ ಸಂವಿಧಾನವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಸಾಮರ್ಥ್ಯ ಕಾಂಗ್ರೆಸ್, ಬಿಜೆಪಿಯಂಥಾ ಪಕ್ಷಗಳಿಗಿಲ್ಲ ಎಂದು ತೋರುತ್ತದೆ.

ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲ್ಲ ಬಿಎಸ್‌ಪಿ ನಾಯಕಿ ಮಾಯಾವತಿ
ಮಾಯಾವತಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 22, 2023 | 1:55 PM

Share

ಬಿಎಸ್‌ಪಿ (BSP) ನಾಯಕಿ ಮಾಯಾವತಿ (Mayawati) ಅವರು ನಾಳೆ ಪಾಟ್ನಾದಲ್ಲಿ (Patna) ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿದ ಮಾಯಾವತಿ, ದೇಶದಲ್ಲಿ ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜಾತಿ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ಬಹುಜನರ ಸ್ಥಿತಿ ನೋಡಿದರೆ ಪರಮಪೂಜ್ಯ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಮಾನವೀಯ ಸಮಾನತೆಯ ಸಂವಿಧಾನವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಸಾಮರ್ಥ್ಯ ಕಾಂಗ್ರೆಸ್, ಬಿಜೆಪಿಯಂಥಾ ಪಕ್ಷಗಳಿಗಿಲ್ಲ ಎಂದು ತೋರುತ್ತದೆ. ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಟ್ಟಾಗಿ ಎತ್ತುತ್ತಿರುವ ವಿಚಾರಗಳು ಮತ್ತು ಇಂತಹ ಪರಿಸ್ಥಿತಿಯಲ್ಲಿ ಜೂನ್ 23 ರಂದು ನಿತೀಶ್ ಕುಮಾರ್ ಅವರು ನಡೆಸಲಿರುವ ವಿರೋಧ ಪಕ್ಷದ ನಾಯಕರ ಪಾಟ್ನಾ ಸಭೆಯು ದಿಲ್ ಮಿಲೇ ನಾ ಮಿಲೇ ಹಾಥ್ ಮಿಲಾತೇ ರಹೀಯೇ (ಯೋಚನೆಗಳು ಒಂದೇ ಆಗಿರದಿದ್ದರೂ, ಕೈಕುಲುಕುತ್ತಲೇ ಇರಿ) ಎಂಬ ನುಡಿಗಟ್ಟನ್ನು ನೆನಪಿಸುತ್ತದೆ ಎಂದಿದ್ದಾರೆ.

ಅಂದಹಾಗೆ, ಮುಂದಿನ ಲೋಕಸಭಾ ಚುನಾವಣೆಯ ತಯಾರಿಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಪ್ರಯತ್ನ ಮಾಡುವ ಮುನ್ನ ಈ ಪಕ್ಷಗಳು ಜನಸಾಮಾನ್ಯರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಿ ತಮ್ಮ ಉದ್ದೇಶವನ್ನು ಸ್ವಲ್ಪವಾದರೂ ಸರಿ ಮಾಡಿಕೊಂಡಿದ್ದರೆ ಚೆನ್ನಾಗಿತ್ತು. ‘ಬಾಯಲ್ಲಿ ರಾಮ, ಬದಿಯಲ್ಲಿ ಚಾಕು’ ಎಷ್ಟು ದಿನ ಉಳಿಯುತ್ತದೆ?

ಯುಪಿಯಲ್ಲಿ 80 ಲೋಕಸಭಾ ಸ್ಥಾನಗಳು ಚುನಾವಣಾ ಯಶಸ್ಸಿಗೆ ಪ್ರಮುಖವೆಂದು ಹೇಳಲಾಗುತ್ತದೆ, ಆದರೆ ವಿರೋಧ ಪಕ್ಷಗಳ ವರ್ತನೆಯಿಂದ ಅವರು ಇಲ್ಲಿ ತಮ್ಮ ಉದ್ದೇಶದ ಬಗ್ಗೆ ಗಂಭೀರವಾಗಿ ಮತ್ತು ನಿಜವಾದ ಕಾಳಜಿಯನ್ನು ಹೊಂದಿದ್ದಾರೆಂದು ತೋರುತ್ತಿಲ್ಲ. ಸರಿಯಾದ ಆದ್ಯತೆಗಳಿಲ್ಲದೆ, ಇಲ್ಲಿನ ಲೋಕಸಭಾ ಚುನಾವಣೆಯ ಸಿದ್ಧತೆಗಳು ನಿಜವಾಗಿಯೂ ಅಗತ್ಯ ಬದಲಾವಣೆಯನ್ನು ತರುತ್ತವೆಯೇ? ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜೂ.24ರಂದು ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳ ಭಾಗವಾಗಿ ಸಭೆಯನ್ನು ಕರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:22 pm, Thu, 22 June 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​