Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ

ಕಳೆದ 33 ದಿನಗಳಿಂದ ತಮ್ಮ ಚಳುವಳಿಗೆ ಆಶ್ರಯ ನೀಡಿದ ಬುರಾರಿ ನಿರಂಕಾರಿ ಮೈದಾನಕ್ಕೆ ‘ಕಿಸಾನ್​ಪುರ’ ಎಂದು ಪಂಜಾಬ್ ರೈತರು ಮರು ನಾಮಕರಣ ಮಾಡಿದ್ದಾರೆ

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ
ರಸ್ತೆ ಬದಿ ನೆಟ್ಟ ಟೆಂಟ್​ಗಳಲ್ಲಿ ರೈತರ ವಾಸ್ತವ್ಯ
Follow us
guruganesh bhat
|

Updated on:Dec 28, 2020 | 5:19 PM

ದೆಹಲಿ: ಕಳೆದ 33 ದಿನಗಳಿಂದ ಸತತ ಚಳುವಳಿ ನಡೆಸುತ್ತಿದ್ದ ಪಂಜಾಬ್ ರೈತರು ತಾವು ಠಿಕಾಣಿ ಹೂಡಿದ್ದ ಬುರಾರಿಯ ನಿರಂಕಾರಿ ಮೈದಾನದ ಹೆಸರನ್ನೇ  ಬದಲಿಸಿದ್ದಾರೆ. ತಮ್ಮ ಹೋರಾಟಕ್ಕೆ ಆಶ್ರಯ ನೀಡಿದ ಮೈದಾನಕ್ಕೆ ‘ಕಿಸಾನ್ ​ಪುರ’ ಎಂದು ನಾಮಕರಣ ಮಾಡಿದ್ದಾರೆ. ‘ಊರು ತೊರೆದು ಹೋರಾಟಕ್ಕೆ ಬಂದ ನಮಗೆ ಈ ಮೈದಾನ ಆಶ್ರಯ ನೀಡಿದೆ. ನಮ್ಮ ಗ್ರಾಮದಂತೆಯೇ ಒಂದು ವ್ಯವಸ್ಥೆ ಇಲ್ಲಿ ರೂಪುಗೊಂಡಿದೆ. ಹೀಗಾಗಿ, ಈ ಮೈದಾನಕ್ಕೆ ಮರು ನಾಮಕರಣ ಮಾಡಿದ್ದೇವೆ’ ಎಂದು ಚಳುವಳಿಗಾರರು ತಿಳಿಸಿದ್ದಾರೆ.

ಅರುಣ್ ಜೇಟ್ಲಿ ಇದ್ದಿದ್ದರೆ.. ಬಿಜೆಪಿಯ ದಿವಂಗತ ನಾಯಕ ಅರುಣ್ ಜೇಟ್ಲಿಯವರು ದೆಹಲಿ ಚಲೋ ಹಿನ್ನೆಲೆಯಲ್ಲಿ ಪ್ರಸ್ತಾಪಿಸಲ್ಪಟ್ಟಿದ್ದಾರೆ. ಬಿಜೆಪಿಯ ಸಂಕಷ್ಟಕರ ಸನ್ನಿವೇಷಗಳಲ್ಲಿ ನೆರವಾಗುತ್ತಿದ್ದ ಅರುಣ್ ಜೇಟ್ಲಿಯವರು ಈಗ ಜೀವಂತವಿದ್ದರೆ ಪಂಜಾಬ್ ರೈತರ ಚಳುವಳಿ ಇಷ್ಟೊಂದು ಕಾಲ ಮುಂದುವರೆಯುತ್ತಿರಲಿಲ್ಲ’ ಎಂದು ರಾಜ್ಯಸಭಾ ಸಂಸದ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸರ್ಕಾರದ ಕೆಲ ಸಚಿವರ ಕಾಲೆಳೆದಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​ರನ್ನು ಭೇಟಿಯಾದ 25 ರೈತ ನಾಯಕರು ನೂತನ ಕೃಷಿ ಕಾಯ್ದೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತ, ಪಂಜಾಬ್​ ಪ್ರದೇಶ್ ಕಾಂಗ್ರೆಸ್​ ಸೇವಾದಳದ ಕಾರ್ಯಕರ್ತರು ಹರಿಯಾಣ ಮುಖ್ಯಮಂತ್ರಿ ಮೋಹರ್ ಲಾಲ್ ಖಟ್ಟರ್​ರ ಮನೆಯ ಮುಂದೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ರೈತರ ಚಳುವಳಿ ಕುರಿತು ಸ್ವಾಯತ್ತ ಸಮಿತಿಯೊಂದನ್ನು ರಚಿಸುವಂತೆ ಸರ್ವೋಚ್ಛ ನ್ಯಾಯಾಲಯ ಈಗಾಗಲೇ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Photos: ಒಂದು ತಿಂಗಳು ಪೂರೈಸಿದ ರೈತರ Delhi Chalo ಪ್ರತಿಭಟನೆ

Published On - 4:59 pm, Mon, 28 December 20

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ