AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸರ್ಕಾರ ರೈತಪರವಾಗಿದೆ ಎಂದು ಅಂಕಿಅಂಶ ಮುಂದಿಟ್ಟ ನಿರ್ಮಲಾ ಸೀತಾರಾಮನ್

ಪಶುಸಂಗೋಪನೆ, ಡೇರಿ, ಮೀನುಗಾರಿಕೆಗೆ ₹40 ಸಾವಿರ ಕೋಟಿ ಒದಗಿಸಲಾಗುವುದು. ಹಾಳಾಗುವ ಉತ್ಪನ್ನಗಳ ಪಟ್ಟಿಗೆ 22 ಕೃಷಿ ಉತ್ಪನ್ನ ಸೇರ್ಪಡೆಗೊಳಿಸಿಲಾಗಿದ್ದು, ಕಳೆದ ಬಾರಿ ಹೊಂದಿದ್ದ 15 ಲಕ್ಷ ಕೋಟಿ ಕೃಷಿ ಸಾಲವನ್ನು, 16.5 ಲಕ್ಷ ಕೋಟಿ ಏರಿಸಲಾಗಿದೆ ಎಂದರು.

Budget 2021 | ಸರ್ಕಾರ ರೈತಪರವಾಗಿದೆ ಎಂದು ಅಂಕಿಅಂಶ ಮುಂದಿಟ್ಟ ನಿರ್ಮಲಾ ಸೀತಾರಾಮನ್
ಕೃಷಿ ವಲಯ
guruganesh bhat
|

Updated on:Feb 01, 2021 | 12:27 PM

Share

ಕೃಷಿ ಸಮುದಾಯ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿದ್ದಂತೆ ಸದನದಲ್ಲಿ ಸ್ವಲ್ಪ ಪ್ರಮಾಣದ ಗದ್ದಲ ಏರ್ಪಟ್ಟಿತು. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡಿಕೆ ಭರವಸೆ ನೀಡಿದ ಅವರು, ಗೋಧಿ, ಭತ್ತಗಳಿಗೆ ನೀಡಿದ ಬೆಂಬಲ ಬೆಲೆಯ ಮೊತ್ತದ ಅಂಕಿಅಂಶಗಳನ್ನು ಘೋಷಿಸಿ, ಕೃಷಿ ಉತ್ಪನ್ನಗಳ ಖರೀದಿ ಮುಂದುವರಿಯುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ಗೋಧಿ ಬೆಳೆಯುವವರು 43 ಲಕ್ಷ ರೈತರು. ಗೋಧಿಗೆ 2013-14ರಲ್ಲಿ 33 ಸಾವಿರ ಕೋಟಿ ಬೆಂಬಲ ಬೆಲೆ ಒದಗಿಸಲಾಗಿತ್ತು. 2019-20ರಲ್ಲಿ 62 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ. 2020-21ರಲ್ಲಿ 75 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ. ಕೇಂದ್ರ ಸರ್ಕಾರ ಭವಿಷ್ಯದಲ್ಲೂ ಗೋಧಿಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲಿದೆ ಎಂದು ತಿಳಿಸಿದರು.

ಭತ್ತಕ್ಕೆ 2013-14ರಲ್ಲಿ -3995 ಕೋಟಿ ಬೆಂಬಲ ನೆಲೆ ನೀಡಿ ಖರೀದಿಸಲಾಗಿತ್ತು. 2019-20ರಲ್ಲಿ-1.31 ಲಕ್ಷ ಕೋಟಿ ರೂ ನೀಡಿ ಖರೀದಿಸಲಾಗಿದೆ. ಆದರೆ, 2020-21ರಲ್ಲಿ-1 ಲಕ್ಷ 72 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ ಎಂದು ಬೆಂಬಲ ಬೆಲೆಯನ್ನು ಸರ್ಕಾರ ಮುಂದುವರೆಸಲಿದೆ, ಸರ್ಕಾರ ರೈತಪರವಾಗಿದೆ ಎಂದು ಘೋಷಿಸಿದರು.

ಧಾನ್ಯಗಳ ಖರೀದಿಯ ಅಂಕಿಅಂಶಗಳನ್ನು ಒದಗಿಸಿದ ಅವರು, 2019-20-8 ಸಾವಿರ ಕೋಟಿಯ ಬೆಂಬಲ ಬೆಲೆ ಒದಗಿಸಲಾಗಿತ್ತು. 2020-21ರಲ್ಲಿ 10,500 ಕೋಟಿ ರೂ. ನೀಡಿ ವಿವಿಧ ಧಾನ್ಯಗಳನ್ನು ಖರೀದಿಸಲಾಗಿದೆ. ಖರೀದಿಸಿದ ಬೆಲೆಯಲ್ಲಿ ಶೇ 40ರಷ್ಟು ಏರಿಕೆ ಆಗಿದೆ ಎಂದು ತಿಳಿಸಿದರು.

ಪಶುಸಂಗೋಪನೆ, ಡೇರಿ, ಮೀನುಗಾರಿಕೆಗೆ ₹40 ಸಾವಿರ ಕೋಟಿ ಒದಗಿಸಲಾಗುವುದು. ಹಾಳಾಗುವ ಉತ್ಪನ್ನಗಳ ಪಟ್ಟಿಗೆ 22 ಕೃಷಿ ಉತ್ಪನ್ನ ಸೇರ್ಪಡೆಗೊಳಿಸಿಲಾಗಿದ್ದು, ಕಳೆದ ಬಾರಿ ಕೃಷಿ ಸಾಲ ಕಳೆದ ಬಾರಿ ಹೊಂದಿದ್ದ 15 ಲಕ್ಷ ಕೋಟಿ ಕೃಷಿ ಸಾಲವನ್ನು, 16.5 ಲಕ್ಷ ಕೋಟಿ ಏರಿಸಲಾಗಿದೆ ಎಂದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Published On - 12:17 pm, Mon, 1 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ