AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ: ಬಿಎಸ್​ಪಿ ಅಧಿನಾಯಕಿ ಮಾಯಾವತಿ ಘೋಷಣೆ

ನಾನು ಅಧಿಕಾರಕ್ಕೋಸ್ಕರ ತತ್ವ ಸಿದ್ಧಾಂತಗಳೊಂದಿಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಇನ್ನುಮುಂದೆಯೂ ಬಿಎಸ್​ಪಿ ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾವು 2007ರಂತೆಯೇ ಉತ್ತರಪ್ರದೇಶದಲ್ಲಿ ಸ್ವಂತ ಬಲದಿಂದ ಗದ್ದುಗೆಗೆ ಏರರುವ ವಿಶ್ವಾಸವಿದೆ.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ:  ಬಿಎಸ್​ಪಿ ಅಧಿನಾಯಕಿ ಮಾಯಾವತಿ ಘೋಷಣೆ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
Skanda
| Edited By: |

Updated on:Jan 15, 2021 | 4:54 PM

Share

ಲಕ್ನೋ: ಬಹುಜನ ಸಮಾಜ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಎರಡೂ ರಾಜ್ಯಗಳಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು BSP ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಇಂದು ತಮ್ಮ 65ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಹೇಳಿದ್ದಾರೆ.

2022 Uttar Pradesh Legislative Assembly election ನಾನು ಅಧಿಕಾರಕ್ಕೋಸ್ಕರ ತತ್ವ ಸಿದ್ಧಾಂತಗಳೊಂದಿಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಇನ್ನು ಮುಂದೆಯೂ ಬಿಎಸ್​ಪಿ ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾವು 2007ರಂತೆಯೇ ಉತ್ತರಪ್ರದೇಶದಲ್ಲಿ ಸ್ವಂತ ಬಲದಿಂದ ಗದ್ದುಗೆಗೆ ಏರುವ ವಿಶ್ವಾಸವಿದೆ. ಇದಕ್ಕಾಗಿ ಈಗಿಂದಲೇ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕರೆಕೊಟ್ಟಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ: ಕೊರೊನಾ ಲಸಿಕೆ ವಿತರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮಾಯಾವತಿ, ಕೇಂದ್ರ ಸರ್ಕಾರ ಉತ್ತಮ ನಿರ್ಧಾರವನ್ನೇ ಮಾಡಿದೆ. ಆದರೆ, ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಭರವಸೆಯನ್ನೂ ನೀಡಿದ್ದಾರೆ.

ಇದೇವೇಳೆ, ತನ್ನ ಹುಟ್ಟುಹಬ್ಬವನ್ನು ಜನಕಲ್ಯಾಣ ದಿವಸವೆಂದು ಆಚರಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದು, ಬಡವರು, ಅಶಕ್ತರು ಮತ್ತು ಕೊರೊನಾದಿಂದ ಸಂಕಷ್ಟಕ್ಕೀಡಾದವರಿಗೆ ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡಿ.. ಭಾರತ ಸರ್ಕಾರಕ್ಕೆ ಹರೀಶ್ ರಾವತ್ ಮನವಿ

Published On - 4:49 pm, Fri, 15 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ