AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಹಸ್ತಕ್ಷೇಪವಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದೆ, ರಾಹುಲ್​ಗೆ ಮೋದಿ ಟಾಂಗ್

ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್​ ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, ಇದು ಮೊದಲ ಸಂಸತ್ ಅಧಿವೇಶನವಾಗಿದ್ದು, ನಮ್ಮ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪ ಕಂಡುಬಂದಿಲ್ಲ, ಇದರಲ್ಲಿ ಯಾವುದೇ ವಿದೇಶಿ ಶಕ್ತಿಗಳಿಲ್ಲ. ಪ್ರತಿ ಬಜೆಟ್ ಅಧಿವೇಶನಕ್ಕೂ ಮುನ್ನ ನಾನು ಇದನ್ನು ಗಮನಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ವಿದೇಶಿ ಹಸ್ತಕ್ಷೇಪವಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದೆ, ರಾಹುಲ್​ಗೆ ಮೋದಿ ಟಾಂಗ್
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jan 31, 2025 | 12:47 PM

Share

ಹತ್ತು ವರ್ಷಗಳಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. 2014 ರಿಂದ, ಇದು ಮೊದಲ ಸಂಸತ್ ಅಧಿವೇಶನವಾಗಿದ್ದು, ನಮ್ಮ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪ ಕಂಡುಬಂದಿಲ್ಲ, ಇದರಲ್ಲಿ ಯಾವುದೇ ವಿದೇಶಿ ಶಕ್ತಿಗಳಿಲ್ಲ. ಪ್ರತಿ ಬಜೆಟ್ ಅಧಿವೇಶನಕ್ಕೂ ಮುನ್ನ ನಾನು ಇದನ್ನು ಗಮನಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

2014ರಿಂದಲೂ ಯಾವುದಾದರೂ ಒಂದು ವಿಚಾರವನ್ನಿಟ್ಟುಕೊಂಡು ತೊಂದರೆ ಸೃಷ್ಟಿಸಲು ಕೆಲವರು ಸಿದ್ಧರಿರುತ್ತಿದ್ದರು. ಆದರೆ 10 ವರ್ಷಗಳ ಬಳಿಕ ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ಅಧಿವೇಶನ ನಡೆಯುತ್ತಿದೆ. 2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶವಾಸಿಗಳು ಒಟ್ಟಾಗಿ ನಾವು ಈ ನಿರ್ಣಯವನ್ನು ಪ್ರಯತ್ನದಿಂದ ಈಡೇರಿಸುತ್ತೇವೆ. ಮೂರನೇ ಅವಧಿಯಲ್ಲಿ, ನಾವು ದೇಶದ ಸರ್ವತೋಮುಖ ಅಭಿವೃದ್ಧಿಯತ್ತ ಮಿಷನ್ ಮೋಡ್‌ನಲ್ಲಿ ಮುನ್ನಡೆಯುತ್ತಿದ್ದೇವೆ. ನಾವೀನ್ಯತೆ, ಸೇರ್ಪಡೆ ಮತ್ತು ಹೂಡಿಕೆ – ಇದು ನಮ್ಮ ಆರ್ಥಿಕ ಚಟುವಟಿಕೆಯ ಮಾರ್ಗಸೂಚಿಯ ಆಧಾರವಾಗಿದೆ.

ಜಾರ್ಜ್ ಸೊರೊಸ್  ಈ ಹಿಂದೆ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬಿಲಿಯನೇರ್ ಜಾರ್ಜ್​ ಸೊರೊಸ್ ಮತ್ತು ಅವರ ಎನ್​ಜಿಒ ದಿ ಓಪನ್ ಸೊಸೈಟಿ ಫೌಂಡೇಷನ್​ನೊಂದಿಗಿನ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಸಂಬಂಧದ ಕುರಿತು ವಿಷಯವನ್ನು ಬಿಜೆಪಿ ಪ್ರಸ್ತಾಪಿಸಿತ್ತು. ಈ ವಿಷಯವು ಡಿಸೆಂಬರ್ 8 ಹಾಗೂ ನಂತರದ ದಿನಗಳಲ್ಲಿ ಸಂಸತ್ತಿನಲ್ಲಿ ಪ್ರಾಬಲ್ಯ ಸಾಧಿಸಿತ್ತು. ಸೋನಿಯಾ ಗಾಂಧಿ ಅವರು ಜಾರ್ಜ್ ಸೊರೊಸ್ ಅವರ ಪ್ರತಿಷ್ಠಾನದಿಂದ ನಿಧಿಯನ್ನು ಹೊಂದಿರುವ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪಗಳನ್ನು ಕಾಂಗ್ರೆಸ್ ನಿರಾಕರಿಸಿತ್ತು.

ಹಿಂಡನ್​ಬರ್ಗ್​ ರಿಪೋರ್ಟ್​ ಅದಾನಿ ಸಮೂಹವು ಷೇರುಗಳ ಅಕ್ರಮದಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ವರದಿ ಆರೋಪಿಸಿತ್ತು. ಗೌತಮ್ ಅದಾನಿ 120 ಶತಕೋಟಿ ಡಾಲರ್ ಸಂಪತ್ತನ್ನು ಹೊಂದಿದ್ದು, ಕಳೆದ ಮೂರು ವರ್ಷಗಳಲ್ಲಿ ಸುಮಾರು 100 ಶತಕೋಟಿ ಡಾಲರ್​​ನಷ್ಟು ಸಂಪತ್ತು ಹೆಚ್ಚಿಸಿಕೊಂಡಿದ್ದರು. ಅವರ ಒಡೆತನದ ವಿವಿಧ ಕಂಪನಿಗಳ ಷೇರುಗಳ ದರ ಸರಾಸರಿ ಶೇ 819ರಷ್ಟು ಹೆಚ್ಚಾಗಿತ್ತು. ಅದಾನಿ ಸಮೂಹದ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರನ್ನು ಸಂದರ್ಶನ ನಡೆಸಿದ್ದ ಕಂಪನಿ ಸಾವಿರಾರು ದಾಖಲೆಗಳನ್ನು ಪರಿಶೀಲಿಸಿ, ವಿವಿಧ ರಾಷ್ಟ್ರಗಳ ವೆಬ್​​ಸೈಟ್​ಗಳನ್ನೂ ಪರಿಶೀಲಿಸಿ ವರದಿ ಸಿದ್ಧಪಡಿಸಲಾಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಹೇಳಿತ್ತು. ಈ ವಿಚಾರ ಸದನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಹಿಂಡನ್​ಬರ್ಗ್ ವರದಿ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಅಂಗ ಸಂಸ್ಥೆಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಅದಾನಿ ಟೋಟಲ್ ಗ್ಯಾಸ್, ಅದಾನಿ ಎಂಟರ್​​ಪ್ರೈಸಸ್, ಅದಾನಿ ಟ್ರಾನ್ಸ್​ಮಿಷನ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್, ಅದಾನಿ ಪವರ್, ಅದಾನಿ ವಿಲ್ಮರ್ ಷೇರುಗಳು ಶೇ 1ರಿಂದ 4ರಷ್ಟು ಕೆಳಮಟ್ಟದಲ್ಲಿ ವಹಿವಾಟು ನಡೆಸಿದ್ದವು. ಪರಿಣಾಮವಾಗಿ ಅದಾನಿ ಸಮೂಹ ಬುಧವಾರ ಒಂದೇ ದಿನದ ವಹಿವಾಟಿನಲ್ಲಿ 46,086 ಕೋಟಿ ರೂ. ಕಳೆದುಕೊಂಡಿತ್ತು.

ಪೆಗಾಸಸ್ 2017ರಲ್ಲಿ ಇಸ್ರೇಲ್‌ ಜೊತೆ ಮಾಡಿಕೊಂಡ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತವು ಪೆಗಾಸಸ್‌ ತಂತ್ರಾಂಶ ಖರೀದಿಸಿದೆ ಎಂದು ‘ನ್ಯೂ ಯಾರ್ಕ್‌ ಟೈಮ್ಸ್‌’ ವರದಿಪ್ರಕಟಿಸಿತ್ತು.ಅದಾದ ಬಳಿಕ ಪೆಗಾಸಸ್‌ ವಿವಾದ ಮತ್ತೆ ಮುನ್ನೆಲೆಗೆ ಬಂದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:47 pm, Fri, 31 January 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ