AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಲೆ ತೆರವು ನೋಟಿಸ್ ಪ್ರಶ್ನಿಸಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್​

ತನಗೆ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ತನಗೆ ಕಳುಹಿಸಿದ್ದ ನೋಟಿಸ್‌ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ . ಗುರುವಾರ ಹೊರಡಿಸಿದ ತನ್ನ ಆದೇಶದಲ್ಲಿ, ಮೊಯಿತ್ರಾ ಅವರು ಸಂಸದೆಯಾಗಿ ಅಮಾನತುಗೊಂಡಿರುವುದರಿಂದ ಬಂಗಲೆಯಲ್ಲಿ ವಾಸಿಸುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ಬಂಗಲೆ ತೆರವು ನೋಟಿಸ್ ಪ್ರಶ್ನಿಸಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್​
ಮಹುವಾImage Credit source: The Wire
ನಯನಾ ರಾಜೀವ್
|

Updated on: Jan 19, 2024 | 7:54 AM

Share

ತನಗೆ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ತನಗೆ ಕಳುಹಿಸಿದ್ದ ನೋಟಿಸ್‌ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ . ಗುರುವಾರ ಹೊರಡಿಸಿದ ತನ್ನ ಆದೇಶದಲ್ಲಿ, ಮೊಯಿತ್ರಾ ಅವರು ಸಂಸದೆಯಾಗಿ ಅಮಾನತುಗೊಂಡಿರುವುದರಿಂದ ಬಂಗಲೆಯಲ್ಲಿ ವಾಸಿಸುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದ ಮೇಲೆ ಡಿಸೆಂಬರ್ 8 ರಂದು ಅವರನ್ನು ಉಚ್ಛಾಟಿಸಿದ ಬಳಿಕ ಜನವರಿ 7ರೊಳಗೆ ಬಂಗೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು.

ನಂತರ ತೃಣಮೂಲ ಕಾಂಗ್ರೆಸ್‌ನ ನಾಯಕರು ಡಿಒಇ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು. ಆದಾಗ್ಯೂ, ಜನವರಿ 4 ರಂದು ನ್ಯಾಯಾಲಯವು ಮಹುವಾ ಮೊಯಿತ್ರಾ ಅವರಿಗೆ ಸರ್ಕಾರವು ಮಂಜೂರು ಮಾಡಿದ ವಸತಿಗೃಹದಲ್ಲಿ ಉಳಿಯಲು ಅನುಮತಿಗಾಗಿ DoE ಅನ್ನು ಸಂಪರ್ಕಿಸಲು ಕೇಳಿತು.

ಮತ್ತಷ್ಟು ಓದಿ: ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ ಮೊರೆ ಹೋದ ಮಹುವಾ ಮೊಯಿತ್ರಾ

ತನ್ನನ್ನು ಪದಚ್ಯುತಗೊಳಿಸುವಂತೆ ಶಿಫಾರಸು ಮಾಡಿದ ನೈತಿಕ ಸಮಿತಿಯ ವರದಿಯನ್ನು ಲೋಕಸಭೆಯು ಅಂಗೀಕರಿಸಿದ ನಂತರ ಮೊಯಿತ್ರಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಉಚ್ಚಾಟನೆಯನ್ನು ಪ್ರಶ್ನಿಸಿದ್ದರು. ಸುಪ್ರೀಂ ಕೋರ್ಟ್‌ ಈ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ, ಸಂಸತ್ತಿನ ಆಂತರಿಕ ವಿಚಾರಗಳಲ್ಲಿ ತಾನು ಮೂಗು ತೂರಿಸಲು ಸಾಧ್ಯವಿಲ್ಲ

ಮೊಯಿತ್ರಾ ಅವರು ತಕ್ಷಣ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇಯ ಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋದರು. ಆದಾಗ್ಯೂ, ನ್ಯಾಯಾಲಯವು ಆಕೆಯ ಮನವಿಯನ್ನು ತಿರಸ್ಕರಿಸಿತು.

ಆದರೆ ಮಹುವಾ ಮೊಯಿತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಐಸಿಯುನಲ್ಲಿದ್ದಾರೆ ಈಗ ಮನೆಯಿಂದ ಹೊರಹಾಕಬೇಡಿ ಎಂದು ಮೊಯಿತ್ರಾ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ