AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಅವರು ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಏಕಸ್ವಾಮ್ಯವಾಗಿರುತ್ತವೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯಪಟ್ಟರು.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು
ಸಂಗ್ರಹ ಚಿತ್ರ
Lakshmi Hegde
| Edited By: |

Updated on: Feb 01, 2021 | 3:04 PM

Share

ನವೀಕರಣ, ಸುಧಾರಣಾ ಆಧಾರಿತ ಹಾಗೂ ಫಲಿತಾಂಶ ಸಂಬಂಧಿ ವಿದ್ಯುತ್​ ಪೂರೈಕೆ ವಲಯವನ್ನು ಪ್ರಾರಂಭಿಸುವ ಸಲುವಾಗಿ ಬಜೆಟ್​ನಲ್ಲಿ ಸುಮಾರು ₹ 3.60 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ವಿದ್ಯುತ್ ವಿತರಣಾ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವೂ ಇನ್ನು ಮುಂದೆ ಗ್ರಾಹಕರಿಗೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸದ್ಯ ದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳ (ಡಿಸ್ಕಾಂ) ಕಾರ್ಯಕ್ಷಮತೆಯ ಬಗ್ಗೆ ​ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಸುಧಾರಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಈ ಯೋಜನೆ, ಡಿಸ್ಕಾಂನ ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಅಷ್ಟೇ ಅಲ್ಲ, ಪ್ರೀಪೇಯ್ಡ್​​ ಸ್ಮಾರ್ಟ್​ ಮೀಟರಿಂಗ್​, ಪ್ರತ್ಯೇಕ ಫೀಡರ್​ ಮತ್ತು ಸಿಸ್ಟಂ ಅಪ್​ಗ್ರೇಡೇಶನ್​​ಗೂ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಅವರ ಏಕಸ್ವಾಮ್ಯ ಇರುತ್ತದೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯ ಪಟ್ಟರು. ಕಳೆದ ಆರು ವರ್ಷಗಳಲ್ಲಿ ವಿದ್ಯುತ್​ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?