AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದ ವ್ಯಕ್ತಿಗೆ ಸೇರಿದ ಕಟ್ಟಡ ಕೆಡವಿದ ನೋಯ್ಡಾ ಪ್ರಾಧಿಕಾರ

ಮಹಿಳೆ ಯಾರು ಎಂದು ತ್ಯಾಗಿಯ ಸಹಚರರು ಹೌಸಿಂ ಸೊಸೈಟಿಗೆ ಕೇಳಿಕೊಂಡು ಬಂದ ಬೆನ್ನಲ್ಲೇ ತ್ಯಾಗಿ ವಿರುದ್ಧ ಈ ಕ್ರಮಕೈಗೊಳ್ಳಲಾಗಿದೆ

ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದ ವ್ಯಕ್ತಿಗೆ ಸೇರಿದ ಕಟ್ಟಡ ಕೆಡವಿದ ನೋಯ್ಡಾ ಪ್ರಾಧಿಕಾರ
ಬುಲ್ಡೋಜರ್
TV9 Web
| Edited By: |

Updated on: Aug 08, 2022 | 3:47 PM

Share

ಕಳೆದ ವಾರ ನೋಯ್ಡಾ (Noida) ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆ ಜತೆ ಶ್ರೀಕಾಂತ್ ತ್ಯಾಗಿ (Shrikant Tyagi) ಎಂಬ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ  ಹರಿದಾಡಿತ್ತು. ಮಹಿಳೆ ಜತೆ ವಾಗ್ವಾದ ನಡೆಸಿದ ತ್ಯಾಗಿ ಆಕೆಯನ್ನು ದೂಡುತ್ತಿರುವುದು ವಿಡಿಯೊದಲ್ಲಿ ಕಾಣಿಸಿದೆ. ಶ್ರೀಕಾಂತ್ ತ್ಯಾಗಿ ಅಕ್ರಮವಾಗಿ  ನಿರ್ಮಿಸಿದ ಕಟ್ಟಡವನ್ನು ಸೋಮವಾರ ಬುಲ್ಡೋಜರ್ ಬಂದು ಕೆಡವಿದೆ. ಆ ಮಹಿಳೆ ಯಾರು ಎಂದು ತ್ಯಾಗಿಯ ಸಹಚರರು ಹೌಸಿಂ ಸೊಸೈಟಿಗೆ ಕೇಳಿಕೊಂಡು ಬಂದ ಬೆನ್ನಲ್ಲೇ ತ್ಯಾಗಿ ವಿರುದ್ಧ ಈ ಕ್ರಮಕೈಗೊಳ್ಳಲಾಗಿದೆ. ತ್ಯಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಗ್ಯಾಂಗ್​​ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತ್ಯಾಗಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಂಚೆಯೇ ಎರಡು ಬುಲ್ಡೋಜರ್‌ಗಳು ಬಂದಿದ್ದು ಮರದ ಕಂಬಗಳನ್ನು ಕತ್ತರಿಸುತ್ತಿದ್ದ ಕಾರ್ಮಿಕರು ಅವರಿಗೆ ದಾರಿ ಮಾಡಿಕೊಟ್ಟರು. ಬುಲ್ಡೋಜರ್‌ಗಳು ಗಾಜಿನ ಮೇಲ್ಛಾವಣಿ ಮತ್ತು ಮರದ ಕಂಬಗಳನ್ನು ಭಾಗಶಃ ಕೆಡವಿವೆ.

ನೋಯ್ಡಾ ಪ್ರಾಧಿಕಾರದ ಜನರಲ್ ಮ್ಯಾನೇಜರ್ (ಯೋಜನೆ) ಇಶ್ತಿಯಾಕ್ ಅಹ್ಮದ್ ಸಹ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ಉಪಸ್ಥಿತರಿದ್ದರು. ಕಳೆದ ವಾರ ಮಹಿಳೆ ಮತ್ತು ತ್ಯಾಗಿ ನಡುವಿನ ಜಗಳ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತ್ಯಾಗಿ ಮೇಲೆ ಕ್ರಮ ಕೈಗೊಳ್ಳಲಾಗಿತ್ತು.

ಸೊಸೈಟಿಯ ಸಾಮಾನ್ಯ ಪ್ರದೇಶದಲ್ಲಿ ಎಂಟು ತಾಳೆ ಮರಗಳನ್ನು ನೆಟ್ಟಿದ್ದಾರೆ ತ್ಯಾಗಿ.ಈ ಮೂಲಕ ಅವರು ಜಾಗ ಅತಿಕ್ರಮಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ ಮರಗಳನ್ನು ನೆಟ್ಟಿದ್ದರು ಮತ್ತು ಕಳೆದ ವಾರ ಕೆಲವು ಮುಳ್ಳುಗಿಡಗಳನ್ನು ನೆಡಲು ಸಜ್ಜಾಗಿದ್ದರು ಎಂದು ವಸತಿ ಸಮಾಜದ ಮಂಡಳಿಯ ಸದಸ್ಯರು ಈ ಹಿಂದೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.  ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿವೆ ಎಂದು ಪಾಲಿಕೆ ಸದಸ್ಯರು ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ 81,000 ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 52,400 ಫಾಲೋವರ್ ಹೊಂದಿರುವ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳು ತ್ಯಾಗಿ ಅವರನ್ನು ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಎಂದು ಹೇಳುತ್ತಿವೆ. ಆದರೆ ತ್ಯಾಗಿಗೂ ನಮಗೂ ಸಂಬಂಧವಿಲ್ಲ ಎಂದು ಪಕ್ಷ ಹೇಳಿದೆ.

ತಲೆಮರೆಸಿಕೊಂಡಿರುವ ಶ್ರೀಕಾಂಕ್  ತ್ಯಾಗಿಯನ್ನು  ಪತ್ತೆ ಹಚ್ಚಿದವರಿಗೆ 25000 ರೂಪಾಯಿ ಬಹುಮಾನವನ್ನು ನೋಯ್ಡಾ ಪೊಲೀಸರು  ಘೋಷಿಸಿದ್ದಾರೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳನ್ನು ಓದಲು  ಇಲ್ಲಿ  ಕ್ಲಿಕ್ ಮಾಡಿ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್