AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್ 2026 ಅಧಿವೇಶನಕ್ಕೂ ಮುನ್ನ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Budget 2026: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ವೇಳೆ ವಿರೋಧ ಪಕ್ಷಗಳು ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದವು. ಬಜೆಟ್ ಅಧಿವೇಶನದ ಮೊದಲ ಹಂತವು ನಾಳೆ ಪ್ರಾರಂಭವಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.

ಕೇಂದ್ರ ಬಜೆಟ್ 2026 ಅಧಿವೇಶನಕ್ಕೂ ಮುನ್ನ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ
All Party Leaders Meeting
ಸುಷ್ಮಾ ಚಕ್ರೆ
| Edited By: |

Updated on:Jan 29, 2026 | 11:25 AM

Share

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಹಿರಿಯ ಬಿಜೆಪಿ ನಾಯಕರು ಮತ್ತು ಹಲವಾರು ವಿರೋಧ ಪಕ್ಷದ ಪ್ರತಿನಿಧಿಗಳು ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ವಿರೋಧ ಪಕ್ಷದ ನಾಯಕರಲ್ಲಿ ಸೇರಿದ್ದರು. ಬಜೆಟ್ ಅಧಿವೇಶನವು ನಾಳೆ (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಾಗುವುದು. ಆದರೆ, ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು. ಇದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸತತ ಒಂಬತ್ತನೇ ಬಜೆಟ್ ಮಂಡನೆಯಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರವರೆಗೆ ಮುಂದುವರಿಯಲಿದ್ದು, ಈ ಸಮಯದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲೆ ಚರ್ಚೆ ಮತ್ತು ಅಂಗೀಕಾರ ನಡೆಯಲಿದೆ. ವಿರಾಮದ ನಂತರ ಮಾರ್ಚ್ 9ರಂದು ಸಂಸತ್ತು ಮತ್ತೆ ಸಭೆ ಸೇರಲಿದ್ದು, ಅಧಿವೇಶನ ಏಪ್ರಿಲ್ 2ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಅಧಿವೇಶನದ ಮೊದಲು ತನ್ನ ಪ್ರಸ್ತಾವಿತ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿತು. ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಕೆ. ಸುರೇಶ್, ಪರಿಚಯಿಸಬೇಕಾದ ಯಾವುದೇ ಮಸೂದೆಗಳ ಪಟ್ಟಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ವಿರೋಧ ಪಕ್ಷಗಳು ಅತೃಪ್ತಿಗೊಂಡಿವೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Tue, 27 January 26