AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲೂ ಡ್ರಮ್’ ಕೊಲೆ ಬೆದರಿಕೆ: ಪ್ರಾಣಭಯಕ್ಕೆ ಹೆಂಡತಿಯನ್ನು ಪ್ರೇಮಿಯ ಜೊತೆ ಕಳಿಸಿಕೊಟ್ಟ ಗಂಡ!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. "ನೀಲಿ ಡ್ರಮ್" ಕೊಲೆಯ ಬೆದರಿಕೆಗೆ ಹೆದರಿ, ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿದ್ದಾನೆ. ಮೀರತ್‌ನ ಭೀಕರ ಕೊಲೆಯ ಮಾದರಿಯಲ್ಲೇ ಬೆದರಿಕೆ ಹಾಕಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಳು. ಜೀವಭಯದಿಂದ ಪತಿ ಈ ನಿರ್ಧಾರ ಕೈಗೊಂಡಿದ್ದಾರೆ.

‘ಬ್ಲೂ ಡ್ರಮ್’ ಕೊಲೆ ಬೆದರಿಕೆ: ಪ್ರಾಣಭಯಕ್ಕೆ ಹೆಂಡತಿಯನ್ನು ಪ್ರೇಮಿಯ ಜೊತೆ ಕಳಿಸಿಕೊಟ್ಟ ಗಂಡ!
‘ಬ್ಲೂ ಡ್ರಮ್’ ಕೊಲೆ ಬೆದರಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Mar 20, 2026 | 9:20 AM

Share

ಬುಲಂದ್‌ಶಹರ್, ಮಾ.20 : ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ‘ನೀಲಿ ಡ್ರಮ್’ (Blue Drum) ಎನ್ನುವ ಪದವೊಂದು ಕ್ರೌರ್ಯದ ಸಂಕೇತವಾಗಿ ಪ್ರಚಾರವಾಗುತ್ತಿದೆ. ಕಳೆದ ವರ್ಷ ಮೀರತ್‌ನಲ್ಲಿ ನಡೆದ ಭೀಕರ ಕೊಲೆಯ ನೆನಪು ಮಾಸುವ ಮುನ್ನವೇ, ಅದೇ ಮಾದರಿಯ ಬೆದರಿಕೆಗೆ ಹೆದರಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ಉತ್ತರ ಪ್ರದೇಶದ ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್, ಕಳೆದ ಏಳು ವರ್ಷಗಳಿಂದ ಸಂಸಾರ ನಡೆಸುತ್ತಿದ್ದರು. ಈ ದಂಪತಿಗೆ ಆರು ತಿಂಗಳ ಮಗುವೂ ಇದೆ. ಆದರೆ, ರಾಜಕುಮಾರ್ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಪತ್ನಿಯ ಫೋನ್‌ನಲ್ಲಿ ಪ್ರಿಯಕರನ ಜೊತೆಗಿನ ಆಕ್ಷೇಪಾರ್ಹ ಫೋಟೋಗಳು ಮತ್ತು ಫೇಸ್‌ಬುಕ್‌ನಲ್ಲಿ “ಸಿಮೆಂಟ್ ಮತ್ತು ನೀಲಿ ಡ್ರಮ್” ಎಂಬ ಕ್ಯಾಪ್ಷನ್ ಇರುವ ಪೋಸ್ಟ್ ಕಂಡು ರಾಜಕುಮಾರ್ ಬೆಚ್ಚಿಬಿದ್ದಿದ್ದಾರೆ.

ಕಳೆದ ವರ್ಷ ಮೀರತ್‌ನಲ್ಲಿ ಮುಸ್ಕಾನ್ ಎಂಬಾಕೆ ತನ್ನ ಪ್ರಿಯಕರ ಸಾಹಿಲ್ ಜೊತೆ ಸೇರಿ ಪತಿಯನ್ನು ಕೊಂದು, ಶವವನ್ನು ನೀಲಿ ಡ್ರಮ್‌ಗೆ ಹಾಕಿ ಸಿಮೆಂಟ್‌ನಿಂದ ತುಂಬಿಸಿ ಮುಚ್ಚಿದ್ದಳು. ಈ ಘಟನೆಯನ್ನೇ ಉದಾಹರಣೆಯಾಗಿ ನೀಡಿದ್ದ ರಾಜಕುಮಾರ್ ಪತ್ನಿ, “ನೀನೂ ಅಡ್ಡ ಬಂದರೆ ನಿನ್ನನ್ನು ಮತ್ತು ನಿನ್ನ ಸಹೋದರರನ್ನು ಕೊಂದು ನೀಲಿ ಡ್ರಮ್‌ಗೆ ತುರುಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಿಂದ ಹಾರಿದ ವ್ಯಕ್ತಿ, ಫ್ಲಾಟ್​ ಒಳಗೆ ತಾಯಿಯ ಮೃತದೇಹ ಪತ್ತೆ

ಜೀವಭಯಕ್ಕೆ ಹೆದರಿದ ರಾಜಕುಮಾರ್ ಪೊಲೀಸರ ಮೊರೆ ಹೋಗಿದ್ದರು. ಮಹಿಳಾ ಮಧ್ಯಸ್ಥಿಕೆ ಕೇಂದ್ರದಲ್ಲಿ ಕೌನ್ಸೆಲಿಂಗ್ ನಡೆಸಿದಾಗ ಪತ್ನಿ ಪ್ರಿಯಕರನ ಜೊತೆಗೇ ಇರುತ್ತೇನೆ ಎಂದು ಹಠ ಹಿಡಿದಿದ್ದಾರೆ. ಕೊನೆಗೆ ರಾಜಕುಮಾರ್ ತನ್ನ ಜೀವ ಉಳಿಸಿಕೊಳ್ಳಲು ಪತ್ನಿಯನ್ನು ಪ್ರಿಯಕರನ ಜೊತೆ ಕಳುಹಿಸಿಕೊಡಲು ಒಪ್ಪಿಕೊಂಡಿದ್ದಾರೆ. “ಆಕೆ ನನಗಾಗಿ ಅಡುಗೆ ಮಾಡುತ್ತಿರಲಿಲ್ಲ, ಮಗುವಿನ ಕೊಳೆತ ಬಟ್ಟೆಗಳನ್ನು ತೊಳೆಯುವ ಬದಲು ಎಸೆಯುತ್ತಿದ್ದಳು” ಎಂದು ರಾಜಕುಮಾರ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರಾಷ್ಟ್ರದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 am, Fri, 20 March 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!