AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ: ಬಿಎಸ್​ಪಿ ಅಧಿನಾಯಕಿ ಮಾಯಾವತಿ ಘೋಷಣೆ

ನಾನು ಅಧಿಕಾರಕ್ಕೋಸ್ಕರ ತತ್ವ ಸಿದ್ಧಾಂತಗಳೊಂದಿಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಇನ್ನುಮುಂದೆಯೂ ಬಿಎಸ್​ಪಿ ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾವು 2007ರಂತೆಯೇ ಉತ್ತರಪ್ರದೇಶದಲ್ಲಿ ಸ್ವಂತ ಬಲದಿಂದ ಗದ್ದುಗೆಗೆ ಏರರುವ ವಿಶ್ವಾಸವಿದೆ.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ:  ಬಿಎಸ್​ಪಿ ಅಧಿನಾಯಕಿ ಮಾಯಾವತಿ ಘೋಷಣೆ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
Skanda
| Edited By: |

Updated on:Jan 15, 2021 | 4:54 PM

Share

ಲಕ್ನೋ: ಬಹುಜನ ಸಮಾಜ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಎರಡೂ ರಾಜ್ಯಗಳಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು BSP ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಇಂದು ತಮ್ಮ 65ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಹೇಳಿದ್ದಾರೆ.

2022 Uttar Pradesh Legislative Assembly election ನಾನು ಅಧಿಕಾರಕ್ಕೋಸ್ಕರ ತತ್ವ ಸಿದ್ಧಾಂತಗಳೊಂದಿಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಇನ್ನು ಮುಂದೆಯೂ ಬಿಎಸ್​ಪಿ ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾವು 2007ರಂತೆಯೇ ಉತ್ತರಪ್ರದೇಶದಲ್ಲಿ ಸ್ವಂತ ಬಲದಿಂದ ಗದ್ದುಗೆಗೆ ಏರುವ ವಿಶ್ವಾಸವಿದೆ. ಇದಕ್ಕಾಗಿ ಈಗಿಂದಲೇ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕರೆಕೊಟ್ಟಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ: ಕೊರೊನಾ ಲಸಿಕೆ ವಿತರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮಾಯಾವತಿ, ಕೇಂದ್ರ ಸರ್ಕಾರ ಉತ್ತಮ ನಿರ್ಧಾರವನ್ನೇ ಮಾಡಿದೆ. ಆದರೆ, ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಭರವಸೆಯನ್ನೂ ನೀಡಿದ್ದಾರೆ.

ಇದೇವೇಳೆ, ತನ್ನ ಹುಟ್ಟುಹಬ್ಬವನ್ನು ಜನಕಲ್ಯಾಣ ದಿವಸವೆಂದು ಆಚರಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದು, ಬಡವರು, ಅಶಕ್ತರು ಮತ್ತು ಕೊರೊನಾದಿಂದ ಸಂಕಷ್ಟಕ್ಕೀಡಾದವರಿಗೆ ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡಿ.. ಭಾರತ ಸರ್ಕಾರಕ್ಕೆ ಹರೀಶ್ ರಾವತ್ ಮನವಿ

Published On - 4:49 pm, Fri, 15 January 21

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ