ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ

ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದರು, ಅವರು ತನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ
ಗುರುಗ್ರಾಮ್ ಹೋಟೆಲ್‌ನಲ್ಲಿ ನಟಿ ಮೇಲೆ ಅತ್ಯಾಚಾರ
Follow us
|

Updated on: Jul 21, 2023 | 10:45 AM

ಸಿನಿಮಾಗಳಲ್ಲಿ ಅವಕಾಶ ಕೊಡಿಸ್ತೀನಿ ಅಂತಾ ದೆಹಲಿ ಮೂಲದ 24 ವರ್ಷದ ಉದಯೋನ್ಮುಖ ಭೋಜ್‌ಪುರಿ ನಟಿಯನ್ನು (Bhojpuri artiste) ಸಂದರ್ಶನಕ್ಕೆ ಹೋಟೆಲಿಗೆ ಕರೆದೊಯ್ದು ಇನ್‌ಸ್ಟಾಗ್ರಾಮ್ ಸ್ನೇಹಿತ ( Instagram friend) ಅತ್ಯಾಚಾರವೆಸಗಿದ್ದಾನೆ (allegedly raped) ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವತಿ ನೀಡಿರುವ ದೂರಿನಲ್ಲಿ ತಾನು ಭೋಜ್‌ಪುರಿ ಕಲಾವಿದೆ ಮತ್ತು ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆ (victim) ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿದ್ದಾಳೆ. ಯುವತಿ ನಿಯಮಿತವಾಗಿ ತನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾಳೆ.

ಇನ್ನು ಸಂತ್ರಸ್ತೆ ತನ್ನ ದೂರಿನಲ್ಲಿ, ಕೆಲವು ದಿನಗಳ ಹಿಂದೆ ತಾನು ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹೇಶ್ ಪಾಂಡೆ (Mahesh Pandey) ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ ಮೂಲಕ ತನ್ನ ಸಂಪರ್ಕಕ್ಕೆ ಬಂದಿದ್ದಾನೆ. ಜೂನ್ 29 ರಂದು ಆತ ಸಂದರ್ಶನದ ನೆಪದಲ್ಲಿ ನನ್ನನ್ನು ಗುರುಗ್ರಾಮ್‌ನ (Delhi-NCR) ಉದ್ಯೋಗ್ ವಿಹಾರ್ ಪ್ರದೇಶದ ಹೋಟೆಲ್‌ಗೆ (Gurgaon hotel) ಕರೆದರು.

ನಾನು ಹೋಟೆಲ್ ತಲುಪಿದಾಗ, ಮಹೇಶ್ ಅದಾಗಲೇ ತಾನು ಬುಕ್ ಮಾಡಿದ್ದ ಕೊಠಡಿಗೆ ನನ್ನನ್ನು ಕರೆದೊಯ್ದರು. ಅಲ್ಲಿ ಆತನ ನನ್ನನ್ನು ಕೆಲವು ಪ್ರಶ್ನೆಗಳನ್ನು ಕೇಳಿದರು. ನಂತರ ಅವರು ಮದ್ಯಪಾನ ಮಾಡಲು ಪ್ರಾರಂಭಿಸಿದರು. ಇದಾದ ನಂತರ ನಾನು ಹೊರಡಲು ಪ್ರಾರಂಭಿಸಿದಾಗ, ಆತ ನನ್ನನ್ನು ಬಲವಂತಪಡಿಸಿ, ನನ್ನ ಮೇಲೆ ಅತ್ಯಾಚಾರ ಎಸಗಿದ ಎಂದು ಹೇಳಿದ್ದಾರೆ.

ಘಟನೆಯ ನಂತರ ವಿಷಯ ಬಹಿರಂಗಪಡಿಸಿದರೆ ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ. ಅದಾದ ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದಾರೆ. ಅವರು ನನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ನಟಿ ಹೇಳಿಕೊಂಡಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರೋಪಿ ಮಹೇಶ್ ಪಾಂಡೆ ಗುರುಗ್ರಾಮ್‌ನ ಚಕರ್‌ಪುರ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ. ಮಹಿಳೆಯ ದೂರಿನ ನಂತರ ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಆರೋಪಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸಿಪಿ ಕ್ರೈಂ, ವರುಣ್ ದಹಿಯಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ