AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ
ಡ್ಯಾನಿಶ್ ಅಲಿ
TV9 Web
| Updated By: Lakshmi Hegde|

Updated on:Dec 21, 2021 | 4:34 PM

Share

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೀಗ ಕೊರೊನಾ ವೈರಸ್ ಆತಂಕ ಎದುರಾಗಿದೆ. ಸೋಮವಾರದವರೆಗೂ ಕಲಾಪದಲ್ಲಿ ಪಾಲ್ಗೊಂಡಿದ್ದ ಬಹುಜನ ಸಮಾಜವಾದಿ ಪಾರ್ಟಿ ಸಂಸದ ಕನ್ವರ್ ಡ್ಯಾನಿಶ್​ ಅಲಿಯವರಿಗೆ ಕೊವಿಡ್​ 19 ಸೋಂಕು ತಗುಲಿದೆ. ಇವರಿಗೆ ಎರಡೂ ಡೋಸ್​ ಕೊರೊನಾ ಲಸಿಕೆ ಆಗಿದ್ದರೂ ಸೋಂಕು ತಗುಲಿದ್ದು, ಟ್ವೀಟ್ ಮೂಲಕ ತಿಳಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೊವಿಡ್ 19 ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. 

ಸದ್ಯ ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ, ಬೇಗನೇ ಗುಣಮುಖನಾಗುತ್ತೇನೆ ಎಂದು ಹೇಳಿರುವ ಡ್ಯಾನಿಶ್​ ಅಲಿ, ನಾನು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿದ್ದೆ. ಹೀಗಿದ್ದಾಗ್ಯೂ ಕೂಡ ಕೊವಿಡ್ 19ಗೆ ಒಳಗಾಗಿದ್ದೇನೆ. ಸೋಮವಾರವೂ ಕೂಡ ನಾನು ಕಲಾಪದಲ್ಲಿ ಪಾಲ್ಗೊಂಡಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೂಡಲೇ ಐಸೋಲೇಟ್ ಆಗಿ. ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ಇದೀಗ ಡ್ಯಾನಿಶ್​ ಅಲಿಗೆ ಕೊವಿಡ್​ 19 ದೃಢಪಟ್ಟಿದ್ದು, ಇನ್ನೂ ಹಲವರು ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ.  ಕೊವಿಡ್ 19 ನೊಂದಿಗೆ ಒಮಿಕ್ರಾನ್ ಕೂಡ ಒಂದೇ ಸಮ ಏರಿಕೆಯಾಗುತ್ತಿದೆ. ಈಗಾಗಲೇ ದೇಶದಲ್ಲಿ 200 ಮಂದಿಯಲ್ಲಿ ಒಮಿಕ್ರಾನ್​ ದೃಢಪಟ್ಟಿದೆ. ಅದರಲ್ಲಿ 77 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

Published On - 4:33 pm, Tue, 21 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ