ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್
ಬಾಂಬೆ ಹೈಕೋರ್ಟ್
Follow us
|

Updated on: Sep 14, 2023 | 8:56 PM

ಮುಂಬೈ ಸೆಪ್ಟೆಂಬರ್ 14: ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ (Bombay High Court) ಹೇಳಿದೆ. ನ್ಯಾಯಮೂರ್ತಿಗಳಾದ ನಿತಿನ್ ಸಾಂಬ್ರೆ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಸೆಪ್ಟೆಂಬರ್ 6 ರಂದು ತನ್ನ 13 ವರ್ಷದ ವಿವಾಹವನ್ನು ರದ್ದು ಮಾಡುವಂತೆ ಕೋರಿ 35 ವರ್ಷದ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು. ತಮ್ಮ ವಿಚ್ಛೇದಿತ ಪತ್ನಿ ‘ಕ್ರೌರ್ಯ’ ಮಾಡುತ್ತಿದ್ದಾಳೆ ಎಂದು ಅವರು ದೂರಿದ್ದರೂ ಅದನ್ನು ಸಾಬೀತು ಪಡಿಸಲು ಅವರಿಂದ ಸಾಧ್ಯವಾಗಲಿಲ್ಲ, ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಕಚೇರಿಯಿಂದ ಬಂದ ನಂತರ ಮನೆಯ ಎಲ್ಲಾ ಕೆಲಸಗಳನ್ನು ಮಾಡಲು ಒತ್ತಾಯಿಸಲಾಯಿತು. ತನ್ನ ಕುಟುಂಬದಲ್ಲಿ ಈ ವಿಷಯ ಹೇಳಿದ್ದಕ್ಕೆ ಆತ ಬೈದಿದ್ದ. ವಿಚ್ಛೇದಿತ ಪತಿ ತನಗೆ ಹಲವು ಬಾರಿ ದೈಹಿಕ ಕಿರುಕುಳ ನೀಡಿದ್ದಾನೆ ಎಂದೂ ಆಕೆ ಹೇಳಿಕೊಂಡಿದ್ದಾರೆ.

ಪೀಠವು ತನ್ನ ಆದೇಶದಲ್ಲಿ, ಪುರುಷ ಮತ್ತು ಮಹಿಳೆ ಇಬ್ಬರೂ ಉದ್ಯೋಗದಲ್ಲಿದ್ದಾರೆ. ಮನೆಯ ಎಲ್ಲಾ ಕೆಲಸಗಳನ್ನು ಹೆಂಡತಿ ಮಾಡಬೇಕೆಂದು ನಿರೀಕ್ಷಿಸುವುದು ಹಳೇ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಗಮನಿಸಿತು. ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಪತಿ ಮತ್ತು ಪತ್ನಿ ಇಬ್ಬರೂ ಸಮಾನವಾಗಿ ಹೊರಬೇಕು. ಮನೆಯ ಮಹಿಳೆ ಮಾತ್ರ ಮನೆಯ ಜವಾಬ್ದಾರಿಯನ್ನು ಹೊರಬೇಕು ಎಂದು ನಿರೀಕ್ಷಿಸುವ ಹಿಂದಿನ ಕಾಲದ ಮನಸ್ಥಿತಿಯು ಸಕಾರಾತ್ಮಕ ಬದಲಾವಣೆಗೆ ಒಳಗಾಗಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ:  ಮುಂಬೈ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ, ಮೂವರಿಗೆ ಗಾಯ

ವೈವಾಹಿಕ ಸಂಬಂಧವು ಈ ಪ್ರಕರಣದಲ್ಲಿ ಪತ್ನಿ ತನ್ನ ಪೋಷಕರಿಂದ ಪ್ರತ್ಯೇಕಗೊಳ್ಳಲು ಕಾರಣವಾಗಬಾರದು. ಅದೇ ವೇಳೆ ಆಕೆ ತನ್ನ ಪೋಷಕರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಮಾಡಬಾರದು.

ಒಬ್ಬರ ಪೋಷಕರೊಂದಿಗೆ ಸಂಪರ್ಕದಲ್ಲಿರುವುದನ್ನು ಯಾವುದೇ ಕಲ್ಪನೆಯ ಮೂಲಕ ಇತರರಿಗೆ ಮಾನಸಿಕ ಸಂಕಟವನ್ನು ಉಂಟುಮಾಡುತ್ತದೆ ಎಂದು ಅರ್ಥೈಸಲಾಗುವುದಿಲ್ಲ. ನಮ್ಮ ದೃಷ್ಟಿಯಲ್ಲಿ, ಪ್ರತಿವಾದಿಯ ಮೇಲೆ ತನ್ನ ಪೋಷಕರೊಂದಿಗಿನ ಸಂಪರ್ಕವನ್ನು ನಿಲ್ಲಿಸಲು ನಿರ್ಬಂಧಗಳನ್ನು ಹಾಕುವುದು, ವಾಸ್ತವವಾಗಿ, ದೈಹಿಕ ಕ್ರೌರ್ಯದ ಜತೆಗೆ ಮಾನಸಿಕ ಕ್ರೌರ್ಯವೂ ಆಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು