AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afzal Ansari: ಬಿಎಸ್‌ಪಿಯ ಅಫ್ಜಲ್ ಅನ್ಸಾರಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ

ಕ್ರಿಮಿನಲ್ ಪ್ರಕರಣದಲ್ಲಿ ಬಿಎಸ್‌ಪಿಯ ಅಫ್ಜಲ್ ಅನ್ಸಾರಿ ದೋಷಿ ಎಂದು ಘೋಷಿಸಿದ ನ್ಯಾಯಾಲಯ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸಂಸತ್ತಿನ ನಿಯಮಗಳ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಯಾವುದೇ ಸದಸ್ಯರು ಲೋಕಸಭ ಸ್ಥಾನಕ್ಕೆ ಅನರ್ಹರಾಗುತ್ತಾರೆ

Afzal Ansari: ಬಿಎಸ್‌ಪಿಯ ಅಫ್ಜಲ್ ಅನ್ಸಾರಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ
ಅಪ್ಜಲ್ ಅನ್ಸಾರಿ
ರಶ್ಮಿ ಕಲ್ಲಕಟ್ಟ
|

Updated on:May 01, 2023 | 8:12 PM

Share

ಬಹುಜನ ಸಮಾಜ ಪಕ್ಷ  (BSP) ಸಂಸದ ಅಫ್ಜಲ್ ಅನ್ಸಾರಿಯನ್ನು ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು  ಹೇಳಿ ಮತ್ತು 4 ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ನಂತರ ಅವರನ್ನು ಈಗ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಗ್ಯಾಂಗ್ ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹೋದರನಾಗಿರುವ  ಸಂಸದ ಅಫ್ಜಲ್ ಅನ್ಸಾರಿ ಅವರನ್ನು 2007 ರ ಗ್ಯಾಂಗ್​​ಸ್ಟರ್ ಕಾಯ್ದೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಣೆ ಆದ ನಂತರ ಸೋಮವಾರ ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. 2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ ರೈ (BJP MLA Krishnanand Rai) ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌ಪಿ ನಾಯಕ ಅಫ್ಜಲ್ ಅನ್ಸಾರಿ (Afzal Ansari) ದೋಷಿ ಎಂದು ಘೋಷಿಸಿದ ಘಾಜಿಪುರ ನ್ಯಾಯಾಲಯ 4 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ವಿಧಿಸಿತ್ತು.  ಇದೇ ಪ್ರಕರಣದಲ್ಲಿ ಅವರ ಸಹೋದರ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸಂಸತ್ತಿನ ನಿಯಮಗಳ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಯಾವುದೇ ಸದಸ್ಯರು ಲೋಕಸಭ ಸ್ಥಾನಕ್ಕೆ ಅನರ್ಹರಾಗುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019 ರ ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ, ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅದೇ ನಿಯಮದ ಪ್ರಕಾರ ಇತ್ತೀಚೆಗೆ ತಮ್ಮ ಸಂಸದ ಸ್ಥಾನ ಕಳೆದುಕೊಂಡಿದ್ದರು.

ಅಫ್ಜಲ್ ಅನ್ಸಾರಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಮುನ್ನ ಘಾಜಿಪುರ ನ್ಯಾಯಾಲಯ  ಗ್ಯಾಂಗ್​​ಸ್ಟರ್, ಮಾಫಿಯಾ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿತ್ತು.

ಇದನ್ನೂ ಓದಿ: ರಾಜೀವ್ ಗಾಂಧಿ ಮೃತದೇಹದ ಒಂದು ಚೂರೂ ಸಿಗಲಿಲ್ಲ; ವಿವಾದಕ್ಕೀಡಾದ ಆಜಂ ಖಾನ್ ಹೇಳಿಕೆ

ಜನವರಿಯಲ್ಲಿ ಪೊಲೀಸರು ಮುಖ್ತಾರ್ ಅನ್ಸಾರಿ ವಿರುದ್ಧ 2001 ರ ಉಸ್ರಿ ಚಟ್ಟಿ ಗ್ಯಾಂಗ್​​ವಾರ್ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ರ ಅಡಿಯಲ್ಲಿ ಅನ್ಸಾರಿ ವಿರುದ್ಧ ಗಾಜಿಪುರದ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ 18 ರಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಮಾರ್ಚ್ 15 ರಂದು ಗಾಜಿಪುರ ಎಂಪಿ ಎಂಎಲ್​​ಎ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಇದು ಅನ್ಸಾರಿಯನ್ನು ಬಂದಾದಲ್ಲಿನ ಉನ್ನತ ದರ್ಜೆಯ ಜೈಲಿನಲ್ಲಿ ಇರಿಸಲು ಅನುಮತಿ ನೀಡಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅನ್ಸಾರಿ ಮತ್ತು ಆತನ ಸಹಾಯಕ ಭೀಮ್ ಸಿಂಗ್‌ಗೆ ಘಾಜಿಪುರದ ಗ್ಯಾಂಗ್​​ಸ್ಟರ್ ನ್ಯಾಯಾಲಯವು ಕೊಲೆ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಈ ಪ್ರಕರಣಗಳಲ್ಲಿ ಕಾನ್‌ಸ್ಟೆಬಲ್ ರಘುವಂಶ್ ಸಿಂಗ್ ಹತ್ಯೆ ಮತ್ತು ಘಾಜಿಪುರದ ಹೆಚ್ಚುವರಿ ಎಸ್‌ಪಿ ಮೇಲೆ ಕೊಲೆಗೈದ ಹಲ್ಲೆ ಪ್ರಕರಣಗಳು ಸೇರಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Mon, 1 May 23

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್