AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಅವರು ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಏಕಸ್ವಾಮ್ಯವಾಗಿರುತ್ತವೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯಪಟ್ಟರು.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು
ಸಂಗ್ರಹ ಚಿತ್ರ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 01, 2021 | 3:04 PM

Share

ನವೀಕರಣ, ಸುಧಾರಣಾ ಆಧಾರಿತ ಹಾಗೂ ಫಲಿತಾಂಶ ಸಂಬಂಧಿ ವಿದ್ಯುತ್​ ಪೂರೈಕೆ ವಲಯವನ್ನು ಪ್ರಾರಂಭಿಸುವ ಸಲುವಾಗಿ ಬಜೆಟ್​ನಲ್ಲಿ ಸುಮಾರು ₹ 3.60 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ವಿದ್ಯುತ್ ವಿತರಣಾ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವೂ ಇನ್ನು ಮುಂದೆ ಗ್ರಾಹಕರಿಗೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸದ್ಯ ದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳ (ಡಿಸ್ಕಾಂ) ಕಾರ್ಯಕ್ಷಮತೆಯ ಬಗ್ಗೆ ​ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಸುಧಾರಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಈ ಯೋಜನೆ, ಡಿಸ್ಕಾಂನ ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಅಷ್ಟೇ ಅಲ್ಲ, ಪ್ರೀಪೇಯ್ಡ್​​ ಸ್ಮಾರ್ಟ್​ ಮೀಟರಿಂಗ್​, ಪ್ರತ್ಯೇಕ ಫೀಡರ್​ ಮತ್ತು ಸಿಸ್ಟಂ ಅಪ್​ಗ್ರೇಡೇಶನ್​​ಗೂ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಅವರ ಏಕಸ್ವಾಮ್ಯ ಇರುತ್ತದೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯ ಪಟ್ಟರು. ಕಳೆದ ಆರು ವರ್ಷಗಳಲ್ಲಿ ವಿದ್ಯುತ್​ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ