AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Building Collapse: ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು

ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಹಳೆಯ ಕಟ್ಟಡ ಕುಸಿತದ ಬಗ್ಗೆ ರಕ್ಷಣಾ ಸೇವೆಗಳಿಗೆ ಬೆಳಗಿನ ಜಾವ 2.16 ಕ್ಕೆ ಕರೆ ಬಂದಿತ್ತು. ಅವಶೇಷಗಳಡಿ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.

Building Collapse: ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು
ಕಟ್ಟಡ ಕುಸಿತ
ನಯನಾ ರಾಜೀವ್
|

Updated on:Mar 21, 2024 | 8:01 AM

Share

ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಹಳೆಯ ಕಟ್ಟಡ ಕುಸಿತದ ಬಗ್ಗೆ ರಕ್ಷಣಾ ಸೇವೆಗಳಿಗೆ ಬೆಳಗಿನ ಜಾವ 2.16 ಕ್ಕೆ ಕರೆ ಬಂದಿತ್ತು. ಅವಶೇಷಗಳಡಿ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.

ಎಲ್ಲರನ್ನೂ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಇಬ್ಬರು ಬರುವಷ್ಟರಲ್ಲಿ ಮೃತಪಟ್ಟಿದ್ದರು. ಮೂರನೇ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಅರ್ಷದ್, 30, ಮತ್ತು ತೌಹಿದ್, 20, ಗಾಯಗೊಂಡ ವ್ಯಕ್ತಿಯನ್ನು ರೆಹಾನ್, 22 ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕನನ್ನು ಶಾಹಿದ್ ಎಂದು ಗುರುತಿಸಲಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಾರದ ಆರಂಭದಲ್ಲಿ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಹತ್ತು ಮಂದಿ ಸಾವನ್ನಪ್ಪಿದ್ದರು. ಮಧ್ಯರಾತ್ರಿಯ ಸುಮಾರಿಗೆ, ಐದು ಅಂತಸ್ತಿನ ಕಟ್ಟಡದ ಒಂದು ಭಾಗವು ಹಜಾರಿ ಮೊಲ್ಲಾ ಬಗಾನ್‌ನ ಗಾರ್ಡನ್ ರೀಚ್ ಪ್ರದೇಶದಲ್ಲಿ ಪಕ್ಕದ ಕೊಳೆಗೇರಿಯ ಮೇಲೆ ಕುಸಿದಿತ್ತು.. ಅವಶೇಷಗಳಡಿ ಸಿಲುಕಿರುವ ಹೆಚ್ಚುವರಿ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು

ಭಾನುವಾರ ತಡರಾತ್ರಿ ಗಾರ್ಡನ್ ರೀಚ್​ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಎನ್‌ಡಿಆರ್‌ಎಫ್ ಮೂಲಗಳ ಪ್ರಕಾರ, ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಇದುವರೆಗೆ ಸುಮಾರು 20 ಜನರನ್ನು ರಕ್ಷಿಸಲಾಗಿದೆ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:57 am, Thu, 21 March 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!