AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಮತ್ತಷ್ಟು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ: ಕೃಷಿ ಮೂಲಸೌಕರ್ಯ ಸೆಸ್ ಮೂಲಕ ದರ ಏರಿಕೆ

ಪೆಟ್ರೋಲ್ ದರ ಲೀಟರ್​ಗೆ 2.5 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ದರ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ಜಾರಿಯಾಗಲಿದೆ.

Budget 2021 | ಮತ್ತಷ್ಟು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ: ಕೃಷಿ ಮೂಲಸೌಕರ್ಯ ಸೆಸ್ ಮೂಲಕ ದರ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:25 PM

Share

ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ಜಾರಿಯಾಗಲಿದೆ. ಬಜೆಟ್ ಅಧಿವೇಶನದ ಬಳಿಕ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬರೆ ಬಿದ್ದಂತಾಗಿದೆ. ಪೆಟ್ರೋಲ್ ದರ ಲೀಟರ್​ಗೆ 2.5 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ದರ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಕೃಷಿ ಮೂಲಸೌಕರ್ಯ ಸೆಸ್ ಕಾರಣದಿಂದ ಇಂಧನ ದರ ಏರಿಕೆಯಾಗಿದೆ.

ಇಂಧನ ಹೊರತಾಗಿ, ಚಿನ್ನ, ಬೆಳ್ಳಿ, ಚಿನ್ನದ ಗಟ್ಟಿ ಮೇಲೆ ಕೂಡ ಶೇ 2.5ರಷ್ಟು ಕೃಷಿ ಸೆಸ್ ಹೇರಲಾಗಿದೆ. ಮದ್ಯದ ಮೇಲೆ ಶೇಕಡಾ 100ರಷ್ಟು ಕೃಷಿ ಸೆಸ್ ಹಾಕಲಾಗಿದೆ. ಕಚ್ಚಾ ಪಾಮ್‌ಆಯಿಲ್ ಮೇಲೆ ಶೇ 17.5ರಷ್ಟು ಕೃಷಿ ಸೆಸ್ ಹಾಗೂ ಸೋಯಾಬಿನ್ ಸೂರ್ಯಕಾಂತಿ ಎಣ್ಣೆ ಮೇಲೂ ಸೆಸ್ ಹಾಕಲಾಗಿದೆ. ಸೇಬು ಹಣ್ಣಿನ ಮೇಲೆ ಶೇಕಡಾ 35ರಷ್ಟು ಕೃಷಿ ಸೆಸ್. ಕಲ್ಲಿದ್ದಲು, ಲಿಗ್ನೈಟ್ ಮತ್ತು ಪೀಟ್‌ ಮೇಲೆ ಶೇ 1.5ರಷ್ಟು ಸೆಸ್. ಯೂರಿಯಾ ಸೇರಿ ಕೆಲ ರಸಗೊಬ್ಬರಗಳ ಮೇಲೂ ಸೆಸ್ ವಿಧಿಸಲಾಗಿದೆ.

ಬಟಾಣಿ ಮೇಲೆ ಶೇ 40ರಷ್ಟು, ಕಾಬುಲ್ ಕಡಲೆಯ ಮೇಲೆ ಶೇ 40ರಷ್ಟು, ಕಡಲೇ ಬೇಳೆ ಮೇಲೆ ಶೇ 50ರಷ್ಟು, ಬೇಳೆಕಾಳುಗಳ ಮೇಲೆ ಶೇ 20ರಷ್ಟು, ಹತ್ತಿಯ ಮೇಲೆ ಶೇ 5ರಷ್ಟು ಸೆಸ್ ವಿಧಿಸಲಾಗಿದೆ. ನಾಳೆಯಿಂದಲೇ ಕೃಷಿ ಮೂಲಸೌಕರ್ಯ ಸೆಸ್ ಜಾರಿಯಾಗಲಿದೆ.

ಪೆಟ್ರೋಲ್​ ಬಂಕ್​ಗಳಲ್ಲಿರಲಿ ಬೆಲೆ ವಿವರಿಸುವ ಫಲಕ ಪೆಟ್ರೋಲ್​, ಡೀಸೆಲ್​ ಬೆಲೆ ಹೆಚ್ಚಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ರೂಪದ ಚರ್ಚೆಯೊಂದು ಶುರುವಾಗಿದೆ. ಒಮ್ಮೆ ಲೀಟರ್​ಗೆ 92.05 ಆದರೆ, ಅದರಲ್ಲಿ ಪೆಟ್ರೋಲ್ ಮೂಲ ಬೆಲೆ 30.50 ರೂ. ಕೇಂದ್ರ ಸರ್ಕಾರದ ತೆರಿಗೆ 16.50 ರೂ., ರಾಜ್ಯ ಸರ್ಕಾರದ ತೆರಿಗೆ 38.55 ರೂ. ಮತ್ತು ವಿತರಕರು ವಿಧಿಸುವ ಬೆಲೆ 6.50 ರೂ. ಇರುತ್ತದೆ. ಈ ಮಾಹಿತಿಯನ್ನು ಒಳಗೊಂಡ ಬೋರ್ಡ್​ನ್ನು ಪ್ರತಿ ಪೆಟ್ರೋಲ್​ ಪಂಪ್​ಗಳಲ್ಲೂ ಅಳವಡಿಸಬೇಕು. ಪೆಟ್ರೋಲ್​, ಡೀಸೆಲೆ ಬೆಲೆ ಏರಿಕೆ ಆಗುವುದು ಎಲ್ಲಿಂದ ಎಂದು ಆಗ, ಪ್ರತಿಯೊಬ್ಬ ನಾಗರಿಕನಿಗೂ ಅರ್ಥವಾಗುತ್ತದೆ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Budget 2021: ಬಜೆಟ್​ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭ

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Published On - 1:41 pm, Mon, 1 February 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ