AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Session 2024: ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ, ಆರ್ಥಿಕತೆ, ರಾಮಮಂದಿರ, ಚಂದ್ರಯಾನ ಕುರಿತ ವಿಷಯ ಪ್ರಸ್ತಾಪ

ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದರು. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಮಹಿಳಾ ಮೀಸಲಾತಿ ಕಾನೂನು ಜಾರಿಗೆ ತಂದ ಸಂಸದರನ್ನು ಅಭಿನಂದಿಸಿದರು, ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಧಿಕ ಪದಕಗಳು, ಚಂದ್ರಯಾನ-3 ರ ಯಶಸ್ಸು ಮತ್ತು ರಾಮಮಂದಿರ ನಿರ್ಮಾಣದ ಕನಸು ನನಸಾಗಿರುವುದನ್ನು ಅವರು ಪ್ರಸ್ತಾಪಿಸಿದರು.

Budget Session 2024: ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ, ಆರ್ಥಿಕತೆ, ರಾಮಮಂದಿರ, ಚಂದ್ರಯಾನ ಕುರಿತ ವಿಷಯ ಪ್ರಸ್ತಾಪ
ದ್ರೌಪದಿ ಮುರ್ಮು
ನಯನಾ ರಾಜೀವ್
|

Updated on:Jan 31, 2024 | 12:29 PM

Share

ವಿಶ್ವದಾದ್ಯಂತ ಇರುವ ಗಂಭೀರ ಬಿಕ್ಕಟ್ಟುಗಳ ನಡುವೆ ಭಾರತದ ಆರ್ಥಿಕತೆಯು ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಸಂತಸ ವ್ಯಕ್ತಪಡಿಸಿದರು. ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದರು. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

ಮಹಿಳಾ ಮೀಸಲಾತಿ ಕಾನೂನು ಜಾರಿಗೆ ತಂದ ಸಂಸದರನ್ನು ಅಭಿನಂದಿಸಿದರು, ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಧಿಕ ಪದಕಗಳು, ಚಂದ್ರಯಾನ-3 ರ ಯಶಸ್ಸು ಮತ್ತು ರಾಮಮಂದಿರ ನಿರ್ಮಾಣದ ಕನಸು ನನಸಾಗಿರುವುದನ್ನು ಅವರು ಪ್ರಸ್ತಾಪಿಸಿದರು. ರಾಷ್ಟ್ರಪತಿ ರಾಮ ಮಂದಿರದ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಅಲ್ಲಿದ್ದ ಸಂಸದರು ಮೇಜು ಬಡಿದು ಅಭಿನಂದಿಸಿದರು.

ಶತಮಾನಗಳಿಂದಲೂ ರಾಮಮಂದಿರದ ಆಶಯವಿದ್ದು, ಅದು ಈ ವರ್ಷ ಈಡೇರಿದೆ ಎಂದರು. ಗುಲಾಮಗಿರಿಯ ಯುಗದಲ್ಲಿ ಮಾಡಿದ ಕಾನೂನುಗಳು ಈಗ ಇತಿಹಾಸದ ಭಾಗವಾಗಿದೆ. ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ಕೊನೆಗೊಳಿಸಲು ಸರ್ಕಾರ ಕಟ್ಟುನಿಟ್ಟಾದ ಕಾನೂನು ನಿಬಂಧನೆಗಳನ್ನು ಮಾಡಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Budget session 2024: ಇಂದು ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ: ಪಿಎಂ ಮೋದಿ

ಸಂಸತ್ತಿನ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ. ಇದರಲ್ಲಿ 8 ಸಭೆಗಳು ನಡೆಯಲಿವೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

ದೇಶದಲ್ಲಿ 10 ಕೋಟಿಗೂ ಹೆಚ್ಚು ಜನ ಶಾಶ್ವತ ಮನೆಗಳನ್ನು ಪಡೆದಿದ್ದಾರೆ. 11 ಕೋಟಿ ಗ್ರಾಮಸ್ಥರಿಗೆ ಪೈಪ್‌ಲೈನ್‌ ನೀರು ತಲುಪಿದೆ. ಕೊರೊನಾ ಅವಧಿಯಿಂದ 80 ಕೋಟಿ ದೇಶವಾಸಿಗಳಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಈಗ ಅದನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಇದಕ್ಕೆ 11 ಸಾವಿರ ಕೋಟಿ ರೂಪಾಯಿ ಹೆಚ್ಚು ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: Budget 2024 Date: ಕೇಂದ್ರ ಬಜೆಟ್ ದಿನ, ಸಮಯ, ಸೆಷನ್, ದಾಖಲೆ ಮತ್ತಿತರ ವಿವರ

ನಮ್ಮ ಸರ್ಕಾರ ಒಂದು ದೇಶ-ಒಂದು ತೆರಿಗೆ ಕಾನೂನನ್ನು ತಂದಿತು. ಬ್ಯಾಂಕಿಂಗ್ ವ್ಯವಸ್ಥೆ ಬಲಗೊಂಡಿದೆ. ಬ್ಯಾಂಕ್‌ಗಳ ಎನ್‌ಪಿಎ ಶೇ.4ಕ್ಕೆ ಇಳಿಕೆಯಾಗಿದೆ. ಮೊದಲಿಗಿಂತ ಎಫ್‌ಡಿಐ ದುಪ್ಪಟ್ಟಾಗಿದೆ. ಉತ್ತಮ ಆಡಳಿತ ಮತ್ತು ಪಾರದರ್ಶಕತೆಯಿಂದಾಗಿ ಆರ್ಥಿಕ ಸುಧಾರಣೆಯಾಗಿದೆ. ಮೇಕ್ ಇನ್ ಇಂಡಿಯಾ ದೊಡ್ಡ ಅಭಿಯಾನವಾಗಿದೆ. ರಕ್ಷಣಾ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಗಳ ಭಾಗವಹಿಸುವಿಕೆ ಹೆಚ್ಚಾಗಿದೆ. ಇಂದು ನಾವು ಆಟಿಕೆಗಳನ್ನು ರಫ್ತು ಮಾಡುತ್ತೇವೆ ಎಂದರು.

Economic Survey 2024: ಈ ಬಾರಿ ಬಜೆಟ್ ಮುಂಚಿನ ಆರ್ಥಿಕ ಸಮೀಕ್ಷೆ ಯಾಕಿಲ್ಲ? ಅದರ ಬದಲು ಬಿಡುಗಡೆ ಆದ ಬೇರೆ ವರದಿಯಲ್ಲಿ ಏನಿದೆ?

ವ್ಯಾಪಾರ ಮಾಡುವ ಸುಲಭತೆಯೂ ಸುಧಾರಿಸಿದೆ. ದೇಶದಲ್ಲಿ ವ್ಯಾಪಾರಕ್ಕೆ ಉತ್ತಮ ವಾತಾವರಣವಿದೆ. ಡಿಜಿಟಲ್ ಇಂಡಿಯಾ ವ್ಯವಹಾರವನ್ನು ಸುಲಭಗೊಳಿಸಿದೆ. ಡಿಜಿಟಲ್ ಇಂಡಿಯಾ ದೇಶದ ಪ್ರಮುಖ ಸಾಧನೆಯಾಗಿದೆ. ಇಂದು ಜಗತ್ತಿನ ಇತರೆ ರಾಷ್ಟ್ರಗಳೂ ಯುಪಿಎ ಮೂಲಕ ವಹಿವಾಟು ಸೌಲಭ್ಯ ಒದಗಿಸುತ್ತಿವೆ. ಖಾಸಗಿ ವಲಯದ ಸಾಮರ್ಥ್ಯದ ಮೇಲೆ ಸರ್ಕಾರಕ್ಕೆ ವಿಶ್ವಾಸವಿದೆ. 2 ಕೋಟಿ ನಕಲಿ ಫಲಾನುಭವಿಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Wed, 31 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?