AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಹೀನ್​ ಭಾಗ್ ವಿವಾದದ ನಡುವೆ ದೆಹಲಿಯ ವಿವಿಧೆಡೆ ಮತ್ತೆ ಬುಲ್​ಡೋಜರ್ ಘರ್ಜನೆ

ದೆಹಲಿಯ ನಗರಾಡಳಿತ ಸಂಸ್ಥೆಗಳು ನಗರ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಈ ಕಾರ್ಯಾಚರಣೆ ನಡೆಯುತ್ತಿದೆ.

ಶಾಹೀನ್​ ಭಾಗ್ ವಿವಾದದ ನಡುವೆ ದೆಹಲಿಯ ವಿವಿಧೆಡೆ ಮತ್ತೆ ಬುಲ್​ಡೋಜರ್ ಘರ್ಜನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 10, 2022 | 1:17 PM

Share

ದೆಹಲಿ: ರಾಷ್ಟ್ರ ರಾಜಧಾನಿಯ ಹಲವೆಡೆ ಬುಲ್​ಡೋಜರ್​ಗಳು ಮತ್ತೆ ಘರ್ಜಿಸಿವೆ. ಉತ್ತರ ದೆಹಲಿಯ ಮಂಗಳಪುರಿ ಮತ್ತು ದಕ್ಷಿಣ ದೆಹಲಿಯ ಫ್ರೆಂಡ್ಸ್ ಕಾಲೊನಿ ಪ್ರದೇಶಗಳಲ್ಲಿ ಬುಲ್​ಡೋಜರ್​ಗಳನ್ನು ಬಳಸಿ ಅತಿಕ್ರಮಣ ತೆರವುಗೊಳಿಸಲಾಯಿತು. ದೆಹಲಿಯ ನಗರಾಡಳಿತ ಸಂಸ್ಥೆಗಳು ನಗರ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಈ ಕಾರ್ಯಾಚರಣೆ ನಡೆಯುತ್ತಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅನಪೇಕ್ಷಿತ ಬೆಳವಣಿಗೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಪ್ರತಿಭಟನಾಕಾರರು ಸ್ಥಳಕ್ಕೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ.

ಮಂಗಲಪುರಿಯು ಉತ್ತರ ದೆಹಲಿ ನಗರ ಪಾಲಿಕೆ ವ್ಯಾಪ್ತಿಗೆ ಬಂದರೆ, ನ್ಯೂ ಫ್ರೆಂಡ್ಸ್ ಕಾಲೊನಿಯು ದಕ್ಷಿಣ ದೆಹಲಿ ನಗರ ಪಾಲಿಕೆ ವ್ಯಾಪ್ತಿಗೆ ಬರುತ್ತದೆ. ಈ ಎರಡೂ ನಗರ ಪಾಲಿಕೆಗಳಲ್ಲಿ ಬಿಜೆಪಿ ಆಳ್ವಿಕೆಯಿದೆ. ಎಎನ್​ಐ ಸುದ್ದಿಸಂಸ್ಥೆ ಹಂಚಿಕೊಂಡಿರುವ ವಿಡಿಯೊ ತುಣುಕುಗಳಲ್ಲಿ ಬುಲ್​ಡೋಜರ್​ಗಳು ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುತ್ತಿರುವುದನ್ನು ಗಮನಿಸಬಹುದಾಗಿದೆ.

ಶಾಹೀನ್​ ಭಾಗ್​ನಲ್ಲಿ ನಡೆದ ಇಂಥದ್ದೇ ತೆರವು ಕಾರ್ಯಾಚರಣೆಯಲ್ಲಿ ಮಹಿಳೆಯರು ಉಗ್ರ ಪ್ರತಿಭಟನೆ ನಡೆಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹೋರಾಟದ ಕೇಂದ್ರ ಬಿಂದುವಾಗಿದ್ದ ಶಾಹೀನ್ ಭಾಗ್​ನಲ್ಲಿ ತೆರವು ಕಾರ್ಯಾಚರಣೆಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾ ಮತ್ತು ವ್ಯಾಪಾರಿಗಳಿಂದಲೂ ವಿರೋಧ ವ್ಯಕ್ತವಾಗಿತ್ತು. ಕೊನೆಗೆ ದೆಹಲಿ ಪಾಲಿಕೆ ತೆರವು ಕಾರ್ಯಾಚರಣೆ ಕೈಬಿಟ್ಟಿತ್ತು.

ದೆಹಲಿಯ ಜಹಂಗೀರ್​ಪುರಿ ಪ್ರದೇಶದಲ್ಲಿ ಹನುಮಾನ್ ಜಯಂತಿ ಮೆರವಣಿಗೆ ವೇಳೆ ಕೋಮು ಸಂಘರ್ಷ ನಡೆದ ನಂತರ ಆರಂಭವಾದ ಈ ತೆರವು ಕಾರ್ಯಾಚರಣೆಗಳು ನಿರ್ದಿಷ್ಟ ಸಮುದಾಯವನ್ನು ಗಮನದಲ್ಲಿರಿಸಿಕೊಂಡಿವೆ ಎಂದು ಪ್ರತಿಪಕ್ಷಗಳು ಆಕ್ಷೇಪಿಸಿವೆ. ಈ ಪ್ರದೇಶದಲ್ಲಿ ನಡೆದಿದ್ದ ಗಲಭೆಯಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಓರ್ವ ನಾಗರಿಕ ಗಾಯಗೊಂಡಿದ್ದರು. ಸಂಘರ್ಷದ ನಂತರ ಬಿಜೆಪಿ ದೆಹಲಿ ಘಟಕದ ಮುಖ್ಯಸ್ಥ ಆದೇಶ್ ಗುಪ್ತಾ ಉತ್ತರ ದೆಹಲಿ ಮೇಯರ್​ಗೆ ಪತ್ರ ಬರೆದು, ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದರು.

ಅತಿಕ್ರಮಣ ತೆರವು ಕಾರ್ಯಾಚರಣೆಗಳು ದೈನಂದಿನ ಕಾರ್ಯನಿರ್ವಹಣೆಯ ಭಾಗವಷ್ಟೇ ಆಗಿವೆ ಎಂದು ಮೇಯರ್ ರಾಜಾ ಇಕ್ಬಾಲ್ ಸಿಂಗ್ ಹೇಳಿದ್ದಾರೆ. ಆದರೆ ಈ ಕಾರ್ಯಾಚರಣೆಯ ಅವಧಿಯು ಈ ಕಾರ್ಯಾಚರಣೆಯ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವಂತೆ ಮಾಡಿದೆ.

ಇದನ್ನೂ ಓದಿ: ಬುಲ್​ಡೋಜರ್ ರಾಜಕಾರಣ ಕರ್ನಾಟಕಕ್ಕೆ ಬೇಡ: ಬಿಜೆಪಿಗೆ ಎಚ್​ ವಿಶ್ವನಾಥ್ ತಾಕೀತು

ಇದನ್ನೂ ಓದಿ: ಬುಲ್​ಡೋಜರ್ ರಾಜಕೀಯ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಸ್ಲಿಂ ಸಂಘಟನೆ ಅರ್ಜಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್