AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ

ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದರು, ಅವರು ತನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ
ಗುರುಗ್ರಾಮ್ ಹೋಟೆಲ್‌ನಲ್ಲಿ ನಟಿ ಮೇಲೆ ಅತ್ಯಾಚಾರ
Follow us
ಸಾಧು ಶ್ರೀನಾಥ್​
|

Updated on: Jul 21, 2023 | 10:45 AM

ಸಿನಿಮಾಗಳಲ್ಲಿ ಅವಕಾಶ ಕೊಡಿಸ್ತೀನಿ ಅಂತಾ ದೆಹಲಿ ಮೂಲದ 24 ವರ್ಷದ ಉದಯೋನ್ಮುಖ ಭೋಜ್‌ಪುರಿ ನಟಿಯನ್ನು (Bhojpuri artiste) ಸಂದರ್ಶನಕ್ಕೆ ಹೋಟೆಲಿಗೆ ಕರೆದೊಯ್ದು ಇನ್‌ಸ್ಟಾಗ್ರಾಮ್ ಸ್ನೇಹಿತ ( Instagram friend) ಅತ್ಯಾಚಾರವೆಸಗಿದ್ದಾನೆ (allegedly raped) ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವತಿ ನೀಡಿರುವ ದೂರಿನಲ್ಲಿ ತಾನು ಭೋಜ್‌ಪುರಿ ಕಲಾವಿದೆ ಮತ್ತು ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆ (victim) ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿದ್ದಾಳೆ. ಯುವತಿ ನಿಯಮಿತವಾಗಿ ತನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾಳೆ.

ಇನ್ನು ಸಂತ್ರಸ್ತೆ ತನ್ನ ದೂರಿನಲ್ಲಿ, ಕೆಲವು ದಿನಗಳ ಹಿಂದೆ ತಾನು ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹೇಶ್ ಪಾಂಡೆ (Mahesh Pandey) ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ ಮೂಲಕ ತನ್ನ ಸಂಪರ್ಕಕ್ಕೆ ಬಂದಿದ್ದಾನೆ. ಜೂನ್ 29 ರಂದು ಆತ ಸಂದರ್ಶನದ ನೆಪದಲ್ಲಿ ನನ್ನನ್ನು ಗುರುಗ್ರಾಮ್‌ನ (Delhi-NCR) ಉದ್ಯೋಗ್ ವಿಹಾರ್ ಪ್ರದೇಶದ ಹೋಟೆಲ್‌ಗೆ (Gurgaon hotel) ಕರೆದರು.

ನಾನು ಹೋಟೆಲ್ ತಲುಪಿದಾಗ, ಮಹೇಶ್ ಅದಾಗಲೇ ತಾನು ಬುಕ್ ಮಾಡಿದ್ದ ಕೊಠಡಿಗೆ ನನ್ನನ್ನು ಕರೆದೊಯ್ದರು. ಅಲ್ಲಿ ಆತನ ನನ್ನನ್ನು ಕೆಲವು ಪ್ರಶ್ನೆಗಳನ್ನು ಕೇಳಿದರು. ನಂತರ ಅವರು ಮದ್ಯಪಾನ ಮಾಡಲು ಪ್ರಾರಂಭಿಸಿದರು. ಇದಾದ ನಂತರ ನಾನು ಹೊರಡಲು ಪ್ರಾರಂಭಿಸಿದಾಗ, ಆತ ನನ್ನನ್ನು ಬಲವಂತಪಡಿಸಿ, ನನ್ನ ಮೇಲೆ ಅತ್ಯಾಚಾರ ಎಸಗಿದ ಎಂದು ಹೇಳಿದ್ದಾರೆ.

ಘಟನೆಯ ನಂತರ ವಿಷಯ ಬಹಿರಂಗಪಡಿಸಿದರೆ ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ. ಅದಾದ ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದಾರೆ. ಅವರು ನನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ನಟಿ ಹೇಳಿಕೊಂಡಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರೋಪಿ ಮಹೇಶ್ ಪಾಂಡೆ ಗುರುಗ್ರಾಮ್‌ನ ಚಕರ್‌ಪುರ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ. ಮಹಿಳೆಯ ದೂರಿನ ನಂತರ ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಆರೋಪಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸಿಪಿ ಕ್ರೈಂ, ವರುಣ್ ದಹಿಯಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ