AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಮನೆ ಕೆಲಸದ ಹೊರೆಯನ್ನು ಪತಿ, ಪತ್ನಿ ಸಮಾನವಾಗಿ ಹಂಚಿಕೊಳ್ಳಬೇಕು: ಬಾಂಬೆ ಹೈಕೋರ್ಟ್
ಬಾಂಬೆ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Sep 14, 2023 | 8:56 PM

Share

ಮುಂಬೈ ಸೆಪ್ಟೆಂಬರ್ 14: ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ (Bombay High Court) ಹೇಳಿದೆ. ನ್ಯಾಯಮೂರ್ತಿಗಳಾದ ನಿತಿನ್ ಸಾಂಬ್ರೆ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಸೆಪ್ಟೆಂಬರ್ 6 ರಂದು ತನ್ನ 13 ವರ್ಷದ ವಿವಾಹವನ್ನು ರದ್ದು ಮಾಡುವಂತೆ ಕೋರಿ 35 ವರ್ಷದ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು. ತಮ್ಮ ವಿಚ್ಛೇದಿತ ಪತ್ನಿ ‘ಕ್ರೌರ್ಯ’ ಮಾಡುತ್ತಿದ್ದಾಳೆ ಎಂದು ಅವರು ದೂರಿದ್ದರೂ ಅದನ್ನು ಸಾಬೀತು ಪಡಿಸಲು ಅವರಿಂದ ಸಾಧ್ಯವಾಗಲಿಲ್ಲ, ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ವಿಚ್ಛೇದನ ಕೋರಿ ತನ್ನ ಮನವಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಮಾರ್ಚ್ 2018 ರ ಆದೇಶವನ್ನು ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದಂಪತಿ 2010 ರಲ್ಲಿ ವಿವಾಹವಾಗಿದ್ದರು. ತನ್ನ ಹೆಂಡತಿ ಯಾವಾಗಲೂ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಇರುತ್ತಾಳೆ, ಮನೆಕೆಲಸವನ್ನು ಮಾಡುವುದಿಲ್ಲ ಎಂದು ಗಂಡ ಮನವಿಯಲ್ಲಿ ವಾದಿಸಿದ್ದಾರೆ.

ಕಚೇರಿಯಿಂದ ಬಂದ ನಂತರ ಮನೆಯ ಎಲ್ಲಾ ಕೆಲಸಗಳನ್ನು ಮಾಡಲು ಒತ್ತಾಯಿಸಲಾಯಿತು. ತನ್ನ ಕುಟುಂಬದಲ್ಲಿ ಈ ವಿಷಯ ಹೇಳಿದ್ದಕ್ಕೆ ಆತ ಬೈದಿದ್ದ. ವಿಚ್ಛೇದಿತ ಪತಿ ತನಗೆ ಹಲವು ಬಾರಿ ದೈಹಿಕ ಕಿರುಕುಳ ನೀಡಿದ್ದಾನೆ ಎಂದೂ ಆಕೆ ಹೇಳಿಕೊಂಡಿದ್ದಾರೆ.

ಪೀಠವು ತನ್ನ ಆದೇಶದಲ್ಲಿ, ಪುರುಷ ಮತ್ತು ಮಹಿಳೆ ಇಬ್ಬರೂ ಉದ್ಯೋಗದಲ್ಲಿದ್ದಾರೆ. ಮನೆಯ ಎಲ್ಲಾ ಕೆಲಸಗಳನ್ನು ಹೆಂಡತಿ ಮಾಡಬೇಕೆಂದು ನಿರೀಕ್ಷಿಸುವುದು ಹಳೇ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಗಮನಿಸಿತು. ಆಧುನಿಕ ಸಮಾಜದಲ್ಲಿ ಮನೆಯ ಜವಾಬ್ದಾರಿಯ ಭಾರವನ್ನು ಪತಿ ಮತ್ತು ಪತ್ನಿ ಇಬ್ಬರೂ ಸಮಾನವಾಗಿ ಹೊರಬೇಕು. ಮನೆಯ ಮಹಿಳೆ ಮಾತ್ರ ಮನೆಯ ಜವಾಬ್ದಾರಿಯನ್ನು ಹೊರಬೇಕು ಎಂದು ನಿರೀಕ್ಷಿಸುವ ಹಿಂದಿನ ಕಾಲದ ಮನಸ್ಥಿತಿಯು ಸಕಾರಾತ್ಮಕ ಬದಲಾವಣೆಗೆ ಒಳಗಾಗಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ:  ಮುಂಬೈ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ, ಮೂವರಿಗೆ ಗಾಯ

ವೈವಾಹಿಕ ಸಂಬಂಧವು ಈ ಪ್ರಕರಣದಲ್ಲಿ ಪತ್ನಿ ತನ್ನ ಪೋಷಕರಿಂದ ಪ್ರತ್ಯೇಕಗೊಳ್ಳಲು ಕಾರಣವಾಗಬಾರದು. ಅದೇ ವೇಳೆ ಆಕೆ ತನ್ನ ಪೋಷಕರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಮಾಡಬಾರದು.

ಒಬ್ಬರ ಪೋಷಕರೊಂದಿಗೆ ಸಂಪರ್ಕದಲ್ಲಿರುವುದನ್ನು ಯಾವುದೇ ಕಲ್ಪನೆಯ ಮೂಲಕ ಇತರರಿಗೆ ಮಾನಸಿಕ ಸಂಕಟವನ್ನು ಉಂಟುಮಾಡುತ್ತದೆ ಎಂದು ಅರ್ಥೈಸಲಾಗುವುದಿಲ್ಲ. ನಮ್ಮ ದೃಷ್ಟಿಯಲ್ಲಿ, ಪ್ರತಿವಾದಿಯ ಮೇಲೆ ತನ್ನ ಪೋಷಕರೊಂದಿಗಿನ ಸಂಪರ್ಕವನ್ನು ನಿಲ್ಲಿಸಲು ನಿರ್ಬಂಧಗಳನ್ನು ಹಾಕುವುದು, ವಾಸ್ತವವಾಗಿ, ದೈಹಿಕ ಕ್ರೌರ್ಯದ ಜತೆಗೆ ಮಾನಸಿಕ ಕ್ರೌರ್ಯವೂ ಆಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ