ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ? ಅಪ್ರಾಪ್ತ ಮಗಳನ್ನು ಕೊಂದ ತಂದೆ

ಅಪ್ಪನ ಜೇಬಿಂದ ಹಣ ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ತಂದೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. 13 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಬಿಚೌಲಾ ಗ್ರಾಮದ ನಿವಾಸಿ ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿ ಸೋನಮ್ (13) ಎಂದು ಗುರುತಿಸಲಾಗಿದೆ.

ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ? ಅಪ್ರಾಪ್ತ ಮಗಳನ್ನು ಕೊಂದ ತಂದೆ
ಕೊಲೆ

Updated on: Sep 27, 2025 | 8:17 AM

ಬುಲಂದ್​ಶಹರ್, ಸೆಪ್ಟೆಂಬರ್ 27: ಅಪ್ಪನ ಜೇಬಿಂದ ಹಣ(Money) ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ತಂದೆ ಹತ್ಯೆ(Murder) ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. 13 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಬಿಚೌಲಾ ಗ್ರಾಮದ ನಿವಾಸಿ ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿ ಸೋನಮ್ (13) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ, ಅನುಪ್ಶಹರ್ ಪೊಲೀಸ್ ಠಾಣೆ ಪ್ರದೇಶದ ಸೇತುವೆಯ ಕೆಳಗೆ ಪೊದೆಗಳಲ್ಲಿ ಸಮವಸ್ತ್ರದಲ್ಲಿದ್ದ ಶಾಲಾ ಬಾಲಕಿಯ ಶವ ಪತ್ತೆಯಾಗಿದೆ ಎಂದು ಬುಲಂದ್ಶಹರ್ ಪೊಲೀಸರಿಗೆ ಕರೆ ಬಂದಿತು.

ಪೊಲೀಸ್ ತನಿಖೆಯಲ್ಲಿ ಸೋನಂ ಗುರುವಾರ ಶಾಲೆಗೆ ಹೋಗಿದ್ದಳು ಎಂದು ತಿಳಿದುಬಂದಿದೆ. ಆಕೆಯ ತಂದೆ ಅಜಯ್ ಶರ್ಮಾ ಶಾಲೆ ಮುಗಿದ ನಂತರ ಆಕೆಯನ್ನು ಕರೆದುಕೊಂಡು ಹೋದರು, ಆದರೆ ಮನೆಗೆ ಕರೆದೊಯ್ಯುವ ಬದಲು, ತಮ್ಮ ಹೊಲಕ್ಕೆ ಕರೆದುಕೊಂಡು ಹೋದರು. ವಿಚಾರಣೆಯ ಸಮಯದಲ್ಲಿ, ಶರ್ಮಾ ತನ್ನ ಮಗಳನ್ನು ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಕೊಂದು ನಂತರ ಆಕೆಯ ದೇಹವನ್ನು ಹತ್ತಿರದ ಕಾಲುವೆಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಭದ್ರಾ ಕಾಲುವೆಗೆ ತಳ್ಳಿ ಯುವತಿ ಕೊಲೆ ; ಸ್ವಾತಿ ತಂದೆ ಬಿಚ್ಚಿಟ್ಟ ಸತ್ಯವೇನು?

ಆತನ ತಪ್ಪೊಪ್ಪಿಗೆಯ ಆಧಾರದ ಮೇಲೆ ಆಕೆಯ ಬ್ಯಾಗ್​ ಅನ್ನು ಹೊಲದಿಂದ ವಶಪಡಿಸಿಕೊಳ್ಳಲಾಯಿತು. ಪೊಲೀಸರ ಪ್ರಕಾರ, ಶರ್ಮಾ ತನ್ನ ಮಗಳು ಮನೆಯಿಂದ ಹಣವನ್ನು ಕದಿಯುತ್ತಿದ್ದಳು ಎಂದು ಹೇಳಿಕೊಂಡಿದ್ದಾನೆ, ಇದರಿಂದಾಗಿ ದಂಪತಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು.

ಮಗಳನ್ನು ಕೊಂದ ನಂತರ, ಆ ವ್ಯಕ್ತಿ ಶಾಲೆಗೆ ತನ್ನ ಮಗಳು ಸಂಬಂಧಿಕರೊಂದಿಗೆ ಇರಲು ಹೋಗಿದ್ದಾಳೆ ಮತ್ತು ಮುಂದಿನ ಮೂರು ನಾಲ್ಕು ದಿನಗಳವರೆಗೆ ಶಾಲೆಗೆ ಹಿಂತಿರುಗುವುದಿಲ್ಲ ಎಂದು ತಿಳಿಸಿದ್ದಾನೆ. ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಆರೋಪಿಗಳು ಇನ್ನೂ ಬಂಧನದಲ್ಲಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ