AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ 64,180 ಕೋಟಿ ರೂ.

ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದರು.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ  64,180 ಕೋಟಿ ರೂ.
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 2:42 PM

Share

ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇಂದು 2021-22ನೇ ಸಾಲಿನ ಬಜೆಟ್​ನಲ್ಲಿ ಪ್ರಥಮವಾಗಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಯನ್ನು ಉಲ್ಲೇಖಿಸಿದರು. ದೇಶದ ಆರೋಗ್ಯ ಕ್ಷೇತ್ರವನ್ನು ಸುಸ್ಥಿರ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಈ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆ ಪ್ರಾರಂಭಿಸಿದ್ದು, ಇದಕ್ಕಾಗಿ ಮುಂದಿನ ಆರುವರ್ಷಗಳನ್ನು ಗಮನದಲ್ಲಿಟ್ಟುಕೊಂಡು 64,180 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಬಜೆಟ್​ 2021 ಆರು ಸ್ತಂಭಗಳ ಮೇಲೆ ನಿಂತಿದೆ.. ಅವುಗಳೆಂದರೆ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಮಹಾತ್ವಾಕಾಂಕ್ಷಿ ಭಾರತ ನಿರ್ಮಾಣಕ್ಕಾಗಿ ಅಂತರ್ಗತ ಅಭಿವೃದ್ಧಿ, ಮಾನವ ಸಂಪನ್ಮೂಲವನ್ನು ಪುನರುಜ್ಜೀವನಗೊಳಿಸುವುದು, ನಾವೀನ್ಯತೆ ಮತ್ತು ಸಂಶೋಧನೆ-ಅಭಿವೃದ್ಧಿ, ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ ಎಂದು ನಿರ್ಮಲಾ ಸೀತಾರಾಮನ್​ ತಿಳಸಿದರು.

ಕೊವಿಡ್​ 19 ಲಸಿಕೆಗೆ 35 ಸಾವಿರ ಕೋಟಿ ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ. ಹಾಗೇ ನಗರ ಸ್ವಚ್ಛ ಭಾರತ್​ ಯೋಜನೆಗೆ ಮುಂಬರುವ ಐದು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು 1,41,670 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಒಟ್ಟಾರೆ 2.23 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Published On - 11:52 am, Mon, 1 February 21

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು