AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ

ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದರು, ಅವರು ತನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ
ಗುರುಗ್ರಾಮ್ ಹೋಟೆಲ್‌ನಲ್ಲಿ ನಟಿ ಮೇಲೆ ಅತ್ಯಾಚಾರ
ಸಾಧು ಶ್ರೀನಾಥ್​
|

Updated on: Jul 21, 2023 | 10:45 AM

Share

ಸಿನಿಮಾಗಳಲ್ಲಿ ಅವಕಾಶ ಕೊಡಿಸ್ತೀನಿ ಅಂತಾ ದೆಹಲಿ ಮೂಲದ 24 ವರ್ಷದ ಉದಯೋನ್ಮುಖ ಭೋಜ್‌ಪುರಿ ನಟಿಯನ್ನು (Bhojpuri artiste) ಸಂದರ್ಶನಕ್ಕೆ ಹೋಟೆಲಿಗೆ ಕರೆದೊಯ್ದು ಇನ್‌ಸ್ಟಾಗ್ರಾಮ್ ಸ್ನೇಹಿತ ( Instagram friend) ಅತ್ಯಾಚಾರವೆಸಗಿದ್ದಾನೆ (allegedly raped) ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವತಿ ನೀಡಿರುವ ದೂರಿನಲ್ಲಿ ತಾನು ಭೋಜ್‌ಪುರಿ ಕಲಾವಿದೆ ಮತ್ತು ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆ (victim) ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿದ್ದಾಳೆ. ಯುವತಿ ನಿಯಮಿತವಾಗಿ ತನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾಳೆ.

ಇನ್ನು ಸಂತ್ರಸ್ತೆ ತನ್ನ ದೂರಿನಲ್ಲಿ, ಕೆಲವು ದಿನಗಳ ಹಿಂದೆ ತಾನು ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹೇಶ್ ಪಾಂಡೆ (Mahesh Pandey) ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ ಮೂಲಕ ತನ್ನ ಸಂಪರ್ಕಕ್ಕೆ ಬಂದಿದ್ದಾನೆ. ಜೂನ್ 29 ರಂದು ಆತ ಸಂದರ್ಶನದ ನೆಪದಲ್ಲಿ ನನ್ನನ್ನು ಗುರುಗ್ರಾಮ್‌ನ (Delhi-NCR) ಉದ್ಯೋಗ್ ವಿಹಾರ್ ಪ್ರದೇಶದ ಹೋಟೆಲ್‌ಗೆ (Gurgaon hotel) ಕರೆದರು.

ನಾನು ಹೋಟೆಲ್ ತಲುಪಿದಾಗ, ಮಹೇಶ್ ಅದಾಗಲೇ ತಾನು ಬುಕ್ ಮಾಡಿದ್ದ ಕೊಠಡಿಗೆ ನನ್ನನ್ನು ಕರೆದೊಯ್ದರು. ಅಲ್ಲಿ ಆತನ ನನ್ನನ್ನು ಕೆಲವು ಪ್ರಶ್ನೆಗಳನ್ನು ಕೇಳಿದರು. ನಂತರ ಅವರು ಮದ್ಯಪಾನ ಮಾಡಲು ಪ್ರಾರಂಭಿಸಿದರು. ಇದಾದ ನಂತರ ನಾನು ಹೊರಡಲು ಪ್ರಾರಂಭಿಸಿದಾಗ, ಆತ ನನ್ನನ್ನು ಬಲವಂತಪಡಿಸಿ, ನನ್ನ ಮೇಲೆ ಅತ್ಯಾಚಾರ ಎಸಗಿದ ಎಂದು ಹೇಳಿದ್ದಾರೆ.

ಘಟನೆಯ ನಂತರ ವಿಷಯ ಬಹಿರಂಗಪಡಿಸಿದರೆ ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ. ಅದಾದ ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದಾರೆ. ಅವರು ನನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ನಟಿ ಹೇಳಿಕೊಂಡಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರೋಪಿ ಮಹೇಶ್ ಪಾಂಡೆ ಗುರುಗ್ರಾಮ್‌ನ ಚಕರ್‌ಪುರ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ. ಮಹಿಳೆಯ ದೂರಿನ ನಂತರ ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಆರೋಪಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸಿಪಿ ಕ್ರೈಂ, ವರುಣ್ ದಹಿಯಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ