AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ
ಡ್ಯಾನಿಶ್ ಅಲಿ
TV9 Web
| Edited By: |

Updated on:Dec 21, 2021 | 4:34 PM

Share

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೀಗ ಕೊರೊನಾ ವೈರಸ್ ಆತಂಕ ಎದುರಾಗಿದೆ. ಸೋಮವಾರದವರೆಗೂ ಕಲಾಪದಲ್ಲಿ ಪಾಲ್ಗೊಂಡಿದ್ದ ಬಹುಜನ ಸಮಾಜವಾದಿ ಪಾರ್ಟಿ ಸಂಸದ ಕನ್ವರ್ ಡ್ಯಾನಿಶ್​ ಅಲಿಯವರಿಗೆ ಕೊವಿಡ್​ 19 ಸೋಂಕು ತಗುಲಿದೆ. ಇವರಿಗೆ ಎರಡೂ ಡೋಸ್​ ಕೊರೊನಾ ಲಸಿಕೆ ಆಗಿದ್ದರೂ ಸೋಂಕು ತಗುಲಿದ್ದು, ಟ್ವೀಟ್ ಮೂಲಕ ತಿಳಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೊವಿಡ್ 19 ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. 

ಸದ್ಯ ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ, ಬೇಗನೇ ಗುಣಮುಖನಾಗುತ್ತೇನೆ ಎಂದು ಹೇಳಿರುವ ಡ್ಯಾನಿಶ್​ ಅಲಿ, ನಾನು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿದ್ದೆ. ಹೀಗಿದ್ದಾಗ್ಯೂ ಕೂಡ ಕೊವಿಡ್ 19ಗೆ ಒಳಗಾಗಿದ್ದೇನೆ. ಸೋಮವಾರವೂ ಕೂಡ ನಾನು ಕಲಾಪದಲ್ಲಿ ಪಾಲ್ಗೊಂಡಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೂಡಲೇ ಐಸೋಲೇಟ್ ಆಗಿ. ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ಇದೀಗ ಡ್ಯಾನಿಶ್​ ಅಲಿಗೆ ಕೊವಿಡ್​ 19 ದೃಢಪಟ್ಟಿದ್ದು, ಇನ್ನೂ ಹಲವರು ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ.  ಕೊವಿಡ್ 19 ನೊಂದಿಗೆ ಒಮಿಕ್ರಾನ್ ಕೂಡ ಒಂದೇ ಸಮ ಏರಿಕೆಯಾಗುತ್ತಿದೆ. ಈಗಾಗಲೇ ದೇಶದಲ್ಲಿ 200 ಮಂದಿಯಲ್ಲಿ ಒಮಿಕ್ರಾನ್​ ದೃಢಪಟ್ಟಿದೆ. ಅದರಲ್ಲಿ 77 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

Published On - 4:33 pm, Tue, 21 December 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ