AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | 75 ವರ್ಷ ದಾಟಿದವರಿಗೆ ತೆರಿಗೆ ವಿನಾಯ್ತಿ

ಪಿಂಚಣಿ ಮತ್ತು ಬ್ಯಾಂಕ್ ಬಡ್ಡಿಯನ್ನೇ ಅವಲಂಬಿಸಿ ಜೀವನ ನಡೆಯುವ ಈ ವಯೋಮಾನದ ನಾಗರಿಕರು ಇನ್ನು ಮುಂದೆ ಐಟಿ ರಿಟರ್ನ್ಸ್​ ಸಹ ಸಲ್ಲಿಸಬೇಕಿಲ್ಲ. ಈ ಕುರಿತು ಮತ್ತಷ್ಟು ವಿವರಗಳನ್ನು ಶೀಘ್ರ ನೀಡಲಾಗುವುದು ಎಂದು ಸಚಿವರು ಹೇಳಿದರು.

Budget 2021 | 75 ವರ್ಷ ದಾಟಿದವರಿಗೆ ತೆರಿಗೆ ವಿನಾಯ್ತಿ
75 ವರ್ಷ ಮೇಲ್ಪಟ್ಟವರಿಗೆ ತೆರಿಗೆ ವಿನಾಯ್ತಿ
guruganesh bhat
| Edited By: |

Updated on: Feb 01, 2021 | 1:24 PM

Share

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಬಡ್ಡಿ ಮೇಲಿನ ತೆರಿಗೆಯಲ್ಲಿ ವಿನಾಯ್ತಿ ನಿಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಪಿಂಚಣಿ ಮತ್ತು ಬ್ಯಾಂಕ್ ಬಡ್ಡಿಯನ್ನೇ ಅವಲಂಬಿಸಿ ಜೀವನ ನಡೆಯುವ ಈ ವಯೋಮಾನದ ನಾಗರಿಕರು ಇನ್ನು ಮುಂದೆ ಐಟಿ ರಿಟರ್ನ್ಸ್​ ಸಹ ಸಲ್ಲಿಸಬೇಕಿಲ್ಲ. ಈ ಕುರಿತು ಮತ್ತಷ್ಟು ವಿವರಗಳನ್ನು ಶೀಘ್ರ ನೀಡಲಾಗುವುದು ಎಂದು ಸಚಿವರು ಹೇಳಿದರು.

ಕಡಿಮೆ ದರದ ಮನೆಗಳಿಗೆ ತೆರಿಗೆ ವಿನಾಯ್ತಿ ಎಲ್ಲರಿಗೂ ಮನೆ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ. ಕೈಗೆಟುಕುವ ಬೆಲೆಯ ಮನೆಗಳನ್ನು ಸಾರ್ವಜನಿಕರಿಗೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಇಂಥ ಮನೆಗಳ ಖರೀದಿಗೆಂದು ಪಡೆದ ಸಾಲದ ಮೇಲೆ ಈಗಾಗಲೇ ಇರುವ ಸಬ್ಸಿಡಿ, ತೆರಿಗೆ ವಿನಾಯ್ತಿ ಮತ್ತು ಇತರ ಸೌಲಭ್ಯಗಳು ಇನ್ನೊಂದು ವರ್ಷದವರೆಗೆ ಮುಂದುವರಿಯಲಿದೆ ಎಂದು ಅವರು ಮಧ್ಯಮ ವರ್ಗಕ್ಕೆ ಶುಭ ಸುದ್ದಿ ನೀಡಿದರು.

ಇದನ್ನೂಓದಿ: Budget 2021 | ಸರ್ಕಾರ ರೈತಪರವಾಗಿದೆ ಎಂದು ಅಂಕಿಅಂಶ ಮುಂದಿಟ್ಟ ನಿರ್ಮಲಾ ಸೀತಾರಾಮನ್

ರಾಷ್ಟ್ರೀಯ ದೂರು ಪ್ರಾಧಿಕಾರ ಆರಂಭ ತೆರಿಗೆ ಪಾವತಿದಾರರು ಸರಿಯಾದ ಮಾಹಿತಿ ನೀಡಿಲ್ಲ ಎಂಬ ಸಂದರ್ಭದಲ್ಲಿ ಕೇವಲ 3 ವರ್ಷಗಳಲ್ಲಿ ತೆರಿಗೆ ಸಲ್ಲಿಕೆ ವಿವರಗಳನ್ನು ಆದಾಯ ತೆರಿಗೆ ಇಲಾಖೆ ಮರುಪರಿಶೀಲನೆ ಮಾಡಬಹುದು. ₹ 50 ಲಕ್ಷಕ್ಕಿಂತಲೂ ಹೆಚ್ಚಿನ ಆದಾಯ ಮರೆಮಾಚಲಾಗಿದೆ ಎನ್ನಿಸಿದರೆ ಮಾತ್ರ, ಪ್ರಧಾನ ಕಾರ್ಯದರ್ಶಿಯ ಅನುಮತಿಯೊಂದಿಗೆ 10 ವರ್ಷದ ಅವಧಿಯಲ್ಲಿ ಮರುಪರಿಶೀಲನೆ ಮತ್ತು ಕ್ರಮಕ್ಕೆ ಅವಕಾಶವಿರುತ್ತದೆ. ಆದಾಯ ತೆರಿಗೆಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ರಾಷ್ಟ್ರೀಯ ದೂರು ಪ್ರಾಧಿಕಾರ ಆರಂಭಿಸುತ್ತೇವೆ. ಇದು ಫೇಸ್​ಲೆಸ್ ಆಗಿ ಕಾರ್ಯನಿರ್ವಹಿಸುತ್ತದೆ ಎಂದು ಬಜೆಟ್​ನಲ್ಲಿ ಅವರು ತಿಳಿಸಿದರು.

ತಮಿಳಿನ ಪ್ರಾಚೀನ ಕವಿ ತಿರುವಳ್ಳೂರ್ ಕವಿತೆ ಓದಿದ ಅವರು, ಭಾರತದಲ್ಲಿ ವಿಶ್ವದಲ್ಲೇ ಅತ್ಯಂತ ಕಡಿಮೆ ಕಾರ್ಪೊರೇಟ್ ಟ್ಯಾಕ್ಸ್ ಇದ್ದು, ನೇರ ತೆರಿಗೆಯಲ್ಲಿ ಸಾಕಷ್ಟು ಅಮೂಲಾಗ್ರ ಬದಲಾವಣೆ ಮಾಡಲಾಗುವುದು. 2022ರಲ್ಲಿ 12 ಲಕ್ಷ ಕೋಟಿ ರೂ. ಸಾಲ ಪಡೆಯುವ ಗುರಿ ಹೊಂದಲಾಗಿದ್ದು, ವಿತ್ತೀಯ ಕೊರತೆ ಜಿಡಿಪಿಯ ಶೇ.3ರಷ್ಟು ಇರಬೇಕಿತ್ತು. ಆದರೆ ಆ ಗುರಿಯನ್ನು ಸಾಧಿಸುವುದಕ್ಕೆ ಸಾಧ್ಯವಾಗಿಲ್ಲ. ಆರ್ಥಿಕ ವರ್ಷ 26 ವೇಳೆಗೆ ಹಣಕಾಸು ಕೊರತೆ ಶೇ 4.5ಕ್ಕಿಂತ ಕಡಿಮೆಯಾಗಲಿದೆ ಎಂದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!