Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ.

ನಿನ್ನೆಯವರೆಗೂ ಸಂಸತ್​​ ಕಲಾಪಕ್ಕೆ ಹಾಜರಾಗಿದ್ದ ಸಂಸದ ಡ್ಯಾನಿಶ್ ಅಲಿಗೆ ಕೊವಿಡ್​ 19; ಇನ್ನೂ ಹಲವು ಸಂಸದರಿಗೆ ಆತಂಕ
ಡ್ಯಾನಿಶ್ ಅಲಿ
Follow us
TV9 Web
| Updated By: Lakshmi Hegde

Updated on:Dec 21, 2021 | 4:34 PM

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೀಗ ಕೊರೊನಾ ವೈರಸ್ ಆತಂಕ ಎದುರಾಗಿದೆ. ಸೋಮವಾರದವರೆಗೂ ಕಲಾಪದಲ್ಲಿ ಪಾಲ್ಗೊಂಡಿದ್ದ ಬಹುಜನ ಸಮಾಜವಾದಿ ಪಾರ್ಟಿ ಸಂಸದ ಕನ್ವರ್ ಡ್ಯಾನಿಶ್​ ಅಲಿಯವರಿಗೆ ಕೊವಿಡ್​ 19 ಸೋಂಕು ತಗುಲಿದೆ. ಇವರಿಗೆ ಎರಡೂ ಡೋಸ್​ ಕೊರೊನಾ ಲಸಿಕೆ ಆಗಿದ್ದರೂ ಸೋಂಕು ತಗುಲಿದ್ದು, ಟ್ವೀಟ್ ಮೂಲಕ ತಿಳಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೊವಿಡ್ 19 ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. 

ಸದ್ಯ ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ, ಬೇಗನೇ ಗುಣಮುಖನಾಗುತ್ತೇನೆ ಎಂದು ಹೇಳಿರುವ ಡ್ಯಾನಿಶ್​ ಅಲಿ, ನಾನು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿದ್ದೆ. ಹೀಗಿದ್ದಾಗ್ಯೂ ಕೂಡ ಕೊವಿಡ್ 19ಗೆ ಒಳಗಾಗಿದ್ದೇನೆ. ಸೋಮವಾರವೂ ಕೂಡ ನಾನು ಕಲಾಪದಲ್ಲಿ ಪಾಲ್ಗೊಂಡಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೂಡಲೇ ಐಸೋಲೇಟ್ ಆಗಿ. ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.  ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್​ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ಇದೀಗ ಡ್ಯಾನಿಶ್​ ಅಲಿಗೆ ಕೊವಿಡ್​ 19 ದೃಢಪಟ್ಟಿದ್ದು, ಇನ್ನೂ ಹಲವರು ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ.  ಕೊವಿಡ್ 19 ನೊಂದಿಗೆ ಒಮಿಕ್ರಾನ್ ಕೂಡ ಒಂದೇ ಸಮ ಏರಿಕೆಯಾಗುತ್ತಿದೆ. ಈಗಾಗಲೇ ದೇಶದಲ್ಲಿ 200 ಮಂದಿಯಲ್ಲಿ ಒಮಿಕ್ರಾನ್​ ದೃಢಪಟ್ಟಿದೆ. ಅದರಲ್ಲಿ 77 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

Published On - 4:33 pm, Tue, 21 December 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ