AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್
ಬಾಂಬೆ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Sep 14, 2023 | 8:56 PM

Share

ಮುಂಬೈ ಸೆಪ್ಟೆಂಬರ್ 14: ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ (Bombay High Court) ಹೇಳಿದೆ. ನ್ಯಾಯಮೂರ್ತಿಗಳಾದ ನಿತಿನ್ ಸಾಂಬ್ರೆ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಸೆಪ್ಟೆಂಬರ್ 6 ರಂದು ತನ್ನ 13 ವರ್ಷದ ವಿವಾಹವನ್ನು ರದ್ದು ಮಾಡುವಂತೆ ಕೋರಿ 35 ವರ್ಷದ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು. ತಮ್ಮ ವಿಚ್ಛೇದಿತ ಪತ್ನಿ ‘ಕ್ರೌರ್ಯ’ ಮಾಡುತ್ತಿದ್ದಾಳೆ ಎಂದು ಅವರು ದೂರಿದ್ದರೂ ಅದನ್ನು ಸಾಬೀತು ಪಡಿಸಲು ಅವರಿಂದ ಸಾಧ್ಯವಾಗಲಿಲ್ಲ, ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಕಚೇರಿಯಿಂದ ಬಂದ ನಂತರ ಮನೆಯ ಎಲ್ಲಾ ಕೆಲಸಗಳನ್ನು ಮಾಡಲು ಒತ್ತಾಯಿಸಲಾಯಿತು. ತನ್ನ ಕುಟುಂಬದಲ್ಲಿ ಈ ವಿಷಯ ಹೇಳಿದ್ದಕ್ಕೆ ಆತ ಬೈದಿದ್ದ. ವಿಚ್ಛೇದಿತ ಪತಿ ತನಗೆ ಹಲವು ಬಾರಿ ದೈಹಿಕ ಕಿರುಕುಳ ನೀಡಿದ್ದಾನೆ ಎಂದೂ ಆಕೆ ಹೇಳಿಕೊಂಡಿದ್ದಾರೆ.

ಪೀಠವು ತನ್ನ ಆದೇಶದಲ್ಲಿ, ಪುರುಷ ಮತ್ತು ಮಹಿಳೆ ಇಬ್ಬರೂ ಉದ್ಯೋಗದಲ್ಲಿದ್ದಾರೆ. ಮನೆಯ ಎಲ್ಲಾ ಕೆಲಸಗಳನ್ನು ಹೆಂಡತಿ ಮಾಡಬೇಕೆಂದು ನಿರೀಕ್ಷಿಸುವುದು ಹಳೇ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಗಮನಿಸಿತು. ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಪತಿ ಮತ್ತು ಪತ್ನಿ ಇಬ್ಬರೂ ಸಮಾನವಾಗಿ ಹೊರಬೇಕು. ಮನೆಯ ಮಹಿಳೆ ಮಾತ್ರ ಮನೆಯ ಜವಾಬ್ದಾರಿಯನ್ನು ಹೊರಬೇಕು ಎಂದು ನಿರೀಕ್ಷಿಸುವ ಹಿಂದಿನ ಕಾಲದ ಮನಸ್ಥಿತಿಯು ಸಕಾರಾತ್ಮಕ ಬದಲಾವಣೆಗೆ ಒಳಗಾಗಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ:  ಮುಂಬೈ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ, ಮೂವರಿಗೆ ಗಾಯ

ವೈವಾಹಿಕ ಸಂಬಂಧವು ಈ ಪ್ರಕರಣದಲ್ಲಿ ಪತ್ನಿ ತನ್ನ ಪೋಷಕರಿಂದ ಪ್ರತ್ಯೇಕಗೊಳ್ಳಲು ಕಾರಣವಾಗಬಾರದು. ಅದೇ ವೇಳೆ ಆಕೆ ತನ್ನ ಪೋಷಕರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಮಾಡಬಾರದು.

ಒಬ್ಬರ ಪೋಷಕರೊಂದಿಗೆ ಸಂಪರ್ಕದಲ್ಲಿರುವುದನ್ನು ಯಾವುದೇ ಕಲ್ಪನೆಯ ಮೂಲಕ ಇತರರಿಗೆ ಮಾನಸಿಕ ಸಂಕಟವನ್ನು ಉಂಟುಮಾಡುತ್ತದೆ ಎಂದು ಅರ್ಥೈಸಲಾಗುವುದಿಲ್ಲ. ನಮ್ಮ ದೃಷ್ಟಿಯಲ್ಲಿ, ಪ್ರತಿವಾದಿಯ ಮೇಲೆ ತನ್ನ ಪೋಷಕರೊಂದಿಗಿನ ಸಂಪರ್ಕವನ್ನು ನಿಲ್ಲಿಸಲು ನಿರ್ಬಂಧಗಳನ್ನು ಹಾಕುವುದು, ವಾಸ್ತವವಾಗಿ, ದೈಹಿಕ ಕ್ರೌರ್ಯದ ಜತೆಗೆ ಮಾನಸಿಕ ಕ್ರೌರ್ಯವೂ ಆಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ